ಕೇಂದ್ರ ಸರ್ಕಾರ ಕಳೆದ ಐದಾರು ತಿಂಗಳುಗಳಿಂದ ಎಲ್ಪಿಜಿ ದರ ಏರಿಕೆ ಮಾಡುತ್ತಲೇ ಬಂದಿದ್ದು, ಇದೀಗ ನವೆಂಬರ್ ತಿಂಗಳಲ್ಲೂ ಕೂಡ ಎಲ್ಪಿಜಿ ದರ ಏರಿಸಿ ಗ್ರಾಹಕರಿಗೆ ಶಾಕ್ ನೀಡಿದೆ.
ಕೇಂದ್ರ ಸರ್ಕಾರ ಕಳೆದ ಐದಾರು ತಿಂಗಳುಗಳಿಂದ ಎಲ್ಪಿಜಿ ದರ ಏರಿಕೆ ಮಾಡುತ್ತಲೇ ಬಂದಿದ್ದು, ಇದೀಗ ನವೆಂಬರ್ ತಿಂಗಳಲ್ಲೂ ಕೂಡ ಎಲ್ಪಿಜಿ ದರ ಏರಿಸಿ ಗ್ರಾಹಕರಿಗೆ ಶಾಕ್ ನೀಡಿದೆ.
ಅಲ್ಲದೇ ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಸಾರ್ವಜನಿಕರು ತತ್ತರಿಸಿ ಹೋಗುವಂತಾಗಿದೆ.
ಸಬ್ಸಿಡಿ ಸಿಲಿಂಡರ್ ಗಳ ಬೆಲೆಯಲ್ಲಿ ಏರಿಕೆಯಾಗಿದ್ದು, ನವೆಂಬರ್ 1ರ ಮಧ್ಯ ರಾತ್ರಿಯಿಂದಲೇ ಹೊಸ ದರ ಜಾರಿಗೆ ಬಂದಿದೆ. ಅತೀ ಕಡಿಮೆ ಬಂಡವಾಳದಲ್ಲಿ ವರ್ಷಕ್ಕೆ 8-10 ಲಕ್ಷ ಹಣ ಗಳಿಸುವ ಬಿಸಿನೆಸ್
ಸಬ್ಸಿಡಿ ಸಿಲಿಂಡರ್ ಬೆಲೆ
ಸಬ್ಸಿಡಿ ಇರುವ ಸಿಲಿಂಡರ್ ಗಳ ಬೆಲೆಯಲ್ಲಿ ರೂ. 2.94 ಏರಿಕೆಯಾಗಿದ್ದು, ಇದರಿಂದಾಗಿ 14.2 ಕೆ.ಜಿ. ತೂಕದ ಸಿಲಿಂಡರ್ ಬೆಲೆ ದೆಹಲಿಯಲ್ಲಿ 505.34 ರೂಪಾಯಿಗಳಾಗಿದೆ. ಈ ಹಿಂದೆ ಇದರ ಬೆಲೆ 502.40 ರೂಪಾಯಿಗಳಾಗಿತ್ತು. ಮುಂಬೈನಲ್ಲಿ ರೂ. 503.11, ಚೆನ್ನೈನಲ್ಲಿ ರೂ. 493.87 ರಷ್ಟಿದೆ. ಅಕ್ಟೋಬರ್ ತಿಂಗಳಲ್ಲಿ ದೆಹಲಿಯಲ್ಲಿ ಎಲ್ಪಿಜಿ ಸಿಲಿಂಡರ್ ಬೆಲೆ ರೂ. 502 ಆಗಿತ್ತು.
ಆರು ಬಾರಿ ಏರಿಕೆ
ಕಳೆದ ಜೂನ್ ತಿಂಗಳಿನಿಂದ ಇಲ್ಲಿಯವರೆಗೆ ಸಬ್ಸಿಡಿ ಸಹಿತ ಸಿಲಿಂಡರ್ ಗಳ ಬೆಲೆಯಲ್ಲಿ ಸತತ ಆರು ಬಾರಿ ಏರಿಕೆಯಾಗಿದೆ. ಈ ಅವಧಿಯಲ್ಲಿ ಪ್ರತಿ ಸಿಲಿಂಡರ್ ಬೆಲೆಯಲ್ಲಿ ಒಟ್ಟು ರೂ. 14.13 ಹೆಚ್ಚಳವಾದಂತಾಗಿದೆ.
ಸಬ್ಸಿಡಿ ರಹಿತ ಸಿಲಿಂಡರ್
ಸಬ್ಸಿಡಿ ರಹಿತ ಡುಗೆ ಅನಿಲ ಬೆಲೆಯಲ್ಲೂ ರೂ. 60 ಹೆಚ್ಚಳವಾಗಿದ್ದು, ಈಗ ಪ್ರತಿ ಸಿಲಿಂಡರ್ ಬೆಲೆ ದೆಹಲಿಯಲ್ಲಿ ರೂ. 939 ಆದಂತಾಗಿದೆ. ಅಕ್ಟೋಬರ್ ನಲ್ಲಿ ಪ್ರತಿ ಸಿಲಿಂಡರ್ ಬೆಲೆ ರೂ. 879 ಇತ್ತು. ಪ್ರಸ್ತುತ ಮುಂಬೈನಲ್ಲಿ ರೂ. 912, ಚೆನ್ನೈನಲ್ಲಿ ರೂ. 958 ದರ ಇದೆ.
ಸಬ್ಸಿಡಿ ಮೊತ್ತ ನಿಮ್ಮ ಖಾತೆಗೆ
ಗ್ರಾಹಕರ ಬ್ಯಾಂಕ್ ಖಾತೆಯಲ್ಲಿ ಸಬ್ಸಿಡಿ ಮೊತ್ತ ವರ್ಗಾವಣೆ ಮಾಡುವ ಮೊತ್ತವನ್ನು ನವೆಂಬರ್ ತಿಂಗಳಲ್ಲಿ ಪ್ರತಿ ಸಿಲಿಂಡರ್ ಗೆ ರೂ. 433.66 ಏರಿಸಿದೆ ಎಂದು ಇಂಡಿಯನ್ ಆಯಿಲ್ ಹೇಳಿದೆ.
ಅಕ್ಟೋಬರ್ ತಿಂಗಳಲ್ಲಿ ಪ್ರತಿ ಸಿಲಿಂಡರ್ ಗೆ ರೂ. 376.60 ಸಬ್ಸಿಡಿ ಇತ್ತು.. ಇದು ಸೆಪ್ಟೆಂಬರ್ ನಲ್ಲಿ ಪ್ರತಿ ಸಿಲಿಂಡರ್ ಗೆ ರೂ. 320.49, ಆಗಸ್ಟ್ ನಲ್ಲಿ ರೂ. 291.48, ಜುಲೈನಲ್ಲಿ ರೂ. 257.74 ಇತ್ತು. ಸಬ್ಸಿಡಿ ಪಡೆಯುವ ಎಲ್ಪಿಜಿ ಗ್ರಾಹಕರು ಬೆಲೆ ಹೆಚ್ಚಳದಿಂದ ಕೊಂಚ ನೆಮ್ಮದಿ ಪಡೆದಿದ್ದಾರೆ ಎನ್ನಬಹುದು.
ಪ್ರತಿವರ್ಷ 12 ಸಿಲಿಂಡರ್
ದೇಶದ ಕುಟುಂಬಗಳು ಪ್ರತಿವರ್ಷ 12 ಸಬ್ಸಿಡಿ ಸಹಿತ ಸಿಲಿಂಡರ್ ಗಳನ್ನು ವಿಪಡೆಯಬಹುದಾಗಿದೆ. ಇದಕ್ಕಿಂತ ಹೆಚ್ಚಿನ ಸಿಲಿಂಡರ್ ಗಳನ್ನು ಸಬ್ಸಿಡಿ ರಹಿತ ಖರೀದಿಸಬೇಕಾಗುತ್ತದೆ.
More From GoodReturns

LPG Cylinder Shortage Live Updates: ಭಾರತದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ಪಿಎಂ ಮೋದಿ ಮಹತ್ವದ ಸಭೆ

LPG ಪೂರೈಕೆಯಲ್ಲಿ ಕೊರತೆ; ದೇಶದಲ್ಲಿ ಎಲ್ಪಿಜಿ ಉತ್ಪಾದನೆ 10% ಹೆಚ್ಚಳ

Siddaramaiah: ಹೋಟೆಲ್ ಉದ್ಯಮಿಗಳ ಸಂಕಷ್ಟಕ್ಕೆ ಧ್ವನಿಯಾದ ಸಿಎಂ ಸಿದ್ದರಾಮಯ್ಯ; ಪತ್ರ ಬರೆದು ಮನವಿ

Hotel Bandh: ಬೆಂಗಳೂರಿಗೂ ತಟ್ಟಿದ ಯುದ್ಧದ ಬಿಸಿ; ಇಂದಿನಿಂದ ಹಲವು ಹೋಟೆಲ್ ಬಂದ್

ಎಲ್ಲ ಹಣವನ್ನೂ ಒಂದೇ ಬ್ಯಾಂಕ್ನಲ್ಲಿ ಇಡ್ತಿದ್ದೀರಾ? ಒಂದು ತಪ್ಪು ನಿಮ್ಮ ಸಂಪೂರ್ಣ ಉಳಿತಾಯಕ್ಕೆ ಅಪಾಯ!

LPG cylinder Price: ದೇಶದ ಜನರಿಗೆ ಅಡುಗೆ ಅನಿಲ ದರ ಶಾಕ್… LPG ಸಿಲಿಂಡರ್ ಬೆಲೆಯಲ್ಲಿ 60 ರೂ. ಏರಿಕೆ!

LPG Gas Cylinder: ಎಲ್ಪಿಜಿ ಗ್ಯಾಸ್ ಸಿಲಿಂಡರ್ ಪೂರೈಕೆ ಸ್ಥಗಿತ, ಹೋಟೆಲ್ ಉದ್ಯಮಕ್ಕೆ ಅಡ್ಡಿ; ಪ್ರಧಾನಿಗೆ ಪತ್ರ

Ugadi 2026: ಯುಗಾದಿ ನಂತರ ಈ ರಾಶಿಯವರಿಗೆ ಹಣವೋ ಹಣ; ನೀವೂ ಇದ್ದೀರಾ ನೋಡಿ

ICC T20 World Cup: ವಿಶ್ವಕಪ್ ಗೆದ್ದ ಭಾರತಕ್ಕೆ ಬಿಸಿಸಿಐನಿಂದ ಗುಡ್ ನ್ಯೂಸ್; 131 ಕೋಟಿ ಬಹುಮಾನ ಘೋಷಣೆ

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ



Click it and Unblock the Notifications