ಮುಖ್ಯಮಂತ್ರಿ ಮಾತೃಶ್ರೀ ಯೋಜನೆ ಮೂಲಕ ಬಿಪಿಎಲ್ ಕುಟುಂಬದ ಗರ್ಭಿಣಿಯರ ಬ್ಯಾಂಕ್ ಖಾತೆಗೆ ಹಣ ವರ್ಗಾಯಿಸುವ ಸಮ್ಮಿಶ್ರ ಸರ್ಕಾರದ ಯೋಜನೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ.
ಮುಖ್ಯಮಂತ್ರಿ ಮಾತೃಶ್ರೀ ಯೋಜನೆ ಮೂಲಕ ಬಿಪಿಎಲ್ ಕುಟುಂಬದ ಗರ್ಭಿಣಿಯರ ಬ್ಯಾಂಕ್ ಖಾತೆಗೆ ಹಣ ವರ್ಗಾಯಿಸುವ ಸಮ್ಮಿಶ್ರ ಸರ್ಕಾರದ ಯೋಜನೆಗೆ ಸಚಿವ ಸಂಪುಟ ಅನುಮೋದನೆ ನೀಡಿದೆ.
ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಯವರು ಬಜೆಟ್ ಮಂಡನೆ ಸಂದರ್ಭದಲ್ಲಿ ಮುಖ್ಯಮಂತ್ರಿ ಮಾತೃಶ್ರೀ ಯೋಜನೆ ಘೋಷಣೆ ಮಾಡಿದ್ದರು.
ಈ ಯೋಜನೆ ಮೂಲಕ ಹೆರಿಗೆ ಪೂರ್ವದ ಮೂರು ತಿಂಗಳು ಹಾಗು ಹೆರಿಗೆ ನಂತರದ ಮೂರು ತಿಂಗಳು ತಲಾ ಒಂದು ಸಾವಿರದಂತೆ ಹಣ ಸಿಗಲಿದೆ. ಮಾತೃಶ್ರೀ ಯೋಜನೆ: ಗರ್ಭಿಣಿಯರಿಗೆ 6 ಸಾವಿರ ಹಣ, ಅರ್ಜಿ ಸಲ್ಲಿಸುವುದು ಹೇಗೆ ಹಾಗು ಬೇಕಾಗುವ ದಾಖಲಾತಿಗಳೇನು?
ಒಟ್ಟು 6000 ಸಹಾಯಧನ
ಮುಖ್ಯಮಂತ್ರಿ ಮಾತೃಶ್ರೀ ಯೋಜನೆ (Mathru shree scheme) ಮುಖಾಂತರ ಫಲಾನುಭವಿಗಳು ಒಟ್ಟು ರೂ. ೬೦೦೦ ಪಡೆಯಲಿದ್ದಾರೆ. ಇದನ್ನು ಎರಡು ಹಂತದಲ್ಲಿ ಅಂದರೆ ಹೆರಿಗೆ ಪೂರ್ವದ ಮೂರು ತಿಂಗಳು ಹಾಗು ಹೆರಿಗೆ ನಂತರದ ಮೂರು ತಿಂಗಳು ತಲಾ ಒಂದು ಸಾವಿರ ಒಟ್ಟು ಆರು ಸಾವಿರ ನೀಡಲಾಗುತ್ತದೆ. ಮಾತೃಶ್ರೀ ಯೋಜನೆಯ ಯಶಸ್ವಿ ಅನುಷ್ಠಾನಕ್ಕಾಗಿ ರೂ. 350 ಕೋಟಿಗಳನ್ನು ಮೀಸಲಿ ಇಡಲಾಗಿದೆ. ಜೊತೆಗೆ ಮುಂದಿನ ಐದು ವರ್ಷಗಳಲ್ಲಿ ಈ ಮೊತ್ತವನ್ನು ಹಂತಹಂತವಾಗಿ ಹೆಚ್ಚಿಸಲಾಗುವುದು.
ಅರ್ಜಿ ಸಲ್ಲಿಕೆ ಹೇಗೆ?
ನಿಮ್ಮ ಗ್ರಾಮದ ಅಥವಾ ಸುತ್ತಮುತ್ತಲಿನ ಅಂಗನವಾಡಿ ಶಿಕ್ಷಕಿಯರು ಅಥವಾ ಆಶಾ ಕಾರ್ಯಕರ್ತೆಯರ ಬಳಿ ನೀವು ಅರ್ಜಿ ಸಲ್ಲಿಸಿ ಇದರ ಪ್ರಯೋಜನ ಪಡೆಯಬಹುದು. ಬೇಕಾಗುವ ದಾಖಲಾತಿಗಳನ್ನು ಕೂಡ ಇವರಿಗೆ ಸಲ್ಲಿಸಬೇಕು. ಇದರ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ನಿಮ್ಮ ಅಂಗನವಾಡಿ ಶಿಕ್ಷಕಿಯರನ್ನು ಸಂಪರ್ಕಿಸಿ ಪರಿಪೂರ್ಣ ಮಾಹಿತಿ ಪಡೆಯಿರಿ.
ಬೇಕಾಗುವ ದಾಖಲಾತಿಗಳು
ತಾಯಿ ಕಾರ್ಡ್
ಆಧಾರ್ ಕಾರ್ಡ್
ಚುನಾವಣಾ ಚೀಟಿ
ಆಧಾರ್ ಕಾರ್ಡ್ ಲಿಂಕ್ ಆದ ಬ್ಯಾಂಕ್ ಖಾತೆ
ಪತಿಯ ಆಧಾರ್ ಮತ್ತು ಚುನಾವಣಾ ಚೀಟಿ
More From GoodReturns

ICC T20 World Cup: ವಿಶ್ವಕಪ್ ಗೆದ್ದ ಭಾರತಕ್ಕೆ ಬಿಸಿಸಿಐನಿಂದ ಗುಡ್ ನ್ಯೂಸ್; 131 ಕೋಟಿ ಬಹುಮಾನ ಘೋಷಣೆ

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ



Click it and Unblock the Notifications