ಪ್ರಧಾನ ಮಂತ್ರಿ ನರೇಂದ್ರ ಮೋದಿ ಸರ್ಕಾರದ ಮಹತ್ವಾಕಾಂಕ್ಷೆಯ ಜನ ಆರೋಗ್ಯ ಯೋಜನೆಯು ಆರೋಗ್ಯ ಮತ್ತು ವಿಮಾ ಕ್ಷೇತ್ರದಲ್ಲಿ 10 ಲಕ್ಷ ಉದ್ಯೋಗಗಳನ್ನು ಸೃಷ್ಟಿಸಲಿದೆ ಎಂದು ಅಧಿಕೃತ ಮೂಲ ತಿಳಿಸಿದೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಸರ್ಕಾರದ ಮಹತ್ವಾಕಾಂಕ್ಷೆಯ ಜನ ಆರೋಗ್ಯ ಯೋಜನೆಯು ಆರೋಗ್ಯ ಮತ್ತು ವಿಮಾ ಕ್ಷೇತ್ರದಲ್ಲಿ 10 ಲಕ್ಷ ಉದ್ಯೋಗಗಳನ್ನು ಸೃಷ್ಟಿಸಲಿದೆ ಎಂದು ಅಧಿಕೃತ ಮೂಲ ತಿಳಿಸಿದೆ.
ಈ ಯೋಜನೆಯು ಸಾರ್ವಜನಿಕ ಮತ್ತು ಖಾಸಗಿ ವಲಯಗಳಲ್ಲಿನ ಆರೋಗ್ಯ ಸೇವೆಯ ಗುಣಮಟ್ಟವನ್ನು ಸುಧಾರಿಸಲಿದೆ ಆರೋಗ್ಯ ಯೋಜನಾ ಸಿಇಒ ಇಂದು ಭೂಷಣ್ ಅಸ್ಸೋಚಾಮ್ ಆಯೋಜಿಸಿದ್ದ ಸಮಾರಂಭದಲ್ಲಿ ತಿಳಿಸಿದ್ದಾರೆ. ಆಯುಷ್ಮಾನ್ ಭಾರತ್ ಯೋಜನೆ: 5 ಲಕ್ಷ ವಿಮಾ ಸೌಲಭ್ಯ ಪಡೆಯೋದು ಹೇಗೆ?
ಕಳಪೆ ಆರೋಗ್ಯ ಸೇವೆ
ನಮ್ಮ ದೇಶದಲ್ಲಿ ಸಾವಿರಾರು ಜನರು ಬಡತನದ ಕಾರಣದಿಂದಾಗಿ ಆರೋಗ್ಯಕ್ಕಾಗಿ ವೆಚ್ಚ ಮಾಡಲು ಸಾಧ್ಯವಾಗುತ್ತಿಲ್ಲ. ಬಡ ಜನರು ಕಳಪೆ ಆರೋಗ್ಯ ಸೇವೆಗಳನ್ನು ಬಳಸುತ್ತಿದ್ದಾರೆ ಎಂದು ಭೂಷಣ್ ತಿಳಿಸಿದರು. ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆಯನ್ನು ಮೋದಿಕೇರ್ ಎಂದು ಕೂಡ ಕರೆಯಲ್ಪಡುತ್ತದೆ.
ವಾರ್ಷಿಕ 5 ಲಕ್ಷ ವಿಮೆ
ಒಂದು ಕುಟುಂಬಕ್ಕೆ ವಾರ್ಷಿಕವಾಗಿ 5 ಲಕ್ಷವರೆಗೆ ಆರೋಗ್ಯ ವಿಮೆ ಕಲ್ಪಿಸಲಾಗುತ್ತದೆ. ಪ್ರಸ್ತುತ ಯೋಜನೆಗೆ ನೋಂದಾಯಿಸಿಕೊಂಡಿರುವ ರಾಜ್ಯಗಳ ಆರೋಗ್ಯ ಯೋಜನೆ, ರಾಷ್ಟ್ರೀಯ ಸ್ವಾಸ್ಥ್ಯ ವಿಮಾ ಯೋಜನೆ ಫಲಾನುಭವಿಗಳು ಕೂಡ ಆಯುಷ್ಮಾನ್ ಭಾರತ್ ಯೋಜನೆಯ ಫಲಾನುಭವಿಗಳಾಗಲಿದ್ದಾರೆ.
ಆಯಷ್ಮಾನ್ ಭಾರತ್ ಯೋಜನೆ ಯಾರಿಗೆ ಸಿಗಲಿದೆ?
ಜಾತಿ ಗಣತಿ/ಪಡಿತರ ಚೀಟಿ ಮಾನದಂಡದ ಆಧಾರದ ಮೇಲೆ ವಿಮೆ ಸಗಲಿದೆ.
- ಪ.ಜಾತಿ/ಪ.ಪಂಗಡ ಬುಡಕಟ್ಟು ಸಮುದಾಯದವರು
- ನಿರ್ವಸಿತರು (ವಸತಿ ಸೌಲಭ್ಯ ಇಲ್ಲದವರು)
- ಒಂದು ಕೊಠಡಿಯಲ್ಲಿ ವಾಸಿಸುವ ಕುಟುಂಬಗಳು
- ಕೂಲಿ ಕಾರ್ಮಿಕರು, ಜೀತ ವಿಮುಕ್ತರು
- ರದ್ದಿ ಆಯುವವರು, ಭಿಕ್ಷುಕರು, ಪೌರಕಾರ್ಮಿಕರು
- ಕಟ್ಟಡ ಕಾರ್ಮಿಕರು, ಮನೆ ಕೆಲಸದವರು, ಕುಸುರಿ ಕೆಲಸಗಾರರು
- ಟೈಲರ್, ಪ್ಲಂಬರ್, ಸಾರಿಗೆ ನೌಕರರು, ರಿಕ್ಷಾವಾಲಾಗಳು
- ಎಲೆಕ್ಟ್ರಿಷಿಯನ್, ಮೆಕಾನಿಕ್, ಸಹಾಯಕರು
ಕಾದು ನೋಡಿ..
ಪ್ರಧಾನಮಂತ್ರಿ ಜನ ಆರೋಗ್ಯ ಯೋಜನೆಯಡಿ 10 ಲಕ್ಷ ಉದ್ಯೋಗಗಳನ್ನು ಸೃಷ್ಟಿಸಲಾಗುವುದು ಎಂದು ಸರ್ಕಾರ ಹೇಳಿರುವುದು ಎಷ್ಟರಮಟ್ಟಿಗೆ ಕಾರ್ಯರೂಪಕ್ಕೆ ಬರುತ್ತದೆ ಎಂಬುದನ್ನು ಕಾದುನೋಡಬೇಕಿದೆ.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications