ನವದೆಹಲಿ, ಫೆಬ್ರವರಿ 1: ದೇಶದಲ್ಲಿ ಕಳೆದ 45 ವರ್ಷಗಳಲ್ಲಿಯೇ ಅತಿ ಹೆಚ್ಚಿನ ಪ್ರಮಾಣದಲ್ಲಿ ನಿರುದ್ಯೋಗದ ಸಮಸ್ಯೆ ಉಲ್ಬಣಿಸಿದೆ ಎಂದು ಬಿಜಿನೆಸ್ ಸ್ಟ್ಯಾಂಡರ್ಡ್ ಪತ್ರಿಕೆ ವರದಿ ಮಾಡಿತ್ತು.
ಇದು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ವಿರೋಧ ಪಕ್ಷಗಳಿಗೆ ಮತ್ತೊಂದು ಅಸ್ತ್ರ ದೊರಕಿದಂತಾಗಿದೆ.
ಈ ವರದಿಯನ್ನು ಆಧಾರವಾಗಿಟ್ಟುಕೊಂಡು ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೆ, ಕೇಂದ್ರ ಸರ್ಕಾರ ಶುಕ್ರವಾರ ಮಂಡಿಸಿದ ಮಧ್ಯಂತರ ಬಜೆಟ್ ಅನ್ನು ಸಹ ಅವರು ಟೀಕಿಸಿದ್ದಾರೆ.
45 ವರ್ಷಗಳಲ್ಲೇ ಭಾರೀ ನಿರುದ್ಯೋಗ ಸಮಸ್ಯೆ, ಕೇಂದ್ರ ಸರ್ಕಾರಕ್ಕೆ ಸಂಕಷ್ಟ?
ಇದು ಲೆಕ್ಕಾಚಾರದ ಮೇಲಿನ ಮತವಲ್ಲ, ಮತಗಳಿಗಾಗಿ ಲೆಕ್ಕಾಚಾರ ಎಂದು ಚಿದಂಬರಂ ಟ್ವಿಟ್ಟರ್ನಲ್ಲಿ ಟೀಕಿಸಿದ್ದಾರೆ.
ನಿರುದ್ಯೋಗವೂ ಬೆಳವಣಿಗೆ!
ಮೋದಿ ಸರ್ಕಾರವು ಜಿಡಿಪಿ ಬೆಳವಣಿಗೆಯ ಅಂಕಿ ಅಂಶಗಳನ್ನು ಮೇಲ್ಮುಖ ಇರುವಂತೆ ಪರಿಷ್ಕರಿಸಿದೆ. ಆದರೆ, ನಿರುದ್ಯೋಗದ ಅಂಕಿ ಅಂಶಗಳನ್ನೂ ಹೀಗೆ ಮೇಲ್ಮುಖದಲ್ಲಿ ಇರುವಂತೆ ಮಾಡಬೇಕೆಂದು ಮೋದಿ ಸರ್ಕಾರಕ್ಕೆ ಹೊಳೆದಿರಲಿಲ್ಲ.
ನಿರುದ್ಯೋಗ ಸಮಸ್ಯೆ ಕುರಿತ ವರದಿಯ ಬಗ್ಗೆ ನೀತಿ ಆಯೋಗ ಸ್ಪಷ್ಟನೆ
ನಮ್ಮದು ಇದೇ ಪ್ರಶ್ನೆ...
ಉದ್ಯೋಗ ಇಲ್ಲದೆ ಇದ್ದರೆ ದೇಶವೊಂದು ಶೇ 7ರ ಸರಾಸರಿಯಲ್ಲಿ ಬೆಳವಣಿಗೆ ಹೊಂದಲು ಹೇಗೆ ಸಾಧ್ಯ ಎಂದು ನೀತಿ ಆಯೋಗದ ಉಪಾಧ್ಯಕ್ಷರು ಪ್ರಶ್ನಿಸಿದ್ದಾರೆ. ಇದು ನಮ್ಮ ಪ್ರಶ್ನೆಯೂ ಹೌದು. ನಿರುದ್ಯೋಗವು 45 ವರ್ಷಗಳಲ್ಲಿಯೇ ಅತ್ಯಧಿಕ ಮಟ್ಟದಲ್ಲಿ ಇರುವಾಗ ಆರ್ಥಿಕತೆಯು ಶೇ 7ರ ದರದಲ್ಲಿ ಬೆಳವಣಿಗೆ ಆಗುತ್ತಿದೆ ಎಂಬುದನ್ನು ನಾವು ಹೇಗೆ ನಂಬಲು ಸಾಧ್ಯ?
ಮತ್ತೆ ನೋಟು ರದ್ದತಿ ಮಾಡುತ್ತೀರಾ?
ಮೋದಿ ಸರ್ಕಾರದಲ್ಲಿ ಅಪನಗದೀಕರಣ ಮಾಡಿದ ವರ್ಷವೇ ಅತ್ಯುತ್ತಮ ಬೆಳವಣಿಗೆಯ (ಶೇ 8.2) ವರ್ಷ ಎನಿಸಿದೆ. ಹಾಗಾದರೆ ಮತ್ತೊಂದು ಸುತ್ತಿನ ಅಪನಗದೀಕರಣ ಮಾಡಿ. ಈ ಬಾರಿ 100 ರೂ. ಮೌಲ್ಯದ ನೋಟುಗಳನ್ನು ರದ್ದುಗೊಳಿಸಿ ಎಂದು ಚಿದಂಬರಂ ಸವಾಲು ಹಾಕಿದ್ದಾರೆ.
ಕಾಂಗ್ರೆಸ್ ಕಾಪಿ
ದೇಶದ ಸಂಪನ್ಮೂಲಗಳನ್ನು ಮೊದಲು ಬಡವರು ಬಳಸುವ ಹಕ್ಕು ಹೊಂದಿದ್ದಾರೆ ಎಂಬ ಕಾಂಗ್ರೆಸ್ನ ಘೋಷಣೆಯನ್ನು ನಕಲು ಮಾಡಿರುವುದಕ್ಕೆ ಹಣಕಾಸು ಸಚಿವರಿಗೆ ಧನ್ಯವಾದಗಳು ಎಂದು ಚಿದಂಬರಂ ಲೇವಡಿ ಮಾಡಿದ್ದಾರೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications