ದೇಶದ ಪ್ರಮುಖ ಆರೋಗ್ಯ ಯೋಜನೆ ಆಗಿರುವ ಆಯುಷ್ಮಾನ್ ಭಾರತ್ ಯೋಜನೆ ತನ್ನದೇಯಾದ ದತ್ತಾಂಶ ಗೌಪ್ಯತೆ ನೀತಿ ಹೊಂದಿರುವ ದೇಶದ ಮೊದಲ ಆರೋಗ್ಯ ಕಾರ್ಯಕ್ರಮವಾಗಿದೆ.
ದೇಶದ ಪ್ರಮುಖ ಆರೋಗ್ಯ ಯೋಜನೆ ಆಗಿರುವ ಆಯುಷ್ಮಾನ್ ಭಾರತ್ ಯೋಜನೆ ತನ್ನದೇಯಾದ ದತ್ತಾಂಶ ಗೌಪ್ಯತೆ ನೀತಿ ಹೊಂದಿರುವ ದೇಶದ ಮೊದಲ ಆರೋಗ್ಯ ಕಾರ್ಯಕ್ರಮವಾಗಿದೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷೆಯ ಪ್ರಧಾನ ಮಂತ್ರಿ ಜನ ಆರೋಗ್ಯ ಅಭಿಯಾನವನ್ನು ಆಯುಷ್ಮಾನ್ ಭಾರತ್ ಅಥವಾ ಮೋದಿಕೇರ್ ಎಂಬುದಾಗಿ ಕರೆಯುತ್ತಾರೆ.
ಆಯುಷ್ಮಾನ್ ಭಾರತ್ ಯೋಜನೆ ಪಂಡಿತ್ ದೀನ ದಯಾಳ್ ಉಪಾಧ್ಯಾಯ ಅವರ ಜನ್ಮದಿನ ಸೆಪ್ಟಂಬರ್ 25ರಂದು ಕಾರ್ಯರೂಪಕ್ಕೆ ಬರಲಿದೆ. ಆಯುಷ್ಮಾನ್ ಭಾರತ್ ಯೋಜನೆ: 5 ಲಕ್ಷ ವಿಮಾ ಸೌಲಭ್ಯ ಪಡೆಯಿರಿ
ಏನಿದು ಆಯುಷ್ಮಾನ್ ಭಾರತ್ ಯೋಜನೆ?
ರಾಷ್ಟ್ರೀಯ ಆರೋಗ್ಯ ರಕ್ಷಣಾ ಮಿಷನ್ (ಎಬಿ-ಎನ್ಎಚ್ ಪಿಎಂ) ಭಾಗವಾಗಿರುವ ಆಯುಷ್ಮಾನ್ ಭಾರತ್ ಯೋಜನೆಯು 10 ಕೋಟಿ ಕುಟುಂಬಗಳ 50 ಕೋಟಿ ಜನರಿಗೆ ಆರೋಗ್ಯ ವಿಮೆ ಸೌಲಭ್ಯ ಒದಗಿಸುವ ಗುರಿ ಹೊಂದಿದೆ. ಪ್ರಧಾನ ಮಂತ್ರಿ ಆರೋಗ್ಯ ಅಭಿಯಾನ ಮೊದಲ ಹಂತದಲ್ಲಿ ತ್ರಿಪುರ, ಛತ್ತೀಸ್ಗಢ, ಅರುಣಾಚಲ ಪ್ರದೇಶ, ಪಶ್ಚಿಮ ಬಂಗಾಳ, ಚಂಡೀಗಢ, ಆಂಧ್ರಪ್ರದೇಶ, ಮಧ್ಯಪ್ರದೇಶ, ಗುಜರಾತ್ ಮತ್ತು ಹಿಮಾಚಲ ಪ್ರದೇಶ ರಾಜ್ಯಗಳಲ್ಲಿ 70 ರಿಂದ 80 ಜಿಲ್ಲೆಗಳಲ್ಲಿ ಆರಂಭವಾಗಲಿದೆ.
ಸೆಪ್ಟಂಬರ್ 25ರಿಂದ ಯೋಜನೆ ಆರಂಭ
ಆಯುಷ್ಮಾನ್ ಭಾರತ್ ಯೋಜನೆ ಪಂಡಿತ್ ದೀನ್ ದಯಾಳ ಉಪಾಧ್ಯಾಯರ ಜನ್ಮದಿನವಾದ ಸೆಪ್ಟಂಬರ್ 25ರಿಂದ ಜಾರಿಯಾಗಲಿದೆ. ಅಲ್ಲಿಯವರೆಗೆ ಬೇಕಾಗುವ ದಾಖಲಾತಿ ಹಾಗು ಇನ್ನಿತರ ಮಾಹಿತಿಯನ್ನು ತಿಳಿದುಕೊಂಡಿರುವುದು ಉತ್ತಮ.
ಆಯುಷ್ಮಾನ್ ಭಾರತ್ ಯೋಜನೆ ಸೌಲಭ್ಯಗಳು
ಫಲಾನುಭವಿಗಳು ಸಾಮಾನ್ಯ ದರ್ಜಯ ವಾರ್ಡ್ ಗಳಲ್ಲಿ ಶುಶ್ರೂಷೆ ಪಡೆಯಲಿದ್ದಾರೆ. ನೋಂದಣಿ ಶುಲ್ಕ, ವೈದ್ಯರ ಶುಲ್ಕ, ಶಸ್ತ್ರ ಚಿಕಿತ್ಸೆ, ಔಷಧಿಗಳು, ರೋಗಪತ್ತೆ ಪರೀಕ್ಷೆ (ಸ್ಕ್ಯಾನ್, ಎಕ್ಸರೇ) ವಿಮೆಯಡಿ ಸಿಗಲಿದೆ. ಶಸ್ತ್ರಚಿಕಿತ್ಸೆ ಹಾಗೂ ಇತರೆ ವೈದ್ಯಕೀಯ ಚಿಕಿತ್ಸಾ ಸೇವೆ ಸಿಗಲಿದ್ದು, ವಿಮೆ ಪಡೆದ ದಿನದಿಂದಲೇ ಎಲ್ಲಾ ಕಾಯಿಲೆಗಳಿಗೂ ಚಿಕಿತ್ಸೆ ಸಿಗಲಿದೆ. ಧೀರ್ಘಕಾಲಿನ ರೋಗಗಳು, ಹೃದಯದ ಬೈಪಾಸ್, ಸರ್ಜರಿ
ಮಂಡಿ ಚಿಪ್ಪು ಅಳವಡಿಕೆ ಕಾಯಿಲೆಗಳಿಗೂ ಚಿಕಿತ್ಸೆ ಸಿಗಲಿದೆ.
ಹೆಚ್ಚಿನ ಮಾಹಿತಿ/ನೋಂದಾಯಿಸಲು
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ನೀಡಲಾಗಿರುವ ವೆಬ್ಸೈಟ್ ಲಿಂಕ್ ಮೇಲೆ ಕ್ಲಿಕ್ ಮಾಡಿ. ಇನ್ನೂ ಹೆಚ್ಚ್ಇನ ಮಾಹಿತಿಗಳನ್ನು ಸೇರಿಸಲಾಗಿಲ್ಲ. https://abnhpm.gov.in/coming-soon and https://abnhpm.gov.in/
ಅಧಿಕೃತ ಅಂತರ್ಜಾಲ ತಾಣವನ್ನು ಸಂಪರ್ಕಿಸಿ "ಆನ್ಲೈನ್ ದಾಖಲಾತಿ" ಕೊಂಡಿಯನ್ನು ("Online Registration") ಕ್ಲಿಕ್ಕಿಸಿ. ಅಗತ್ಯವಿರುವ ಎಲ್ಲಾ ಮಾಹಿತಿಗಳನ್ನು ತಪ್ಪಿಲ್ಲದೇ ದಾಖಲಿಸಿ ಪೂರ್ಣವಾದ ಬಳಿಕ ಅರ್ಜಿಯನ್ನು ಸಲ್ಲಿಸಿ (Submit). ಈಗ ಅಂತರ್ಜಾಲ ತಾಣದಲ್ಲಿ ರಚನೆಗೊಂಡ ಅರ್ಜಿ ಸಂಖ್ಯೆ ಅಥವಾ ಉಲ್ಲೇಖ ಸಂಖ್ಯೆಯನ್ನು ತಪ್ಪಿಲ್ಲದೆ ಬರೆದಿಡಿ .
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ



Click it and Unblock the Notifications