ನವದೆಹಲಿ, ಫೆಬ್ರವರಿ 1: ನರೇಂದ್ರ ಮೋದಿ ಸರ್ಕಾರ ಶುಕ್ರವಾರ ಮಂಡಿಸಿದ ಮಧ್ಯಂತರ ಬಜೆಟ್ ಮಧ್ಯಮ ವರ್ಗದ ದುಡಿಯುವ ವರ್ಗಕ್ಕೆ ಖುಷಿ ನೀಡಿದೆ.
ದೇಶದ ಬಹುಸಂಖ್ಯೆಯ ಮಧ್ಯಮ ವರ್ಗದ ಜನತೆ ಹಲವು ವರ್ಷಗಳಿಂದ ಬಯಸಿದ್ದ ಆದಾಯ ತೆರಿಗೆ ಮಿತಿಯ ಏರಿಕೆಯ ನಿರೀಕ್ಷೆಯನ್ನು ಸರ್ಕಾರ ಹುಸಿಗೊಳಿಸಿಲ್ಲ.
ಆದಾಯ ತೆರಿಗೆ ಪಾವತಿಯ ಮಿತಿಯನ್ನು 2.50 ಲಕ್ಷದಿಂದ 5 ಲಕ್ಷಕ್ಕೆ ಹೆಚ್ಚಳ ಮಾಡಿ ಕೇಂದ್ರ ಸರ್ಕಾರ ಕೊಡುಗೆ ನೀಡಿದೆ. ಅಲ್ಲದೆ, ಆದಾಯದ ಮೇಲಿನ ಉಳಿತಾಯದ ಮಿತಿ 1.50 ಲಕ್ಷವೂ ಇದಕ್ಕೆ ಸೇರಿಕೊಳ್ಳುವುದರಿಂದ ಮ್ಯೂಚುವಲ್ ಫಂಡ್, ವಿಮೆ, ಗೃಹಸಾಲ ಮುಂತಾದವುಗಳ ಮಾಹಿತಿ ಒದಗಿಸುವುದರ ಮೂಲಕ ಒಟ್ಟಾರೆ 6.5 ಲಕ್ಷದವರೆಗೂ ತೆರಿಗೆ ವಿನಾಯಿತಿ ಪಡೆದುಕೊಳ್ಳಬಹುದಾಗಿದೆ.
ಇದು ಸಹಜವಾಗಿಯೇ ಮಧ್ಯಮ ವರ್ಗದ ಜನರಿಗೆ ಸಂತಸ ನೀಡಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಜನರು ಹರ್ಷ ವ್ಯಕ್ತಪಡಿಸುತ್ತಿದ್ದಾರೆ. ಹಾಗೆಯೇ ಕೇಂದ್ರದ ಆರ್ಥಿಕ ನೀತಿಗಳನ್ನು ವಿರೋಧಿಸುವ ಅನೇಕರು ಇದಕ್ಕೆ ಟೀಕೆಯನ್ನೂ ವ್ಯಕ್ತಪಡಿಸಿದ್ದಾರೆ.
Very High Sir!
Kudos @narendramodi Ji the first PM of Middle Class for Middle Class #AbkiBaar400Paar #BudgetForNewIndia pic.twitter.com/BY7fZAaceS— Sandeep K Patil/संदीप कृ पाटील 🇮🇳 (@ModifiedSKP) February 1, 2019 '>
ಜೋಶ್ ಹೇಗಿದೆ?
ಐದು ಲಕ್ಷದವರೆಗೂ ಆದಾಯ ತೆರಿಗೆ ಸಂಪೂರ್ಣ ವಿನಾಯಿತಿ. ಜೋಶ್ ಹೇಗಿದೆ? ತುಂಬಾ ಜೋರಾಗಿದೆ ಸರ್! ಎಂದು ಸಂದೀಪ್ ಪಾಟೀಲ್ ಎಂಬುವವರು ಇತ್ತೀಚೆಗೆ ಟ್ವಿಟ್ಟರ್ನಲ್ಲಿ ಟ್ರೆಂಡಿಂಗ್ ಆಗಿದ್ದ ಜೋಶ್ ಪದವನ್ನು ಬಳಸಿ ಸಂತಸ ವ್ಯಕ್ತಪಡಿಸಿದ್ದಾರೆ. ಹಾಗೆಯೇ 'ಮಧ್ಯಮವರ್ಗದವರ ಮಧ್ಯಮವರ್ಗದ ಪ್ರಧಾನಿ' ಎಂದು ನರೇಂದ್ರ ಮೋದಿ ಅವರನ್ನು ಶ್ಲಾಘಿಸಿದ್ದಾರೆ.
