ನೀತಿ ಆಯೋಗವು ರೈತರಿಗಾಗಿ ಹೊಸ ಯೋಜನೆ ರೂಪಿಸಲು ಮುಂದಾಗಿದೆ. ರೈತರಿಗೆ ಸಬ್ಸಿಡಿ ನೀಡುವ ಬದಲು ನೇರ ಲಾಭದ ಪ್ರಯೋಜನ ಸಿಗುವಂತೆ ಮಾಡುವುದು ಇದರ ಉದ್ದೇಶವಾಗಿದೆ.
ನೀತಿ ಆಯೋಗವು ರೈತರಿಗಾಗಿ ಹೊಸ ಯೋಜನೆ ರೂಪಿಸಲು ಮುಂದಾಗಿದೆ. ರೈತರಿಗೆ ಸಬ್ಸಿಡಿ ನೀಡುವ ಬದಲು ನೇರ ಲಾಭದ ಪ್ರಯೋಜನ ಸಿಗುವಂತೆ ಮಾಡುವುದು ಇದರ ಉದ್ದೇಶವಾಗಿದೆ. ಸಬ್ಸಿಡಿ ಬದಲಾಗಿ ಪ್ರತಿ ಹೆಕ್ಟೇರಿಗೆ ರೂ. 15,000 ನೀಡಬೇಕು ಎಂದು ನೀತಿ ಆಯೋಗ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ ಎಂದು ಎಕಾನಾಮಿಕ್ಸ್ ಟೈಮ್ಸ್ ವರದಿ ಮಾಡಿದೆ. ನಿಮ್ಮ ಬೆಳೆ ಸಾಲ ಮನ್ನಾ ಆಗಿದೆಯೋ? ಇಲ್ಲವೋ? ಇಲ್ಲಿ ಚೆಕ್ ಮಾಡಿ..
ಹೆಕ್ಟೇರಿಗೆ 15,000
ನೇರ ಲಾಭದ ಪ್ರಯೋಜನವಾಗಿ ರೂ. 15,000 ನೀಡುವುದರಿಂದ ಕೃಷಿ ಕ್ಷೇತ್ರ ಸುಧಾರಣೆಯಾಗಲಿದೆ. ಸಬ್ಸಿಡಿ ದರದಲ್ಲಿ ರಸಗೊಬ್ಬರ, ವಿದ್ಯುತ್ ಶುಲ್ಕ ರಿಯಾಯಿತಿ, ಬೆಳೆ ವಿಮೆ, ಸಾಲದ ಬಡ್ಡಿ ಪಾವತಿ ಮಾಡುವ ಬದಲು ನೇರವಾಗಿ ಹಣ ನೀಡಬೇಕೆಂದು ನೀತಿ ಆಯೋಗ ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಿದೆ.
ನೇರ ನಗದು ವರ್ಗಾವಣೆ
ಫಲಾನುಭವಿ ರೈತರ ಬ್ಯಾಂಕ್ ಖಾತೆಗಳಿಗೆ ನೇರವಾಗಿ ನಗದು ವರ್ಗಾವಣೆ ಮಾಡುವುದರಿಂದ ರೈತರಿಗೆ ಅನುಕೂಲವಾಗುತ್ತದೆ ಎಂದು ನೀತಿ ಆಯೋಗ ಪ್ರಸ್ತಾವನೆಯಲ್ಲಿ ತಿಳಿಸಿದೆ. ನೀತಿ ಆಯೋಗದ ಈ ಸಲಹೆ ಕುರಿತು ಕೇಂದ್ರ ಸರ್ಕಾರ ಅಂತಿಮ ನಿರ್ಧಾರ ಕೈಗೊಳ್ಳಲಿದೆ.
ಬಜೆಟ್ ನಲ್ಲಿ ಕೇಂದ್ರ ಸರ್ಕಾರ ಘೋಷಣೆ ಸಾಧ್ಯತೆ!
ಕೆಲವು ರಾಜ್ಯಗಳಲ್ಲಿ ಸಾಲ, ಬಡ್ಡಿಯ ವಿನಾಯಿತಿ ಘೋಷಿಸಲಾಗಿದ್ದು, ಕೆಲ ರಾಜ್ಯಗಳಲ್ಲಿ ರೈತರಿಗೆ ಸಾಲ ವಿನಾಯಿತಿ ಬದಲು ನೇರವಾಗಿ ಸಹಾಯ ಧನ ನೀಡಲಾಗುತ್ತಿದೆ. ಹೀಗಾಗಿ ನೇರ ಲಾಭದ ಪ್ರಯೋಜನವಾಗಿ ಹೆಕ್ಟೇರ್ ಗೆ ರೂ. 15,000 ನೀಡುವುದು ಅನುಕೂಲಕರವಾಗಲಿದೆ ಎಂದು ನೀತಿ ಆಯೋಗ ಪ್ರಸ್ತಾವನೆಯಲ್ಲಿ ಹೇಳಿದೆ. ಬಜೆಟ್ ನಲ್ಲಿ ಕೇಂದ್ರ ಸರ್ಕಾರ ಈ ಕುರಿತು ಘೋಷಣೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.
More From GoodReturns

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!



Click it and Unblock the Notifications