For Quick Alerts
ALLOW NOTIFICATIONS  
For Daily Alerts

ಕೇಂದ್ರ ಮಧ್ಯಂತರ ಬಜೆಟ್ 2019: ಸಣ್ಣ ರೈತರಿಗೆ ಆರ್ಥಿಕ ನೆರವಿನ ಕೊಡುಗೆ ಘೋಷಣೆ

|

ನವದೆಹಲಿ, ಪೆಬ್ರವರಿ 1: ಸಣ್ಣ ರೈತರಿಗೆ ಅಲ್ಪ ಮಟ್ಟಿಗಿನ ಆರ್ಥಿಕ ನೆರವು ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ.

ರೈತರ ಅನುಕೂಲಕ್ಕಾಗಿ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯನ್ನು ಘೋಷಿಸಿರುವ ಮಧ್ಯಂತರ ಹಣಕಾಸು ಸಚಿವ ಪಿಯೂಶ್ ಗೋಯಲ್, ಈ ಯೋಜನೆ ಮೂಲಕ ಸಣ್ಣ ಹಿಡುವಳಿದಾರರಿಗೆ ಹಣಕಾಸಿನ ನೆರವು ಒದಗಿಸುವ ಯೋಜನೆಯನ್ನು ಪ್ರಕಟಿಸಿದರು.

Interim Union Budget 2019 LIVE: ರೈತರಿಗಾಗಿ ಪಿಎಂ ಕಿಸಾನ್ ಸಮ್ಮಾನ್ ನಿಧಿ Interim Union Budget 2019 LIVE: ರೈತರಿಗಾಗಿ ಪಿಎಂ ಕಿಸಾನ್ ಸಮ್ಮಾನ್ ನಿಧಿ

ಎರಡು ಹೆಕ್ಟೇರ್ ಮತ್ತು ಅದಕ್ಕಿಂತ ಕಡಿಮೆ ಭೂಮಿ ಹೊಂದಿರುವ ಸಣ್ಣ ರೈತರಿಗೆ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯಡಿ 6 ಸಾವಿರ ನಗದು ನೇರವಾಗಿ ಖಾತೆಗೆ ವರ್ಗಾವಣೆ ಆಗುತ್ತದೆ. ಡಿಸೆಂಬರ್ 2018ರಿಂದಲೇ ಈ ಯೋಜನೆ ಅನ್ವಯವಾಗಲಿದೆ.

ಕೇಂದ್ರ ಮಧ್ಯಂತರ ಬಜೆಟ್ 2019: ಸಣ್ಣ ರೈತರಿಗೆ ಆರ್ಥಿಕ ನೆರವಿನ ಕೊಡುಗೆ

ಮಧ್ಯಂತರ ಬಜೆಟ್ 2019: ಮೋದಿ ಸರ್ಕಾರದ ಕೊನೆ ಬಜೆಟ್ ಜನಪ್ರಿಯ ಯೋಜನೆಗಳ ಸಂಪೂರ್ಣ ಮಾಹಿತಿ..ಮಧ್ಯಂತರ ಬಜೆಟ್ 2019: ಮೋದಿ ಸರ್ಕಾರದ ಕೊನೆ ಬಜೆಟ್ ಜನಪ್ರಿಯ ಯೋಜನೆಗಳ ಸಂಪೂರ್ಣ ಮಾಹಿತಿ..

ಮೂರು ಕಂತುಗಳಲ್ಲಿ ತಲಾ 2 ಸಾವಿರ ರೂಪಾಯಿ ಹಣ ರೈತರ ಖಾತೆಗಳಿಗೆ ಜಮೆ ಆಗಲಿದೆ. ಇದರಿಂದ 12 ಕೋಟಿ ರೈತರಿಗೆ ಅನುಕೂಲವಾಗಲಿದೆ. ಈ ಯೋಜನೆಗೆ 75,000 ಕೋಟಿ ಮೀಸಲಿಡಲಾಗುವುದು ಎಂದು ಗೋಯಲ್ ತಿಳಿಸಿದ್ದಾರೆ.

ರೈತರ ಕಲ್ಯಾಣ ಮತ್ತು ಅವರ ಆದಾಯ ದ್ವಿಗುಣ ಮಾಡುವ ಉದ್ದೇಶದಿಂದ ಎಲ್ಲ 22 ಬೆಳೆಗಳಿಗೆ 1.5ರಷ್ಟು ಹೆಚ್ಚಿನ ಕನಿಷ್ಠ ಬೆಂಬಲ ಬೆಲೆ ಘೋಷಣೆ ಮಾಡಲಾಗಿದೆ.

English summary

Interim Union Budget 2019 agriculture pradhanmantri kisan samman yojna RS 6000 for farmers

Interim Union Budget union minister Piyush Goyal announced RS 6000 for small farmers as economical support. This is the last budget by Modi government before Lok Sabha Elections 2019.
Company Search
COVID-19
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X