#BudgetForNewIndia— Rishi Bagree 🇮🇳 (@rishibagree) February 1, 2019 '>
ಬೆಸ್ಟ್ ಬಜೆಟ್
ಐದು ಲಕ್ಷ ಆದಾಯ ತೆರಿಗೆ ವಿನಾಯಿತಿ.
1.5 ಲಕ್ಷ 80 ಕೋಟಿ
50 ಸಾವಿರ ಸ್ಟಾಂಡರ್ಡ್ ಡಿಡಕ್ಷನ್
ಮೂಲತಃ ನೀವು ಏಳು ಲಕ್ಷದವರೆಗೂ ನೀವು ತೆರಿಗೆ ಕಟ್ಟಬೇಕಾಗಿಲ್ಲ. ಗ್ರಾಮೀಣ ಮತ್ತು ನಗರದ ಮತದಾರರ ಪರ ಕಾಳಜಿ ತೋರುವ ಮೋದಿ ಸರ್ಕಾರದ ಈ 2019ರ ಬಜೆಟ್ ಅತ್ಯುತ್ತಮವಾಗಿದೆ ಎಂದು ರಿಷಿ ಬಗ್ರಿ ಎಂಬುವವರು ಟ್ವೀಟ್ ಮಾಡಿದ್ದಾರೆ.
ಕಾಂಗ್ರೆಸ್ ಪ್ರತಿಭಟನೆ ಮಾಡುತ್ತದೆ!
ಆದಾಯ ತೆರಿಗೆ ಮಿತಿಯನ್ನು ಇಳಿಸಿದ್ದಕ್ಕೆ ಕಾಂಗ್ರೆಸ್ ಗುಲಾಮರು ನಾವು ಆದಾಯ 2.5 ಲಕ್ಷಕ್ಕಿಂತ ಹೆಚ್ಚಿದ್ದರೆ ಶೇ 5ರಷ್ಟು ತೆರಿಗೆ ನೀಡಿ ಪ್ರತಿಭಟನೆ ನಡೆಸುತ್ತೇವೆ ಎನ್ನುತ್ತಾರೆ. ಫಾಸಿಸ್ಟ್ ಮೋದಿ ವಿರುದ್ಧ ಪ್ರತಿಭಟನೆ ನಡೆಸಲು ಇದು ಅವರ ಮಾರ್ಗವಾಗಿದೆ ಎಂದು ಅಶು ಎಂಬುವವರು ಲೇವಡಿ ಮಾಡಿದ್ದಾರೆ.
ಮೊದಲ ಬಾರಿಗೆ ಪರಿಗಣನೆ
ನನ್ನ ಜೀವಿತಾವಧಿಯಲ್ಲಿ ನೆನಪಿರುವಂತೆ ತೆರಿಗೆ ಪಾವತಿಸುವ ಮಧ್ಯಮ ವರ್ಗದವರನ್ನು ಸರ್ಕಾರ ಮೊದಲ ಬಾರಿಗೆ ಪರಿಗಣಿಸಿದೆ. ಬೃಹತ್ ಆದಾಯ ತೆರಿಗೆ ವಿನಾಯಿತಿ ಬಹುದೊಡ್ಡ ನಿರಾಳತೆ ನೀಡಿದೆ. ಅಲ್ಲದೆ, ಮಧ್ಯಮ ವರ್ಗದ ಜನತೆ ನೀಡಿದ ಕೊಡುಗೆಯನ್ನು ವಿವರಿಸುವ ಮಾತುಗಳು ಮನಗಾಣುವಂಥದ್ದು ಎಂದು ಕಾಂಚನ್ ಗುಪ್ತಾ ಎಂಬುವವರು ಶ್ಲಾಘಿಸಿದ್ದಾರೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications