ಪ್ರಧಾನಿ ನರೇಂದ್ರ ಮೋದಿಯವರು ಆಗಸ್ಟ್ 21ರಂದು ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಸೇವೆಗೆ ಚಾಲನೆ ನೀಡಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿಯವರು ಆಗಸ್ಟ್ 21ರಂದು ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ಸೇವೆಗೆ ಚಾಲನೆ ನೀಡಲಿದ್ದಾರೆ.
ಪ್ರತಿ ಜಿಲ್ಲೆಯಲ್ಲಿ ಕನಿಷ್ಠ ಒಂದು ಶಾಖೆ ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ಹೊಂದುವುದರೊಂದಿಗೆ ಗ್ರಾಮೀಣ ಪ್ರದೇಶಗಳಲ್ಲಿ ಹಣಕಾಸು ಸೇವೆಗಳ ಮೇಲೆ ಗಮನಹರಿಸಲಾಗುವುದು ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈಗಾಗಲೇ ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ನ ಎರಡು ಶಾಖೆಗಳು ಕಾರ್ಯನಿರತವಾಗಿದ್ದು, ಇನ್ನುಳಿದಂತೆ 648 ಶಾಖೆಗಳನ್ನು ದೇಶದ ಪ್ರತಿ ಜಿಲ್ಲೆಯಲ್ಲೂ ಲಾಂಚ್ ಮಾಡಲಾಗುವುದು. 'ಉದ್ಯೋಗಿನಿ ಯೋಜನೆ' ಅಡಿಯಲ್ಲಿ 3 ಲಕ್ಷ ಸಾಲ, 90 ಸಾವಿರ ಸಬ್ಸಿಡಿ ಪಡೆಯಿರಿ
1.55 ಲಕ್ಷ ಅಂಚೆ ಕಚೇರಿ
ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ಗ್ರಾಮೀಣ ಪ್ರದೇಶದಲ್ಲಿ ಜನರಿಗೆ ಬ್ಯಾಂಕಿಂಗ್ ಮತ್ತು ಹಣಕಾಸು ಸೇವೆಯನ್ನು ಒದಗಿಸಲು ಸುಮಾರು 1.55 ಲಕ್ಷ ಅಂಚೆ ಕಚೇರಿ ಶಾಖೆಗಳನ್ನು ತಲುಪಲಿದೆ.
ಪೇಮೆಂಟ್ಸ್ ಬ್ಯಾಂಕ್ ಸಂಪರ್ಕ
ಈ ವರ್ಷ ಅಂತ್ಯದ ವೇಳೆಗೆ ಎಲ್ಲಾ 1.55 ಲಕ್ಷ ಅಂಚೆ ಕಛೇರಿಗಳನ್ನು ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ಸೇವೆಗಳೊಂದಿಗೆ ಸಂಪರ್ಕಿಸಲು ಪ್ರಯತ್ನಿಸಲಾಗುವುದು ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಸೌಲಭ್ಯಗಳು
ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ನೊಂದಿಗೆ, ಯಾವುದೇ ಬ್ಯಾಂಕ್ ಖಾತೆಯ ಗ್ರಾಮೀಣ ಪ್ರದೇಶದ ಜನರಿಗೆ ಮೊಬೈಲ್ ಬ್ಯಾಂಕ್ ಮತ್ತು ಹಣದ ವರ್ಗಾವಣೆ ಸೇರಿದಂತೆ ಹಣಕಾಸಿನ ಸೇವೆಗಳನ್ನು ಅಪ್ಲಿಕೇಶನ್ ಸಹಾಯದಿಂದ ಅಥವಾ ಅಂಚೆ ಕಚೇರಿಗಳಿಗೆ ಭೇಟಿ ನೀಡುವ ಮೂಲಕ ಪಡೆಯಬಹುದು.
ಅಂಚೆ ಪಾವತಿ ಬ್ಯಾಂಕಿಯು ಆರ್ಟಿಜಿಎಸ್, ಎನ್ಇಎಫ್ಟಿ, ಐಎಂಪಿಎಸ್ (RTGS, NEFT, IMPS) ವ್ಯವಹಾರಕ್ಕೆ ಅವಕಾಶ ನೀಡಿದೆ. ಇದು ಯಾವುದೇ ಬ್ಯಾಂಕ್ ಖಾತೆಯಿಂದ ಹಣ ವರ್ಗಾವಣೆ ಮಾಡಲು ಮತ್ತು ಸ್ವೀಕರಿಸಲು ಅನುವು ಮಾಡಿಕೊಡುತ್ತದೆ.
ರೂ. 1 ಲಕ್ಷವರೆಗೆ ಠೇವಣಿ
ಏರ್ಟೆಲ್ ಮತ್ತು ಪೇಟಿಎಂ ನಂತರ ಪೇಮೆಂಟ್ ಬ್ಯಾಂಕ್ ಸೇವೆ ಒದಗಿಸುವ ಮೂರನೇ ಸಂಸ್ಥೆ ಭಾರತೀಯ ಅಂಚೆ ಕಚೇರಿ. ಪೇಮೆಂಟ್ ಬ್ಯಾಂಕ್ ಮೂಲಕ ಗ್ರಾಹಕರು ಗರಿಷ್ಠ ರೂ. 1 ಲಕ್ಷವರೆಗೆ ಠೇವಣಿ ಇಡಬಹುದು.
More From GoodReturns

Ugadi 2026: ಯುಗಾದಿ ನಂತರ ಈ ರಾಶಿಯವರಿಗೆ ಹಣವೋ ಹಣ; ನೀವೂ ಇದ್ದೀರಾ ನೋಡಿ

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ



Click it and Unblock the Notifications