ನವದೆಹಲಿ, ಪೆಬ್ರುವರಿ 1: ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್ನಲ್ಲಿ ಕೃಷಿ ವಲಯಕ್ಕೆ ಹೆಚ್ಚಿನ ಕೊಡುಗೆ ನಿರೀಕ್ಷಿಸಿದ್ದರಿಂದ ಮಂಡನೆಗೆ ಮುನ್ನವೇ ಕೃಷಿ-ವಲಯ ಷೇರುಗಳಲ್ಲಿ ಸಂಚಲನ ಉಂಟಾಗಿದೆ.
ಕೃಷಿ ವಲಯದ ಸಂಕಷ್ಟಗಳಿಗೆ ಕೇಂದ್ರ ಸರ್ಕಾರ ಪರಿಹಾರದ ಕೊಡುಗೆ ನೀಡಲಿದೆ ಎಂದು ನಿರೀಕ್ಷೆ ಇದ್ದಿದ್ದರಿಂದ ಶುಕ್ರವಾರ ಬೆಳಗ್ಗಿನಿಂದಲೇ ಕೃಷಿ ವಲಯದ ಷೇರು ವಹಿವಾಟು ವೃದ್ಧಿಯಾಗಿತ್ತು.
ರೈತರ ಅದಾಯವನ್ನು ಹೆಚ್ಚಿಸಲು ಕನಿಷ್ಠ ಬೆಂಬಲ ಬೆಲೆ ದರ ಹೆಚ್ಚಳ ಮತ್ತು ಶೂನ್ಯ ಬಡ್ಡಿದರದ ಸಾಲದ ಕೊಡುಗೆ ಸಾಧ್ಯತೆ ಇದ್ದಿದ್ದರಿಂದ ಈ ಬೆಳವಣಿಗೆ ಉಂಟಾಗಿದೆ.

ಆಹಾರ ಬೆಳೆಗಳ ಮೇಲಿನ ವಿಮೆಯಲ್ಲಿ ಪ್ರೀಮಿಯಂನ ಸಂಪೂರ್ಣ ಮನ್ನಾ ಮಾಡುವ ಪ್ರಸ್ತಾವವಿತ್ತು. ಅಲ್ಲದೆ, ತೆಲಂಗಾಣ ಮತ್ತು ಒಡಿಶಾ ಮಾದರಿಯಲ್ಲಿ ರೈತರ ಖಾತೆಗಳಿಗೆ ನೇರವಾಗಿ ನಿರ್ದಿಷ್ಟ ಹಣ ವರ್ಗಾವಣೆ ಮಾಡುವ ಯೋಜನೆ ಇದ್ದು, ಕೇಂದ್ರ ಸರ್ಕಾರ 6,000 ರೂಪಾಯಿ ವಾರ್ಷಿಕ ಹಣಕಾಸು ನೆರವು ಪ್ರಕಟಿಸಿದೆ.
ಜೆಕೆ ಅಗ್ರಿ ಜೆನೆಟಿಕ್ಸ್ ಶೇ 5.67, ಕೆಆರ್ಬಿಎಲ್ ಶೇ 5.02, ಅಗ್ರಿ ಟೆಕ್ ಇಂಡಿಯಾ ಶೇ 4.97, ವೈಟ್ ಆರ್ಗಾನಿಕ್ ಆಗ್ರೋ ಶೇ 4.83ರಷ್ಟು ಷೇರುಗಳ ಏರಿಕೆ ಕಂಡಿವೆ.
ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ, ಎರಡು ಹೆಕ್ಟೇರ್ಗಿಂತ ಕಡಿಮೆ ಭೂಮಿಯುಳ್ಳ ರೈತರಿಗೆ 6 ಸಾವಿರ ನಗದು ನೇರವಾಗಿ ಖಾತೆಗೆ ವರ್ಗಾವಣೆ ಮಾಡಲಾಗುವುದು. ಡಿಸೆಂಬರ್ 2018ರಿಂದಲೇ ಈ ಯೋಜನೆ ಅನ್ವಯವಾಗಲಿದೆ ಎಂದು ಪಿಯೂಷ್ ಗೋಯಲ್ ತಿಳಿಸಿದ್ದಾರೆ.
ಮೂರು ಕಂತುಗಳಲ್ಲಿ ತಲಾ 2 ಸಾವಿರ ರೂಪಾಯಿ ಹಣ ರೈತರ ಖಾತೆಗಳಿಗೆ ಜಮೆ ಆಗಲಿದೆ. ಇದರಿಂದ 12 ಕೋಟಿ ರೈತರಿಗೆ ಅನುಕೂಲವಾಗಲಿದೆ. ಈ ಯೋಜನೆಗೆ 75,000 ಕೋಟಿ ಮೀಸಲಿಡಲಾಗುವುದು ಎಂದು ಗೋಯಲ್ ತಿಳಿಸಿದ್ದಾರೆ.
More From GoodReturns

Stock Market Crash: ಭಾರತೀಯ ಷೇರು ಮಾರುಕಟ್ಟೆಯಲ್ಲಿ ಕುಸಿತ..ಸೆನ್ಸೆಕ್ಸ್ 1000 ಪಾಯಿಂಟ್, ನಿಫ್ಟಿಯಲ್ಲಿ 300 ಅಂಕ ಪತನ!

Stock Market Crash: ಮಧ್ಯಪ್ರಾಚ್ಯದ ಸಂಘರ್ಷ, ಷೇರು ಮಾರುಕಟ್ಟೆ ಅಲ್ಲೋಲ ಕಲ್ಲೋಲ! ಸೆನ್ಸೆಕ್ಸ್ 2000 ಪಾಯಿಂಟ್ಸ್ ಕುಸಿತ

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!



Click it and Unblock the Notifications