ಹಣ ಕಳೆದುಕೊಂಡಿರುವವರು ಇಲ್ಲವೇ ನಷ್ಟ ಎದುರಿಸುತ್ತಿರುವವರು ವಾಸ್ತುದೋಷದ ಬಗ್ಗೆ ಮಾತನಾಡುವುದನ್ನು ನಾವು ಕೇಳಿದ್ದೇವೆ.
ನಮ್ಮ ದೇಶದಲ್ಲಿ ಶ್ರೀಮಂತಿಕೆ, ಸಂಪತ್ತು, ಬಡತನ, ನಷ್ಟ ಹೀಗೆ ಹಲವಾರು ಸಂಗತಿಗಳು ವಾಸ್ತುಶಾಸ್ತ್ರದೊಂದಿಗೆ ಬೆಸೆದುಕೊಂಡಿದೆ. ಹಣ ಕಳೆದುಕೊಂಡಿರುವವರು ಇಲ್ಲವೇ ನಷ್ಟ ಎದುರಿಸುತ್ತಿರುವವರು ವಾಸ್ತುದೋಷದ ಬಗ್ಗೆ ಮಾತನಾಡುವುದನ್ನು ನಾವು ಕೇಳಿದ್ದೇವೆ.
ಪ್ರತಿಯೊಬ್ಬರ ಹಣ, ಸಂಪತ್ತು, ನೆಮ್ಮದಿ, ಸಂತಸ ವೃದ್ದಿಯಲ್ಲಿ ಮನೆಯ ಪಾತ್ರ ತುಂಬಾ ದೊಡ್ಡದು. ಮನೆಯ ನಾಲ್ಕು ಗೋಡೆಗಳಲ್ಲಿರುವ ಶಕ್ತಿಯೇ ಅದೃಷ್ಟ ಮತ್ತು ದುರಾದೃಷ್ಟಕ್ಕೆ ಕಾರಣ ಎಂದು ನಂಬುವವರು ಇದ್ದಾರೆ.
ಮನೆಯಲ್ಲಿ ಕೆಲ ವಸ್ತುಗಳು ಸಕಾರಾತ್ಮಕ ಶಕ್ತಿಯನ್ನು ಹೆಚ್ಚಿಸಿದರೆ, ಕೆಲವು ಬಡತನ, ದುಃಖ, ದಾರಿದ್ರ್ಯದಂತಹ ನಕರಾತ್ಮಕ ಶಕ್ತಿಯನ್ನು ಹೆಚ್ಚಿಸುತ್ತವೆ. ಪರ್ಸ್/ವಾಲೆಟ್ ನಲ್ಲಿ ಈ ವಸ್ತುಗಳನ್ನು ಇಟ್ಟುಕೊಳ್ಳಬೇಡಿ...
ಹಾಗಿದ್ದರೆ ಯಾವ ವಸ್ತುಗಳು ಮನೆಯಲ್ಲಿರಬೇಕು, ಯಾವ ವಸ್ತುಗಳು ಇರಬಾರದು ಎಂಬುದನ್ನು ನೋಡೋಣ ಬನ್ನಿ...
ಹರಿದ/ಹಾಳಾದ ವಾಲೆಟ್, ಪರ್ಸ್
ನಿಮ್ಮ ಬಳಿಯಿರುವ ಪರ್ಸ್ ಅಥವಾ ವಾಲೆಟ್ ಹರಿದು ಹೋಗಿದೆಯೆ/ಹಳೆಯದಾಗಿದೆಯೆ ನೋಡಿ. ನೀವು ಹಣ ಇಡುವ ಪರ್ಸ್/ವಾಲೆಟ್ ಒಳ್ಳೆಯ ಸ್ಥಿತಿಯಲ್ಲಿರಬೇಕು. ತುಕ್ಕು ಹಿಡಿದಿರಬಾರದು, ಮುರಿದು ಹೋಗಿರಬಾರದು. ಪರ್ಸ್ ನಲ್ಲಿ, ಲಾಕರ್ ನಲ್ಲಿ ಲಕ್ಷ್ಮೀ ಫೋಟೋ ಹಾಗೂ ಅಶ್ವತ್ಥ ಎಲೆಯ ಮೇಲೆ ಬೆಳ್ಳಿ ನಾಣ್ಯವನ್ನಿಡುವುದರಿಂದ ಶುಭವಾಗುತ್ತದೆ ಎಂಬುದು ನಂಬಿಕೆ.
ಹರಿದ ಮತ್ತು ಹಾಳಾದ ಬಟ್ಟೆ
ಹರಿದ, ಹಾಳಾದ ಬಟ್ಟೆಗಳು ಎಲ್ಲರ ಮನೆಯೊಳಗೆ ಇರುವುದು ಸರ್ವೇಸಾಮಾನ್ಯ. ಒಂದು ವೇಳೆ ಹಳೆಯ ಹಾಗೂ ಹರಿದ ಬಟ್ಟೆಗಳನ್ನು ಮೂಟೆ ಕಟ್ಟಿ ಮನೆಯ ಮೂಲೆಯಲ್ಲಿಡುವ ಹವ್ಯಾಸವಿದ್ದರೆ ಒಳ್ಳೆಯದಲ್ಲ. ವಾಸ್ತುಶಾಸ್ತ್ರದ ಪ್ರಕಾರ ಅದನ್ನು ಇಟ್ಟುಕೊಳ್ಳುವುದು ಶುಭಕರವಲ್ಲ.
ಮುರಿದು ಹೋದ ಎಲೆಕ್ಟ್ರಾನಿಕ್ ಉಪಕರಣ
ಹಳೆಯ ಇಲ್ಲವೇ ಹಾಳಾದ ಎಲೆಕ್ಟ್ರಾನಿಕ್ ಉಪಕರಣಗಳು, ಮೊಬೈಲ್ ಏನಾದರೂ ಇದ್ದರೆ ಅದನ್ನು ಮನೆಯೊಳಗೆ ಇಡಬೇಡಿ. ಯಾಕಂದರೆ ಅದು ರಾಹು ಗ್ರಹದ ಕ್ರೋಧವನ್ನು ಆಕರ್ಷಿಸುತ್ತದೆ.
ಜೇಡ ಬಲೆ
ಮನೆಯೊಳಗೆ ಜೇಡ ಬಲೆ ಕಟ್ಟುವುದು ಸಾಮಾನ್ಯ. ಜೇಡದ ಬಲೆಗಳು ನಿಮ್ಮ ಏಳಿಗೆಯನ್ನು ಹತೋಟಿಯಲ್ಲಿಡುತ್ತವೆ. ನಿಮ್ಮ ಮನೆಯ ಶಾಂತಿ ಕದಡುತ್ತದೆ. ನಿಮ್ಮ ವೃತ್ತಿಪರ ಮತ್ತು ವೈಯಕ್ತಿಕ ಬದುಕಿನಲ್ಲಿ ತೊಂದರೆ ಉಂಟು ಮಾಡುತ್ತದೆ. ಋಣಾತ್ಮಕ ಶಕ್ತಿಯನ್ನು ನಿವಾರಿಸಲು ಆಗಾಗ್ಗೆ ಮನೆಯನ್ನು ಲವಣಯುಕ್ತ ನೀರಿನಿಂದ ಶುಚಿಗೊಳಿಸುತ್ತಿರಬೇಕು.
ತೆರೆದ ಕಪಾಟು
ನಿಮ್ಮ ಮನೆಯಲ್ಲಿರುವ ಕಪಾಟು ಅಥವಾ ಅಲಮಾರು ಸದಾ ಮುಚ್ಚಿಟ್ಟಿರಬೇಕು. ಅಲಮಾರು ತೆರೆದಿದ್ದರೆ ಉತ್ಕರ್ಷ ಅಥವಾ ಅಭಿವೃದ್ಧಿ ನಿಮ್ಮ ಮನೆಯಿಂದ ಹೊರ ಹೋಗುತ್ತದೆ.
ಮುರಿದ ಹೋದ ವಿಗ್ರಹ
ಹರಿದು ಹೋದ ದೇವರ ಪಟಗಳು ಹಾಗೂ ಮುರಿದು ಹೋದ ವಿಗ್ರಹಗಳು ಅಶುಭವೆಂದು ಪರಿಗಣಿಸಲಾಗುತ್ತದೆ. ಅವುಗಳನ್ನು ಮನೆಯಿಂದ ಹೊರಕ್ಕೆ ಹಾಕಿ.
ಟೆರೆಸ್ ಸ್ವಚ್ಛತೆ
ಯಾವಾಗಲು ಮನೆಯ ಛಾವಣಿ ಅಥವಾ ಟೆರೆಸ್ ಅನ್ನು ಸ್ವಚ್ಛವಾಗಿಟ್ಟುಕೊಳ್ಳಿ. ಬೇಡದ ವಸ್ತುಗಳನ್ನೆಲ್ಲ ಅಲ್ಲಿಟ್ಟು ಕಸದ ತೊಟ್ಟಿಯಂತೆ ಮಾಡಬೇಡಿ. ಮನೆಯ ಯಾವುದೇ ಮೂಲೆಯಲ್ಲಿ ಅನಗತ್ಯ ವಸ್ತುಗಳನ್ನು ಇಡಬೇಡಿ.
ಅನಗತ್ಯ ಫೋಟೋ ಬೇಡ
ಸಾಮಾನ್ಯವಾಗಿ ಎಲ್ಲರೂ ತಮ್ಮ ಗೋಡೆಗಳ ಮೇಲೆ ಸುಂದರ ಫೋಟೋಗಳನ್ನು ಹಾಕುತ್ತಾರೆ. ತಾಜ್ ಮಹಲ್, ನಟರಾಜ ವಿಗ್ರಹ, ಮಹಾಭಾರತದ ಫೋಟೋ, ಮುಳುಗುತ್ತಿರುವ ಹಡಗು ಮತ್ತು ಜಲಪಾತದ ಫೋಟೋಗಳನ್ನು ಹಾಕಬಾರದು. ಅವು ನಕರಾತ್ಮಕವಾಗಿದ್ದು ದುರಾದೃಷ್ಟವನ್ನು ಆಕರ್ಷಿಸುತ್ತವೆ.
ಮುರಿದ/ಒಡೆದ ವಸ್ತುಗಳು
ಮುರಿದ ಕುರ್ಚಿ, ಟೇಬಲ್, ಕಬೋರ್ಡ್, ಬೆಡ್ ಏನಾದರೂ ನಿಮ್ಮ ಮನೆಯಲ್ಲಿದ್ದರೆ ಅದನ್ನು ಮೊದಲು ಹೊರಗೆಸೆಯಿರಿ. ಅವು ಮನೆಯಲ್ಲಿರುವ ಋಣಾತ್ಮಕ ಶಕ್ತಿಯನ್ನು ಹೆಚ್ಚಿಸಿ, ನಿಮಗೆ ಹಣಕಾಸಿನ ಅಡಚಣೆ ಕಾಣಿಸಿಕೊಳ್ಳುತ್ತದೆ.
ಕೊನೆಮಾತು
ವಾಸ್ತುಶಾಸ್ತ್ರವನ್ನು ನಂಬುವುದು ಬಿಡುವುದು ನಿಮ್ಮ ವಿವೇಚನೆಗೆ ಬಿಟ್ಟ ವಿಚಾರ. ನಮ್ಮಲ್ಲಿ ಅನೇಕರು ಇದನ್ನು ಮೂಡನಂಬಿಕೆ ಎಂದು ಕರೆಯುವವರು ಇದ್ದಾರೆ. ಧನ ಸಂಪತ್ತು ವೃದ್ಧಿಗೆ ಹಾಗು ಹಾನಿಗೆ ವಾಸ್ತುಶಾಸ್ತ್ರದ ಪ್ರಕಾರ ಅನೇಕ ನಂಬಿಕೆಗಳಿವೆ. ಆದರೆ ಅದೆಲ್ಲವನ್ನು ನಂಬುವುದು, ಬಿಡುವುದು ನಿಮಗೆ ಬಿಟ್ಟ ವಿಚಾರ.
More From GoodReturns

Retirement with Savings Tips: ನಿವೃತ್ತಿ ಪ್ಲಾನ್ ಮಾಡ್ತಿದ್ದೀರಾ? ಹಾಗಿದ್ರೆ ಈ ಸ್ಕೀಮ್ನಲ್ಲಿ ಇನ್ವೆಸ್ಟ್ ಮಾಡಿ

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!



Click it and Unblock the Notifications