ಕೇಂದ್ರ ಮಧ್ಯಂತರ ಬಜೆಟ್ 2019: ಸಣ್ಣ ರೈತರಿಗೆ ಆರ್ಥಿಕ ನೆರವಿನ ಕೊಡುಗೆ ಘೋಷಣೆ
ನವದೆಹಲಿ, ಪೆಬ್ರವರಿ 1: ಸಣ್ಣ ರೈತರಿಗೆ ಅಲ್ಪ ಮಟ್ಟಿಗಿನ ಆರ್ಥಿಕ ನೆರವು ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ.
ರೈತರ ಅನುಕೂಲಕ್ಕಾಗಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯನ್ನು ಘೋಷಿಸಿರುವ ಮಧ್ಯಂತರ ಹಣಕಾಸು ಸಚಿವ ಪಿಯೂಶ್ ಗೋಯಲ್, ಈ ಯೋಜನೆ ಮೂಲಕ ಸಣ್ಣ ಹಿಡುವಳಿದಾರರಿಗೆ ಹಣಕಾಸಿನ ನೆರವು ಒದಗಿಸುವ ಯೋಜನೆಯನ್ನು ಪ್ರಕಟಿಸಿದರು.
Interim Union Budget 2019 LIVE: ರೈತರಿಗಾಗಿ ಪಿಎಂ ಕಿಸಾನ್ ಸಮ್ಮಾನ್ ನಿಧಿ
ಎರಡು ಹೆಕ್ಟೇರ್ ಮತ್ತು ಅದಕ್ಕಿಂತ ಕಡಿಮೆ ಭೂಮಿ ಹೊಂದಿರುವ ಸಣ್ಣ ರೈತರಿಗೆ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ 6 ಸಾವಿರ ನಗದು ನೇರವಾಗಿ ಖಾತೆಗೆ ವರ್ಗಾವಣೆ ಆಗುತ್ತದೆ. ಡಿಸೆಂಬರ್ 2018ರಿಂದಲೇ ಈ ಯೋಜನೆ ಅನ್ವಯವಾಗಲಿದೆ.
ಮಧ್ಯಂತರ ಬಜೆಟ್ 2019: ಮೋದಿ ಸರ್ಕಾರದ ಕೊನೆ ಬಜೆಟ್ ಜನಪ್ರಿಯ ಯೋಜನೆಗಳ ಸಂಪೂರ್ಣ ಮಾಹಿತಿ..
ಮೂರು ಕಂತುಗಳಲ್ಲಿ ತಲಾ 2 ಸಾವಿರ ರೂಪಾಯಿ ಹಣ ರೈತರ ಖಾತೆಗಳಿಗೆ ಜಮೆ ಆಗಲಿದೆ. ಇದರಿಂದ 12 ಕೋಟಿ ರೈತರಿಗೆ ಅನುಕೂಲವಾಗಲಿದೆ. ಈ ಯೋಜನೆಗೆ 75,000 ಕೋಟಿ ಮೀಸಲಿಡಲಾಗುವುದು ಎಂದು ಗೋಯಲ್ ತಿಳಿಸಿದ್ದಾರೆ.
ರೈತರ ಕಲ್ಯಾಣ ಮತ್ತು ಅವರ ಆದಾಯ ದ್ವಿಗುಣ ಮಾಡುವ ಉದ್ದೇಶದಿಂದ ಎಲ್ಲ 22 ಬೆಳೆಗಳಿಗೆ 1.5ರಷ್ಟು ಹೆಚ್ಚಿನ ಕನಿಷ್ಠ ಬೆಂಬಲ ಬೆಲೆ ಘೋಷಣೆ ಮಾಡಲಾಗಿದೆ.