ಸಣ್ಣ ಉಳಿತಾಯ ಯೋಜನೆ ಹೂಡಿಕೆದಾರರಿಗೆ ಸರ್ಕಾರ ಸಿಹಿಸುದ್ದಿ ನೀಡಿದೆ. ಸರ್ಕಾರವು ಮೂರನೆಯ ತ್ರೈಮಾಸಿಕದಲ್ಲಿ (ಅಕ್ಟೋಬರ್ 1 ರಿಂದ ಡಿಸೆಂಬರ್ 31 ರ ವರೆಗೆ) ಹಲವಾರು ಸಣ್ಣ ಉಳಿತಾಯ ಯೋಜನೆಗಳ ಬಡ್ಡಿದರಗಳನ್ನು 40 ಬಿಪಿಎಸ್ ಗಳಷ್ಟು ಏರಿಸಿದೆ.
ಸಣ್ಣ ಉಳಿತಾಯ ಯೋಜನೆ ಹೂಡಿಕೆದಾರರಿಗೆ ಸರ್ಕಾರ ಸಿಹಿಸುದ್ದಿ ನೀಡಿದೆ. ಸರ್ಕಾರವು ಮೂರನೆಯ ತ್ರೈಮಾಸಿಕದಲ್ಲಿ (ಅಕ್ಟೋಬರ್ 1 ರಿಂದ ಡಿಸೆಂಬರ್ 31 ರ ವರೆಗೆ) ಹಲವಾರು ಸಣ್ಣ ಉಳಿತಾಯ ಯೋಜನೆಗಳ ಬಡ್ಡಿದರಗಳನ್ನು 40 ಬಿಪಿಎಸ್ ಗಳಷ್ಟು ಏರಿಸಿದೆ. ಈ ಯೋಜನೆಗಳಲ್ಲಿ ಪಬ್ಲಿಕ್ ಪ್ರಾವಿಡೆಂಟ್ ಫಂಡ್ (ಪಿಪಿಎಫ್), ಸುಕಾನ್ಯಾ ಸಮೃದ್ಧಿ ಯೋಜನೆ, ರಾಷ್ಟ್ರೀಯ ಉಳಿತಾಯ ಪ್ರಮಾಣಪತ್ರ (ಎನ್ಎಸ್ಸಿ) ಮತ್ತು ಪೋಸ್ಟ್ ಆಫೀಸ್ ಅವಧಿ ಠೇವಣಿಗಳು ಸೇರಿವೆ.
ಹಿಂದಿನ ಎರಡು ತ್ರೈಮಾಸಿಕಗಳಲ್ಲಿ ದರಗಳು ಬದಲಾಗಿರಲಿಲ್ಲ. ಸ್ಥಿರ ಆದಾಯದ ಹೂಡಿಕೆದಾರರಿಗೆ ಇದು ಖುಷಿಯ ವಿಷಯವಾಗಿದೆ. ಜನವರಿ 2018, ತ್ರೈಮಾಸಿಕದಲ್ಲಿ ಸರ್ಕಾರ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿದರಗಳನ್ನು ಕಡಿಮೆ ಮಾಡಿತು. ಸುಕನ್ಯಾ ಸಮೃದ್ಧಿ ಯೋಜನೆ: ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ..
ಬಡ್ಡಿದರ ಹೆಚ್ಚಳದ ಪ್ರಮಾಣ
ಸೆಪ್ಟೆಂಬರ್ 19 ರಂದು ಹಣಕಾಸು ಸಚಿವಾಲಯ ಹೊರಡಿಸಿದ ಆದೇಶದ ಪ್ರಕಾರ, ವಿವಿಧ ಸಣ್ಣ ಉಳಿತಾಯ ಯೋಜನೆಗಳ ಬಡ್ಡಿದರಗಳು 30 ಬೇಸಿಕ್ ಪಾಯಿಂಟ್ ಮತ್ತು 40 ಬೇಸಿಸ್ ಪಾಯಿಂಟ್ ಗಳ ನಡುವೆ ಹೆಚ್ಚಿಸಲಾಗಿದೆ. (ಒಂದು ಶೇಕಡಾವಾರು ಪಾಯಿಂಟ್ 100 ಬೇಸಿಸ್ ಪಾಯಿಂಟ್ ಗಳಿಗೆ ಸಮಾನವಾಗಿದೆ.)
30/ 40 ಬೇಸಿಸ್ ಪಾಯಿಂಟ್ ಏರಿಕೆ
ಒಂದು ವರ್ಷ, ಎರಡು ವರ್ಷ ಮತ್ತು ಮೂರು ವರ್ಷಗಳ ಸಮಯದ ಠೇವಣಿ ಬಡ್ಡಿಯನ್ನು 30 ಬೇಸಿಸ್ ಪಾಯಿಂಟ್ ಗಳಷ್ಟು ಹೆಚ್ಚಿಸಲಾಗಿದೆ.
ಐದು ವರ್ಷಗಳ ಸಮಯದ ಠೇವಣಿ, ಸುಕಾನ್ಯಾ ಸಮೃದ್ಧಿ ಯೋಜನೆ ಮತ್ತು ಪಿಪಿಎಫ್ ನಂತಹ ಇತರ ಯೋಜನೆಗಳ ಬಡ್ಡಿಯನ್ನು 40 ಬೇಸಿಸ್ ಪಾಯಿಂಟ್ ಗಳಷ್ಟು ಹೆಚ್ಚಾಗಿದೆ.
ಪಿಪಿಎಫ್, ಸುಕನ್ಯಾ, ಎನ್ಪಿಎಸ್, ಹಿರಿಯ ನಾಗರಿಕರ ಬಡ್ಡಿದರ
ಪಿಪಿಎಫ್ ಮತ್ತು ಎನ್ಎಸ್ಸಿ ಯೋಜನೆಗಳು ಶೇ. 8ರಷ್ಟು ಬಡ್ಡಿದರ ಗಳಿಸಲಿದ್ದು, ಸುಕಾನ್ಯಾ ಸಮೃದ್ಧಿ ಯೋಜನೆ ವಾರ್ಷಿಕ ಶೇ. 8.5 ಮತ್ತು ಹಿರಿಯ ನಾಗರಿಕರ ಉಳಿತಾಯ ಯೋಜನೆ ಶೇ. 8.7 ರಷ್ಟು ಬಡ್ಡಿದರ ಸಿಗಲಿದೆ.
ಆದಾಗ್ಯೂ, ಅಂಚೆ ಕಚೇರಿ ಉಳಿತಾಯ ಖಾತೆ ಮೇಲಿನ ಬಡ್ಡಿದರದ ದರವು ಮೊದಲಿನಷ್ಟೆ ಶೇ. 4 ರಷ್ಟು ಇಡಲಾಗಿದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications