ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಗವರ್ನರ್ ಉರ್ಜಿತ್ ಪಟೇಲ್ ರಾಜೀನಾಮೆ ನೀಡಿರುವ ವಿಷಯ ದೇಶದಾದ್ಯಂತ ಚರ್ಚೆಗೆ ಗ್ರಾಸವಾಗಿದೆ.
ಭಾರತೀಯ ರಿಸರ್ವ್ ಬ್ಯಾಂಕ್ (ಆರ್ಬಿಐ) ಗವರ್ನರ್ ಉರ್ಜಿತ್ ಪಟೇಲ್ ರಾಜೀನಾಮೆ ನೀಡಿರುವ ವಿಷಯ ದೇಶದಾದ್ಯಂತ ಚರ್ಚೆಗೆ ಗ್ರಾಸವಾಗಿದೆ.
ವೈಯಕ್ತಿಕ ಕಾರಣಗಳಿಂದಾಗಿ ಗವರ್ನರ್ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿರುವುದಾಗಿ ಉರ್ಜಿತ್ ಪಟೇಲ್ ಹೇಳಿದ್ದಾರೆ. ಆದರೆ ಇದು ಸತ್ಯಕ್ಕೆ ದೂರವಾದ ಮಾತು ಎನ್ನುವುದು ಆರ್ಥಿಕ ತಜ್ಞರ, ವಿಶ್ಲೇಶಕರ ಅಭಿಪ್ರಾಯ. ಇದಕ್ಕೆ ಕಾರಣ ಕಳೆದ ಕೆಲ ತಿಂಗಳಿನಿಂದ ನಡೆದ ಬೆಳವಣಿಗೆ, ಕೇಂದ್ರ ಸರ್ಕಾರ ಮತ್ತು ಆರ್ಬಿಐ ನಡುವಿನ ತಿಕ್ಕಾಟ, ತೆರೆಮರೆಯ ಗುದ್ದಾಟಗಳು ಇವರ ರಾಜೀನಾಮೆಗೆ ಕಾರಣವಾಗಿರಬಹುದೆಂದು ಸೂಕ್ಷ್ಮವಾಗಿ ಗ್ರಹಿಸಬಹುದು.
ವಿರಳ್ ವಿ. ಆಚಾರ್ಯ ಖಡಕ್ ಹೇಳಿಕೆ
ಆರ್ಬಿಐ ನ ಡೆಪ್ಯುಟಿ ಗವರ್ನರ್ ವಿರಳ್ ವಿ. ಆಚಾರ್ಯ ಅವರು, ಆರ್ಬಿಐ ಸ್ವಾಯತ್ತತೆಯನ್ನು ಕೇಂದ್ರ ಸರ್ಕಾರ ಗೌರವಿಸದಿದ್ದರೆ ಹಣಕಾಸು ಮಾರುಕಟ್ಟೆ ನಷ್ಟ ಎದುರಿಸಲಿದ್ದು, ಸ್ವಾಯತ್ತತೆಗೆ ಧಕ್ಕೆಯಾಗದ ಹಾಗೇ ಸರ್ಕಾರ ನಡೆಯಬೇಕು ಎಂದು ಹೇಳಿದ್ದರು. ವಿರಳ್ ವಿ. ಆಚಾರ್ಯ ಅವರ ಈ ಹೇಳಿಕೆಗೆ ಆರ್ಬಿಐ ನೌಕರರ ಸಂಘಟನೆ ಬೆಂಬಲ ಸೂಚಿಸಿ, ಆರ್ಬಿಐ ಸಂಸ್ಥೆಯನ್ನು ಸ್ವತಂತ್ರವಾಗಿ ಕೆಲಸ ಮಾಡಲು ಬಿಡಬೇಕು ಎಂದು ಎಚ್ಚರಿಕೆ ನೀಡಿತ್ತು.
ಉರ್ಜಿತ್ ಪಟೇಲ್
ಆರ್ಬಿಐ ಗವರ್ನರ್ ಉರ್ಜಿತ್ ಪಟೇಲ್ ಅವರು ಕೇಂದ್ರ ಸರಕಾರದೊಂದಿಗೆ ಭಿನ್ನಾಭಿಪ್ರಾಯ ಹಾಗು ಜಟಾಪಟಿಗಳ ನಂತರ ತಮ್ಮ ಹುದ್ದೆಯಿಂದ ರಾಜೀನಾಮೆ ನೀಡಿದ್ದಾರೆ. ತಮ್ಮ ರಾಜೀನಾಮೆ ಪತ್ರದಲ್ಲಿ, ಪಟೇಲ್ ಸರ್ಕಾರವನ್ನು ಟೀಕಿಸದೆ, ರಾಜೀನಾಮೆ ನನ್ನ ವೈಯಕ್ತಿಕ ನಿರ್ಧಾರ ಎಂದಿದ್ದಾರೆ.
ಸಿಎನ್ಬಿಸಿ ಟಿವಿ 18 ವರದಿ
ಅಕ್ಟೋಬರ್ 31 ರಂದು ಆರ್ಬಿಐ ಗವರ್ನರ್ ಉರ್ಜಿತ್ ಪಟೇಲ್ ಅವರು ರಾಜೀನಾಮೆ ನೀಡಬೇಕೆಂದು ನಿರ್ಧರಿಸುತ್ತಿದ್ದಾರೆ ಎಂದು ಸಿಎನ್ಬಿಸಿ ಟಿವಿ 18 ವರದಿ ಮಾಡಿದೆ.
ಆರ್ಬಿಐ ಮತ್ತು ಕೇಂದ್ರ ಸರಕಾರದ ನಡುವಿನ ಭಿನ್ನಾಭಿಪ್ರಾಯವು ಹೆಚ್ಚುತ್ತಿದೆ ಎಂದು ವರದಿ ಹೇಳಿದೆ.
ಇಂಡಿಯಾ ಟುಡೇ ವರದಿ
ಆರ್ಬಿಐ ಗವರ್ನರ್ ಉರ್ಜಿತ್ ಪಟೇಲ್ ಪ್ರಧಾನಿ ನರೇಂದ್ರ ಮೋದಿಯವರನ್ನು ನವೆಂಬರ್ 9 ರಂದು ಭೇಟಿಯಾದರು ಎಂದು ನವಂಬರ್ 12 ರಂದು ಇಂಡಿಯಾ ಟುಡೇ ವರದಿ ಮಾಡಿದೆ. ಸರಕಾರ ಮತ್ತು ಕೇಂದ್ರ ಬ್ಯಾಂಕುಗಳ ನಡುವೆ ವಿವಾದಾಸ್ಪದ ವಿವಾದಗಳನ್ನು ಬಗೆಹರಿಸುವ ಉದ್ದೇಶ ಈ ಸಭೆಯ ಗುರಿಯಾಗಿದೆ ಎಂದು ಸರಕಾರ ಮೂಲಗಳು ಹೇಳಿದ್ದವು. ಈ ಸಭೆಯಲ್ಲಿ ಉರ್ಜಿತ್ ಪಟೇಲ್ ಕೇಂದ್ರೀಯ ಬ್ಯಾಂಕ್ ಮತ್ತು ಕೇಂದ್ರ ಸರ್ಕಾರದ ನಡುವಿನ ವಿವಿಧ ವಿಷಯಗಳ ಬಗ್ಗೆ ಚರ್ಚಿಸಿದ್ದಾರೆ.
ನವೆಂಬರ್ 9 ರ ಸಭೆ
ನವೆಂಬರ್ 9 ರ ಸಭೆಯ ನಂತರ, ಆರ್ಬಿಐ ಮತ್ತು ಕೇಂದ್ರ ಸರ್ಕಾರ ಒಮ್ಮತಕ್ಕೆ ಬಂದಿವೆ ಎಂದು ವರದಿಯಾಗಿತ್ತು. ಆರ್ಬಿಐ ತನ್ನ ಪಾಲಿಸಿಯಲ್ಲಿ ಕೆಲವು ಬದಲಾವಣೆಗಳನ್ನು ಮಾಡಲು ಒಪ್ಪಿಕೊಂಡಿದೆ ಎನ್ನಲಾಗಿತ್ತು. ಆರ್ಬಿಐ Vs ಕೇಂದ್ರ ಸರ್ಕಾರದ ಜಟಾಪಟಿಗೆ ಕಾರಣಗಳೇನು?
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications