ಗಣೇಶ ಚತುರ್ಥಿ ಹಬ್ಬದ ಅಂಗವಾಗಿ ಪತಂಜಲಿ ಸಂಸ್ಥೆಯ ರಾಯಬಾರಿ ಯೋಗ ಗುರು ಬಾಬಾ ರಮದೇವ್ ಹಲವು ಉತ್ಪನ್ನಗಳನ್ನು ಮಾರುಕಟ್ಟೆಗೆ ಬಿಡುಗಡೆಗೊಳಿಸಿದ್ದಾರೆ.
ಗಣೇಶ ಚತುರ್ಥಿ ಹಬ್ಬದ ಅಂಗವಾಗಿ ಪತಂಜಲಿ ಸಂಸ್ಥೆಯ ರಾಯಬಾರಿ ಯೋಗ ಗುರು ಬಾಬಾ ರಮದೇವ್ ಹಲವು ಉತ್ಪನ್ನಗಳನ್ನು ಮಾರುಕಟ್ಟೆಗೆ ಬಿಡುಗಡೆಗೊಳಿಸಿದ್ದಾರೆ.
ದೇಶಿ ಉತ್ಪನ್ನಗಳಿಗೆ ಹೆಚ್ಚು ಪ್ರಾಮುಖ್ಯತೆ ನೀಡುತ್ತಿರುವ ಪತಂಜಲಿ ವೇಗವಾಗಿ ಬೆಳೆಯುತ್ತಿರುವ (ಎಫ್ಎಂಸಿಜಿ) ಸಂಸ್ಥೆಯಾಗಿ ಹೊರಹೊಮ್ಮಿದೆ. ಆಯುಷ್ಮಾನ್ ಭಾರತ್ ಯೋಜನೆ: 5 ಲಕ್ಷ ವಿಮಾ ಸೌಲಭ್ಯ ಯಾರಿಗೆ ಸಿಗಲಿದೆ, ನೋಂದಣಿ ಹೇಗೆ?
ಪತಂಜಲಿ ನೂತನ ಉತ್ಪನ್ನಗಳು
ಯೋಗ ಗುರು ರಾಮದೇವ್ ಗಣೇಶ ಚತುರ್ಥಿ ಪ್ರಯುಕ್ತ ಪತಂಜಲಿ ಬ್ರ್ಯಾಂಡ್ ಹಸುವಿನ ಹಾಲು, ತುಪ್ಪ, ಪನ್ನೀರ್, ಮಜ್ಜಿಗೆ ಸೇರಿದಂತೆ ಹಲವು ಉತ್ಪನ್ನಗಳನ್ನು ಮೊದಲ ಹಂತದಲ್ಲಿ ದೆಹಲಿ-ಎನ್ಸಿಆರ್, ಮುಂಬೈ, ಪುಣೆ, ರಾಜಸ್ಥಾನ್ ಮತ್ತು ಇತರ ಕಡೆಗಳಲ್ಲಿ ಬಿಡುಗಡೆಯಾಗಿದೆ. 2019-20ನೇ ಸಾಲಿನ ಹಣಕಾಸು ವರ್ಷದಲ್ಲಿ ಸಂಸ್ಥೆ ಪ್ರತಿದಿನ ಹತ್ತು ಲಕ್ಷ ಲೀಟರ್ ಹಾಲು ಉತ್ಪಾದನೆ ಮಾಡುವ ನಿರೀಕ್ಷೆ ಇದೆ. ಇದರೊಂದಿಗೆ ತರಕಾರಿ, ಪತಂಜಲಿ ಮಿನರಲ್ ವಾಟರ್ ಕೂಡ ಮಾರುಕಟ್ಟೆಗೆ ಬಿಡುಗಡೆಯಾಗಿದೆ.
ಬಾಬಾ ರಾಮದೇವ್ ಏನೆಂದರು?
ಸಮಾರಂಭದಲ್ಲಿ ಮಾತನಾಡಿದ ರಾಮದೇವ್, ಪತಂಜಲಿ ಉತ್ಪನ್ನಗಳು ಶೇ. 100 ರಷ್ಟು ಪರಿಶುದ್ಧವಾಗಿದ್ದು, ಪತಂಜಲಿ ಉತ್ಪನ್ನಗಳು ರುಚಿಗೂ ಕೂಡ ಹೆಸರುವಾಸಿಯಾಗಿವೆ. ಗ್ರಾಹಕರ ಬೇಡಿಕೆ ಮೇರೆಗೆ ಮುಂದಿನ ದಿನಗಳಲ್ಲಿ ಉತ್ಪಾದನೆಯ ಪ್ರಮಾಣ ಹೆಚ್ಚಿಸಲಾಗುವುದು ಎಂದಿದ್ದಾರೆ. ಸದ್ಯ 10 ಲಕ್ಷ ಲೀಟರ್ ಗುರಿಯಿರುವ ಪತಂಜಲಿ ಹಾಲಿನ ಉತ್ಪಾದನೆಯ ಪ್ರಮಾಣ ಮುಂದಿನ ದಿನಗಳಲ್ಲಿ 40 ಲಕ್ಷ ಲೀಟರ್ ಗೆ ಏರಿಕೆ ಮಾಡಲಾಗುವುದು ಎಂದರು.
ಪತಂಜಲಿ ಸಾದನೆ
ದೇಶದ ಎರಡು ಸಾವಿರ ಗ್ರಾಮಗಳ 1 ಲಕ್ಷಕ್ಕೂ ಹೆಚ್ಚು ರೈತರಿಂದ ಶುದ್ದ ಹಾಲನ್ನು ನೇರವಾಗಿ ಖರೀದಿ ಮಾಡಲಾಗುವುದು ಎಂದು ಯೋಗಗುರು ತಿಳಿಸಿದ್ದಾರೆ. ಪತಂಜಲಿ ಉತ್ಪನ್ನಗಳನ್ನ ಗ್ರಾಹಕರ ಮನೆ ಮನೆಗೆ ತಲುಪಿಸುವಲ್ಲಿ ದೇಶದ 56,000 ಮಾರಾಟಗಾರರು ಮತ್ತು ರೀಟೈಲ್ ಉದ್ದಿಮೆದಾರರು ಸಫಲರಾಗಿದ್ದಾರೆ ಎಂದಿದ್ದಾರೆ. ರೋಸ್ ಮಿಲ್ಕ್ ಮತ್ತು ವಸ್ತ್ರ ಭಂಡಾರ ತಯಾರಿಕಾ ಘಟಕಗಳನ್ನು ಸ್ಥಾಪಿಸಲು ಪತಂಜಲಿ ಮುಂದಾಗಿದೆ.
More From GoodReturns

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!



Click it and Unblock the Notifications