ಸರ್ಕಾರ ಪ್ರಮುಖ ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿದರವನ್ನು ಪರಿಷ್ಕರಿಸಿ, ಅಂಚೆ ಕಚೇರಿ ಕಡಿಮೆ ಅವಧಿಯ ಯೋಜನೆಗಳ ಮೇಲಿನ ಬಡ್ಡಿದರವನ್ನು ಏರಿಕೆ ಮಾಡಿದೆ.
ಸರ್ಕಾರ ಪ್ರಮುಖ ಸಣ್ಣ ಉಳಿತಾಯ ಯೋಜನೆಗಳ ಮೇಲಿನ ಬಡ್ಡಿದರವನ್ನು ಪರಿಷ್ಕರಿಸಿ, ಅಂಚೆ ಕಚೇರಿ ಕಡಿಮೆ ಅವಧಿಯ ಯೋಜನೆಗಳ ಮೇಲಿನ ಬಡ್ಡಿದರವನ್ನು ಏರಿಕೆ ಮಾಡಿದೆ. ಸಣ್ಣ ಉಳಿತಾಯ ಯೋಜನೆಗಳ ಮೇಲೆ ಹೂಡಿಕೆ ಮಾಡುವ ಗ್ರಾಹಕರಿಗೆ ಸಿಹಿ ಕಹಿ ಎರಡನ್ನೂ ನೀಡಿದೆ.
ಬಡ್ಡಿದರ ಏರಿಕೆ
ಡಿಸೆಂಬರ್ 31, 2018ರ ಅಧಿಸೂಚನೆಯಲ್ಲಿ ಪ್ರಕಟಿಸಿದಂತೆ, ಹಣಕಾಸು ಸಚಿವಾಲಯವು 1 ವರ್ಷದ ಅವಧಿಯ ಅಂಚೆ ಕಚೇರಿಯ ಠೇವಣಿ ಮೇಲಿನ ಬಡ್ಡಿದರವು ಜನವರಿ-ಮಾರ್ಚ್ ತ್ರೈಮಾಸಿಕದಲ್ಲಿ ಶೇ .7 ರಷ್ಟು ಹೆಚ್ಚಳವಾಗಿದೆ. ಹಿಂದಿನ ತ್ರೈಮಾಸಿಕದಲ್ಲಿ ಬಡ್ಡಿದರ ಶೇ. 6.9ರಷ್ಟಿತ್ತು.
ಬಡ್ಡಿದರ ಇಳಿಕೆ
ಅಂಚೆ ಕಚೇರಿಯ ಮೂರು ವರ್ಷಗಳ ಅವಧಿಯ ಮೇಲಿನ ಬಡ್ಡಿದರವನ್ನು ಶೇ. 7.2ರಿಂದ ಶೇ. 7ಕ್ಕೆ ಇಳಿಸಲಾಗಿದೆ. 2 ವರ್ಷ ಮತ್ತು 5 ವರ್ಷದ ಅಂಚೆ ಕಚೇರಿ ಠೇವಣಿಗಳ ಮೇಲಿನ ಬಡ್ಡಿದರಗಳು ಅನುಕ್ರಮವಾಗಿ 7% ಮತ್ತು 7.8% ರಷ್ಟು ಯಥಾಸ್ಥಿತಿಯಲ್ಲಿ ಉಳಿಸಲಾಗಿದೆ. ಅದೇ ರೀತಿ, 5 ವರ್ಷದ ಅಂಚೆ ಕಚೇರಿ ಮರುಕಳಿಸುವ ಠೇವಣಿಯ ಮೇಲಿನ ಬಡ್ಡಿ ದರವನ್ನು ಶೇ.7.3ರಷ್ಟು ಸ್ಥಿರವಾಗಿ ಇರಿಸಲಾಗಿದೆ.
ಪ್ರಮುಖ ಯೋಜನೆಗಳ ಬಡ್ಡಿದರ
ಪಬ್ಲಿಕ್ ಪ್ರಾವಿಡೆಂಟ್ ಫಂಡ್, ಸುಕನ್ಯಾ ಸಮೃದ್ಧಿ ಯೋಜನೆ, ಹಿರಿಯ ನಾಗರಿಕರ ಯೋಜನೆಗಳ ಮೇಲಿನ ಬಡ್ಡಿದರವನ್ನು ಯಥಾಸ್ಥಿತಿಯಲ್ಲಿ ಉಳಿಸಲಾಗಿದೆ.
ಪಿಪಿಎಫ್ ಬಡ್ಡಿದರ ಶೇ. 8, ಸುಕನ್ಯಾ ಸಮೃದ್ಧಿ ಖಾತೆ ಬಡ್ಡಿದರ ಶೇ 8.5. ಹಿರಿಯ ನಾಗರಿಕರ ಉಳಿತಾಯ ಖಾತೆ ಬಡ್ಡಿದರ ಶೇ. 8.7 ಉಳಿಸಲಾಗಿದೆ.
ಬಡ್ಡಿದರ ಪರಿಷ್ಕರಣೆ
ಸಣ್ಣ ಉಳಿತಾಯದ ಮೇಲಿನ ಬಡ್ಡಿ ದರಗಳನ್ನು ಪ್ರತಿ ತ್ರೈಮಾಸಿಕಕ್ಕೆ ಒಮ್ಮೆ ಪರಿಷ್ಕರಿಸಲಾಗುತ್ತಿದೆ. ಈ ಬಾರಿ ಎಲ್ಲಾ ಪ್ರಮುಖ ಯೋಜನೆಗಳ ಬಡ್ಡಿದರವನ್ನು ಯಥಾಸ್ಥಿತಿ ಉಳಿಸಲಾಗಿದೆ. ಅಂಚೆ ಕಚೇರಿ ಗ್ರಾಹಕರಿಗೆ ಸಿಹಿ ನೀಡಿದರೆ, ಉಳಿದವರಿಗೆ ಕಹಿ ನೀಡಿದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications