ಸಹಕಾರಿ ಬ್ಯಾಂಕ್ ಗಳಿಂದ ರೈತರು ಪಡೆದಿರುವ ಸಾಲ ಮನ್ನಾ ಮಾಡುವುದಕ್ಕೆ ಸಚಿವ ಸಂಪುಟ ಅಸ್ತು ಎಂದಿದೆ. ಸಾಲ ಮನ್ನಾ ಪ್ರಯೋಜನ ಯಾರಿಗೆ ಸಿಗಲಿದೆ? ಇದರ ಷರತ್ತುಗಳೇನು? ಎಂಬುದನ್ನು ಮುಖ್ಯಮಂತ್ರಿ ಕುಮಾರಸ್ವಾಮಿ ತಿಳಿಸಿದ್ದಾರೆ.
ರಾಜ್ಯ ಸರ್ಕಾರ ರೈತರಿಗೆ ಸಿಹಿಸುದ್ದಿ ನೀಡಿದೆ. ಸಹಕಾರಿ ಬ್ಯಾಂಕ್ ಗಳಿಂದ ರೈತರು ಪಡೆದಿರುವ ಸಾಲ ಮನ್ನಾ ಮಾಡುವುದಕ್ಕೆ ಸಚಿವ ಸಂಪುಟ ಅಸ್ತು ಎಂದಿದೆ. ರೈತರ ಸಾಲ ಮನ್ನಾ ಪ್ರಯೋಜನ ಯಾರಿಗೆ ಸಿಗಲಿದೆ? ಇದರ ಷರತ್ತುಗಳೇನು? ಎಂಬುದನ್ನು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.
1 ಲಕ್ಷದವರೆಗೆ ಸಾಲ ಮನ್ನಾ
ರೂ. 9448 ಕೋಟಿ ವೆಚ್ಚ
ಸಾಲ ಮನ್ನಾ ಯೋಜನೆಯಡಿ ಸುಮಾರು 20.38 ಲಕ್ಷ ರೈತರಿಗೆ ಪ್ರಯೋಜನವಾಗಲಿದ್ದು, ಸರ್ಕಾರದ ಬೊಕ್ಕಸಕ್ಕೆ ರೂ. 9448 ಕೋಟಿ ಹೊರೆ ಬೀಳಲಿದೆ.
ಷರತ್ತುಗಳೇನು?
ಒಂದು ಕುಟುಂಬದ ಗರಿಷ್ಠ ರೂ. 1 ಲಕ್ಷವರೆಗೆ ಮಾತ್ರ ಸಾಲ ಮನ್ನಾ ಎಂಬ ಷರತ್ತು ಸಡಿಲಗೊಳಿಸಲಾಗಿದ್ದು, ಶೀಘ್ರದಲ್ಲೇ ಸಾಲ ಮನ್ನಾ ಯೋಜನೆ ಕಾರ್ಯನಿರತವಾಗಲಿದೆ ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದಾರೆ.
ಸಹಕಾರಿ ಬ್ಯಾಂಖ್/ಸಂಘಗಳು (ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು, ಲ್ಯಾಂಪ್ಸ್, ಡಿಸಿಸಿ ಬ್ಯಾಂಕ್ ಮತ್ತು ಪಿಕಾರ್ಡ್ ಬ್ಯಾಂಕ್) ವಿತರಿಸಿದ ಅಲ್ಪಾವಧಿ ಬೆಳೆ ಸಾಲ ಜುಲೈ 10, 2018ಕ್ಕೆ ಹೊರ ಬಾಕಿ ಸಾಲಕ್ಕೆ ಮಾತ್ರ ಅನ್ವಯ ಆಗುತ್ತದೆ.
ಈ ಅವಧಿಯೊಳಗೆ ಸಾಲ ಪಡೆದು ರೈತರು ಮೃತ ಪಟ್ಟಿದ್ದಲ್ಲಿ ಆ ರೈತರ ವಾರಸುದಾರರಿಗೆ ಈ ಸೌಲಭ್ಯ ಸಿಗುತ್ತದೆ.
ರೈತರ ಖಾತೆಗೆ ಜಮಾ
ಜುಲೈ 10, 2018ಕ್ಕೆ ಹೊರಬಾಕಿ ಇರುವ ಮೊತ್ತವನ್ನು ರೈತರ ಉಳಿತಾಯ ಖಾತೆಗೆ ಜಮಾ ಮಾಡಲಾಗುತ್ತದೆ. ಅಂದರೆ ಸಾಲ ಮನ್ನಾ ಮಾಡಲಾಗುವ ಮೊತ್ತವನ್ನು ಡಿಬಿಟಿ (ಡೈರೆಕ್ಟ್ ಬೆನಿಫಿಟ್ ಟ್ರಾನ್ಸ್ ಫರ್) ಮೂಲಕ ರೈತರ ಉಳಿತಾಯ ಖಾತೆಗೆ ಬಿಡುಗಡೆ.
ರೈತರು ಸಾಲ ಮರುಪಾವತಿ ಮಾಡಿದ್ದರೆ ಸಾಲದ ಮೊತ್ತವನ್ನು ಖಾತೆಗೆ ಜಮಾ ಮಾಡಲಾಗುತ್ತದೆ.
ರಾಷ್ಟ್ರೀಕೃತ ಬ್ಯಾಂಕುಗಳ ಸಾಲ ಮನ್ನಾ?
ಈ ಪ್ರಶ್ನೆ ಕೂಡ ಅನೇಕರಲ್ಲಿ ಬರುವುದುಂಟು. ರಾಷ್ಟ್ರೀಕೃತ ಬ್ಯಾಂಕುಗಳ ಸಾಲ ಮನ್ನಾ ಮಾಡುವ ಬಗೆಗಿನ ತೀರ್ಮಾನವನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗುವುದು. ಮುಂಬರುವ ಜುಲೈ-ಆಗಸ್ಟ್ ಒಳಗೆ ರಾಷ್ಟ್ರೀಕೃತ ಬ್ಯಾಂಕ್ ಸಾಲ ಮನ್ನಾ ಮಾಡುವುದರ ಬಗ್ಗೆ ರೂಪುರೇಷೆ ತಯಾರಿಸಲಾಗುತ್ತಿದೆ ಎಂದು ಎಚ್ ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಯೋಜನೆ ಯಾರಿಗೆ ಅನ್ವಯವಾಗಲ್ಲ
- ಕಳೆದ 3 ವರ್ಷದ ಅವಧಿಯಲ್ಲಿ ಯಾವುದಾದರೂ ಹಣಕಾಸು ವರ್ಷದಲ್ಲಿ ಆದಾಯ ತೆರಿಗೆ ಪಾವತಿಸಿದ್ದಲ್ಲಿ ಅಂತಹ ರೈತರಿಗೆ ಸಾಲ ಮನ್ನಾ ಪ್ರಯೋಜನ ಲಭ್ಯವಿರುವುದಿಲ್ಲ.
- ಸಾಲ ಪಡೆದ ರೈತರು ಸರ್ಕಾರಿ, ಸಹಕಾರಿ ಅಥವಾ ಇನ್ನಿತರೆ ಕ್ಷೇತ್ರದ ನೌಕರರಾಗಿ ತಿಂಗಳಿಗೆ 20,000ಕ್ಕಿಂತ ಹೆಚ್ಚಿನ ವೇತನ ಅಥವಾ ಪಿಂಚಣಿ ಪಡೆಯುತ್ತಿದ್ದರೆ ಈ ಯೋಜನೆ ಅನ್ವಯ ಆಗಲ್ಲ.
- ಕೃಷಿ ಉತ್ಪನ್ನಗಳನ್ನು ಅಡ ಇಟ್ಟು ನೀಡುವ ಸಾಲ, ಚಿನ್ನಾಭರಣ ಅಡವಿಟ್ಟು ನೀಡುವ ಸಾಲ, ವಾಹನ ಖರೀದಿ ಸಾಲ, ಪಶು ಭಾಗ್ಯ ಯೋಜನೆ ಅಡಿ ಪಶು ಆಹಾರ ಖರೀದಿಗೆ ನೀಡುವ ಸಾಲ, ಮೀನುಗಾರಿಕೆ ಉದ್ದೇಶಗಳಿಗೆ ನೀಡುವ ಸಾಲ, ಸ್ವಸಹಾಯ ಗುಂಪುಗಳಿಗೆ ಮತ್ತು ಜಂಟಿ ಬಾಧ್ಯತಾ ಗುಂಪುಗಳಿಗೆ ನೀಡಿದ್ದ ಸಾಲಗಳಿಗೆ ಈ ಯೋಜನೆ ಅನ್ವಯಿಸುವುದಿಲ್ಲ.
More From GoodReturns

Karnataka Budget 2026 Live Updates: ಕರ್ನಾಟಕ ಬಜೆಟ್ನ ಪ್ರಮುಖ ಘೋಷಣೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

Karnataka Budget 2026: 4.49 ಲಕ್ಷ ಕೋಟಿಯ ದಾಖಲೆ ಬಜೆಟ್…ಈ ಬಜೆಟ್ನಲ್ಲಿ ಜನಸಾಮಾನ್ಯರಿಗೆ ಸಿಕ್ಕ ಕೊಡುಗೆ ಏನು?

ಕರ್ನಾಟಕ ಬಜೆಟ್ 2026: ಕೃಷಿ, ಶಿಕ್ಷಣ, ಸಾರಿಗೆ, ವೈದ್ಯಕೀಯ ಕ್ಷೇತ್ರಗಳ ನಿರೀಕ್ಷೆ ಏನು? ಬಜೆಟ್ ಮೇಲೆ ಭಾರಿ ಬೇಡಿಕೆ

Karnataka Budget 2026–27: ಬೆಂಗಳೂರು ಮೂಲಸೌಕರ್ಯ ಮತ್ತು ಕಲ್ಯಾಣ ಯೋಜನೆಗಳಿಗೆ ಒತ್ತು ಸಾಧ್ಯತೆ!

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Karnataka Highway: ರಾಜ್ಯದ ಈ ಭಾಗಕ್ಕೆ ಹೈವೇ ಡಿಮ್ಯಾಂಡ್…ಕೇಂದ್ರಕ್ಕೆ ಮನವಿ ಮಾಡಿದ ಸಂಸದೆ ಪ್ರಭಾ ಮಲ್ಲಿಕಾರ್ಜುನ್!

Karnataka Weather: ರಾಜ್ಯದ ಜನರಿಗೆ ಬಿಸಿಲಿನ ಕಂಟಕ! ಹವಾಮಾನ ಇಲಾಖೆಯಿಂದ ಎಚ್ಚರಿಕೆ

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Rain-Summer: ರಾಜ್ಯದಲ್ಲಿ ಮತ್ತೆ ವರುಣನ ಅಬ್ಬರ ಶುರು! ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್



Click it and Unblock the Notifications