ಭಾರತ ಸರ್ಕಾರ ರೂ. 2000 ಮುಖಬೆಲೆಯ ನೋಟುಗಳನ್ನು ಮುದ್ರಿಸುವುದನ್ನು ನಿಲ್ಲಿಸಿದೆ ಎಂದು ವರದಿಯಾಗಿದೆ. ರೂ. 2000 ನೋಟುಗಳ ಚಲಾವಣೆಯನ್ನು ನಿಧಾನವಾಗಿ ನಿಲ್ಲಿಸುವ ಸಲುವಾಗಿ ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎನ್ನಲಾಗಿದೆ.
ಭಾರತ ಸರ್ಕಾರ ರೂ. 2000 ಮುಖಬೆಲೆಯ ನೋಟುಗಳನ್ನು ಮುದ್ರಿಸುವುದನ್ನು ನಿಲ್ಲಿಸಿದೆ ಎಂದು ವರದಿಯಾಗಿದೆ.
ರೂ. 2000 ನೋಟುಗಳ ಚಲಾವಣೆಯನ್ನು ನಿಧಾನವಾಗಿ ನಿಲ್ಲಿಸುವ ಸಲುವಾಗಿ ಸರ್ಕಾರ ಈ ನಿರ್ಧಾರ ಕೈಗೊಂಡಿದೆ ಎನ್ನಲಾಗಿದೆ. ಕೇಂದ್ರ ಸರ್ಕಾರ 2016 ರ ನವೆಂಬರ್ ನಲ್ಲಿ ಕಪ್ಪುಹಣ ಕಡಿವಾಣ ಹಾಕುವ ಉದ್ದೇಶದಿಂದ ದೊಡ್ಡ ಮೊತ್ತದ ನೋಟುಗಳನ್ನು ರದ್ದುಪಡಿಸಿ ನಂತರದಲ್ಲಿ ಹೊಸ ನೋಟುಗಳನ್ನು ಚಲಾವಣೆಗೆ ತಂದಿತ್ತು.
2000 ನೋಟು ಚಲಾವಣೆ
2016 ರ ನೋಟು ರದ್ದತಿಯಾದ ಸಂದರ್ಭದಲ್ಲಿ ರೂ. 2000 ದೊಡ್ಡ ಮುಖಬೆಲೆಯ ನೋಟನ್ನು ಪರಿಚಯಿಸಲಾಗಿತ್ತು. ನಂತರದಲ್ಲಿ ರೂ. 500, ರೂ. 200 ದೊಡ್ಡ ಮುಖಬೆಲೆಯ ಹೊಸ ನೋಟುಗಳನ್ನು ಚಲಾವಣೆಗೆ ತರಲಾಗಿತ್ತು. ಆದರೆ ಈಗ ದಿಢೀರನೇ ರೂ. 2000 ಮುಖಬೆಲೆಯ ನೋಟುಗಳ ಮುದ್ರಣವನ್ನು ನಿಲ್ಲಿಸಿದೆ ಎಂದು ವರದಿಯಾಗಿದೆ.
ಚಲಾವಣೆ ಪ್ರಮಾಣ ಕಡಿಮೆ
ಐಟಿ ದಾಳಿಗಳ ಸಂದರ್ಭದಲ್ಲಿ ರೂ. 2000 ನೋಟುಗಳಿಂದಲೇ ದೊಡ್ಡ ಪ್ರಮಾಣದಲ್ಲಿ ಹಣ ಸಂಗ್ರಹಿಸಿರುವುದು ಕಂಡು ಬಂದಿದೆ.
ಅತಿ ಹೆಚ್ಚು ಪ್ರಮಾಣದಲ್ಲಿ ರೂ. 2000 ಮೊತ್ತದ ನೋಟುಗಳನ್ನು ಮುದ್ರಣ ಮಾಡಲಾಗಿದ್ದರೂ, ಚಲಾವಣೆ ಪ್ರಮಾಣ ಕಡಿಮೆಯಾಗುತ್ತಿರುವುದರಿಂದ ನೋಟಿನ ಮುದ್ರಣವನ್ನು ನಿಲ್ಲಿಸಲಾಗಿದೆ.
ಚಲಾವಣೆಯಾದ ಒಟ್ಟು ಕರೆನ್ಸಿ ಮೌಲ್ಯ
ಮಾರ್ಚ್ 2018 ರ ವೇಳೆಗೆ ಚಲಾವಣೆಯಲ್ಲಿರುವ ಒಟ್ಟು ಕರೆನ್ಸಿ ಮೌಲ್ಯವು ರೂ. 18.03 ಲಕ್ಷ ಕೋಟಿಯಾಗಿದೆ. ಇವುಗಳಲ್ಲಿ 6.73 ಲಕ್ಷ ಕೋಟಿ ಅಥವಾ ಶೇ. 37 ರೂ. 2,000 ನೋಟುಗಳದ್ದಾಗಿದ್ದರೆ, ಸುಮಾರು ಶೇ. 43 ರಷ್ಟು ಅಥವಾ 7.73 ಲಕ್ಷ ಕೋಟಿ ರೂ. 500 ರ ನೋಟುಗಳಾಗಿವೆ. ಉಳಿದದ್ದು ಕಡಿಮೆ ಮುಖಬೆಲೆಯ ನೋಟುಗಳಾಗಿವೆ.
ಆರ್ಥಿಕತೆ ಮೇಲೆ ಪರಿಣಾಮ
ಒಂದೇ ಬಾರಿ ರೂ. 2000 ನೋಟು ರದ್ದುಪಡಿಸಿದರೆ ಆರ್ಥಿಕತೆಯ ಮೇಲೆ ಕೆಟ್ಟ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಸದ್ಯಕ್ಕೆ ಮುದ್ರಣ ನಿಲ್ಲಿಸಲಾಗಿದೆ. ಮುಂದಿನ ದಿನಗಳಲ್ಲಿ ರೂ. 2000 ನೋಟನ್ನು ಹಿಂದಕ್ಕೆ ಪಡೆದರೆ ಅಚ್ಚರಿ ಪಡಬೇಕಿಲ್ಲ.
More From GoodReturns

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ



Click it and Unblock the Notifications