ರೈತರ ಸಾಲ ಮನ್ನಾ ಯೋಜನೆಗೆ ಕುಮಾರಸ್ವಾಮಿ ಎಷ್ಟು ಕೋಟಿ ಘೋಷಣೆ ಮಾಡಿದ್ದಾರೆ ಗೊತ್ತಾ?
ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ 2019-20ನೇ ಸಾಲಿನ ಬಜೆಟ್ ಮಂಡನೆ ಸಂದರ್ಭದಲ್ಲಿ ರೈತ ಸಾಲಮನ್ನಾ ಕುರಿತು ಪ್ರಶಂಸನೀಯ ನಿರ್ಧಾರಗಳನ್ನು ಕೈಗೊಂಡಿದ್ದಾರೆ.
ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ 2019-20ನೇ ಸಾಲಿನ ಬಜೆಟ್ ಮಂಡನೆ ಸಂದರ್ಭದಲ್ಲಿ ರೈತ ಸಾಲಮನ್ನಾ ಕುರಿತು ಪ್ರಶಂಸನೀಯ ನಿರ್ಧಾರಗಳನ್ನು ಕೈಗೊಂಡಿದ್ದಾರೆ.
ಇಂದು ಮಂಡಿಸಿರುವ ಬಜೆಟ್ ನಲ್ಲಿ ರೈತರ ಸಾಲ ಮನ್ನಾ ಯೋಜನೆಗಾಗಿ ರೂ. 12,650 ಕೋಟಿ ಮೀಸಲಿಟ್ಟಿದ್ದಾರೆ. ರೈತರ ಸಾಲಮನ್ನಾಕ್ಕಾಗಿ ಇಲ್ಲಿಯವರೆಗೆ ಒಟ್ಟು ರೂ. 18,650 ಕೋಟಿ ಬಿಡುಗಡೆ ಮಾಡಿದಂತಾಗಿದೆ.
ರೈತರ ಸಾಲ ಮನ್ನಾಕ್ಕೆ ಸಹಕಾರಿ ಬ್ಯಾಂಕುಗಳಿಗೆ ರೂ. 6150 ಕೋಟಿ ಹಾಗು ವಾಣಿಜ್ಯ ಬ್ಯಾಂಕುಗಳಿಗೆ ರೂ. 6500 ಕೋಟಿ ಮೀಸಲಿಟ್ಟಿದ್ದು, ಜೂನ್ ಒಳಗೆ ಸಹಕಾರಿ ಬ್ಯಾಂಕುಗಳ ಸಾಲಮನ್ನಾ ಪ್ರಕ್ರಿಯೆ ಪೂರ್ಣಗೊಳಿಸಲು ಕ್ರಮ ಕೈಗೊಳ್ಲಲಾಗುವುದು ಎಂದಿದ್ದಾರೆ.
2020ರ ಮಾರ್ಚ್ ವರೆಗೆ ವಾಣಿಜ್ಯ ಬ್ಯಾಂಕುಗಳ ಸಾಲಮನ್ನಾ ಪ್ರಕ್ರಿಯೆಗೆ ಅವಕಾಶವಿದೆ. 2019-20ನೇ ಸಾಲಿನ ಬಜೆಟ್ ನಲ್ಲಿ ಕುಮಾರಸ್ವಾಮಿಯವರು ಕೃಷಿ ಮತ್ತು ಸಂಬಂಧಿಸಿದ ಇಲಾಖೆಗಳಿಗೆ ಒಟ್ಟು ರೂ. 46,853 ಕೋಟಿ ಅನುದಾನವನ್ನು ಮೀಸಲಿಟ್ಟಿದ್ದಾರೆ. ಕರ್ನಾಟಕ ಬಜೆಟ್ 2019: ಎಚ್.ಡಿ ಕುಮಾರಸ್ವಾಮಿಯವರ ಜನಪ್ರಿಯ ಯೋಜನೆಗಳ ಸಂಪೂರ್ಣ ವಿವರ..