ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಸೇವೆಗೆ ಇಂದು ನವ ದೆಹಲಿಯಲ್ಲಿ ಚಾಲನೆ ನೀಡಲಿದ್ದಾರೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಸೇವೆಗೆ ಇಂದು ನವ ದೆಹಲಿಯಲ್ಲಿ ಚಾಲನೆ ನೀಡಲಿದ್ದಾರೆ. ಗ್ರಾಮೀಣ ಭಾಗದ ಜನರಿಗೆ ಬ್ಯಾಂಕಿಂಗ್ ಹಾಗು ಹಣಕಾಸು ಸೇವೆಗಳನ್ನು ನೀಡುವುದಕ್ಕೆ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಪ್ರಾಮುಖ್ಯತೆ ನೀಡಲಿದೆ.
ಡಿಸೆಂಬರ್ 31, 2018 ರ ವೇಳೆಗೆ ದೇಶದಲ್ಲಿನ 1.55 ಲಕ್ಷ ಅಂಚೆ ಕಚೇರಿಗಳು ಇಂಡಿಯ ಪೋಸ್ಟ್ ಪೇಮೆಂಟ್ ಬ್ಯಾಂಕ್ (ಐಪಿಪಿಬಿ) ವ್ಯವಸ್ಥೆಯೊಂದಿಗೆ ಲಿಂಕ್ ಮಾಡಬೇಕು ಸರ್ಕಾರ ತಿಳಿಸಿದೆ.
ಅಂಚೆ ಇಲಾಖೆಯ ಅಡಿ ಕಾರ್ಯ
ಮೋದಿಯವರು ಇಂದು ಇಂಡಿಯ ಪೋಸ್ಟ್ ಪೇಮೆಂಟ್ ಬ್ಯಾಂಕ್ ಸೇವೆಗೆ ಚಾಲನೆ ನೀಡಲಿದ್ದು, ದೇಶದ 650 ಶಾಖೆಗಳಲ್ಲಿನ 3250 ಪ್ರವೇಶ ಪಾಯಿಂಟ್ ಗಳಲ್ಲಿ ಚಾಲನೆ ಸಿಗಲಿದೆ. ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ವ್ಯವಸ್ಥೆ ಅಂಚೆ ಇಲಾಖೆ, ಸಂವಹನ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸಲಿದೆ.
ಬಡ್ಡಿದರ, ಠೇವಣಿ
ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ಉಳಿತಾಯ ಖಾತೆಗಳ ಮೇಲೆ ಶೇ. ೪ರಷ್ಟು ಬಡ್ಡಿದರ ನೀಡಲಿದೆ. ಒಬ್ಬ ವ್ಯಕ್ತಿ ಗರಿಷ್ಠ 1 ಲಕ್ಷದವರೆಗೆ ಠೇವಣಿ ಇಡಬಹುದು.
ಐಪಿಪಿಬಿ ಸೌಲಭ್ಯಗಳು
ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ನೊಂದಿಗೆ, ಯಾವುದೇ ಬ್ಯಾಂಕ್ ಖಾತೆಯ ಗ್ರಾಮೀಣ ಪ್ರದೇಶದ ಜನರಿಗೆ ಮೊಬೈಲ್ ಬ್ಯಾಂಕ್ ಮತ್ತು ಹಣದ ವರ್ಗಾವಣೆ ಸೇರಿದಂತೆ ಹಣಕಾಸಿನ ಸೇವೆಗಳನ್ನು ಅಪ್ಲಿಕೇಶನ್ ಸಹಾಯದಿಂದ ಅಥವಾ ಅಂಚೆ ಕಚೇರಿಗಳಿಗೆ ಭೇಟಿ ನೀಡುವ ಮೂಲಕ ಪಡೆಯಬಹುದು. ಅಂಚೆ ಪಾವತಿ ಬ್ಯಾಂಕಿಯು ಆರ್ಟಿಜಿಎಸ್, ಎನ್ಇಎಫ್ಟಿ, ಐಎಂಪಿಎಸ್ (RTGS, NEFT, IMPS) ವ್ಯವಹಾರಕ್ಕೆ ಅವಕಾಶ ನೀಡಿದೆ. ಇದು ಯಾವುದೇ ಬ್ಯಾಂಕ್ ಖಾತೆಯಿಂದ ಹಣ ವರ್ಗಾವಣೆ ಮಾಡಲು ಮತ್ತು ಸ್ವೀಕರಿಸಲು ಅನುವು ಮಾಡಿಕೊಡುತ್ತದೆ.
ಹಣ ವರ್ಗಾವಣೆ, ಬಿಲ್, ಯುಟಿಲಿಟಿ ಪೇಮೆಂಟ್ಸ್, ಮರ್ಚಂಟ್ ಪೇಮೆಂಟ್ಸ್ ಇತ್ಯಾದಿ ಸೇವೆ ಒದಗಿಸಲಿದೆ.
1.55 ಲಕ್ಷ ಅಂಚೆ ಕಚೇರಿ
ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ಗ್ರಾಮೀಣ ಪ್ರದೇಶದಲ್ಲಿ ಜನರಿಗೆ ಬ್ಯಾಂಕಿಂಗ್ ಮತ್ತು ಹಣಕಾಸು ಸೇವೆಯನ್ನು ಒದಗಿಸಲು ಸುಮಾರು 1.55 ಲಕ್ಷ ಅಂಚೆ ಕಚೇರಿ ಶಾಖೆಗಳನ್ನು ತಲುಪಲಿದೆ. ಈ ವರ್ಷ ಅಂತ್ಯದ ವೇಳೆಗೆ ಎಲ್ಲಾ 1.55 ಲಕ್ಷ ಅಂಚೆ ಕಛೇರಿಗಳನ್ನು ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ಸೇವೆಗಳೊಂದಿಗೆ ಸಂಪರ್ಕಿಸಲಾಗುವುದು ಎಂದು ಹೇಳಿದೆ.
More From GoodReturns

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Bank Holidays: ಮಾರ್ಚ್ನಲ್ಲಿ ಬ್ಯಾಂಕ್ಗಳಿಗೆ 18 ದಿನ ರಜೆ! ಗ್ರಾಹಕರೇ ಇಲ್ಲಿ ಗಮನಿಸಿ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ



Click it and Unblock the Notifications