ಬೆಂಗಳೂರು, ಫೆಬ್ರವರಿ 08: ಪ್ರವಾಸೋದ್ಯಮ ಎಂದರೆ ಉತ್ತಮವಾಗಿ ತರಬೇತಿ ಹೊಂದಿದ, ವಿವಿಧ ಭಾಷೆಯಲ್ಲಿ ಪ್ರವಾಸಿ ಸ್ಥಳದ ಬಗ್ಗೆ ವಿವರವಾದ ಮಾಹಿತಿ ನೀಡುವ ಉತ್ತಮ ಮಾರ್ಗದರ್ಶಿಗಳು ಇರಬೇಕು. ಪ್ರವಾಸಿ ವಾಹನಗಳನ್ನು ನಿರ್ವಹಿಸುವ ವ್ಯವಸ್ಥೆ ಇರಬೇಕು.
2018 ರಲ್ಲಿ ಕುಮಾರಸ್ವಾಮಿ ಬಜೆಟ್ ನಲ್ಲಿ ಪ್ರವಾಸೋದ್ಯಮಕ್ಕೆ ಸಿಕ್ಕಿದ್ದೇನು?
ಈ ಹಿನ್ನೆಲೆಯಲ್ಲಿ ಮಾನವ ಸಂಪನ್ಮೂಲವನ್ನು ನಿರಂತರವಾಗಿ ತರಬೇತಿಯ ಮುಖಾಂತರ ಉತ್ತೇಜಿಸಲು ಮುಂದಾಗಿದೆ. ಖಾಸಗಿ ಸಹಭಾಗಿತ್ವದಲ್ಲಿ ಒಂದು ಪ್ರವಾಸೋದ್ಯಮ ವಿಶ್ವವಿದ್ಯಾನಿಲಯವನ್ನು ಐತಿಹಾಸಿಕ ಸ್ಥಳವಾದ ಹಂಪಿಯಲ್ಲಿ ಕಳೆದ ಬಜೆಟ್ ನಲ್ಲಿ ಘೋಷಿಸಿದ 3 ಕೋಟಿ ರು ಅನುದಾನ ಮುಂದುವರಿಕೆ.
ಕರ್ನಾಟಕ ಬಜೆಟ್ ಅಧಿವೇಶನ, ಎಚ್ಡಿಕೆ ಬಜೆಟ್ ಮಂಡನೆ, ಬಿಜೆಪಿ ಪ್ರತಿಭಟನೆ : ಚಿತ್ರಗಳು
ಪ್ರವಾಸಿಗರನ್ನು ಆಕರ್ಷಿಸಲು 'ಕರ್ನಾಟಕ ಅಂತಾರಾಷ್ಟ್ರೀಯ ಪ್ರವಾಸೋದ್ಯಮ ಪ್ರದರ್ಶನ' ಆಯೋಜನೆಗೆ 2 ಕೋಟಿ ರು ಅನುದಾನ ನೀಡಲಾಗಿದೆ. ರಾಮನಗರದ ಬಳಿ ಆರ್ಟ್ಸ್ ಅಂಡ್ ಕ್ರಾಫ್ಟ್ ವಿಲೇಜ್ ಮತ್ತು ಕಣ್ವ ಜಲಾಶಯದ ಪ್ರದೇಶದಲ್ಲಿ ಚಿಲ್ಡ್ರನ್ಸ್ ವರ್ಲ್ಡ್ ಯೋಜನೆ ಖಾಸಗಿ ಸಹಭಾಗಿತ್ವದೊಂದಿಗೆ ಅಭಿವೃದ್ಧಿ ಪಡಿಸಲಾಗುವುದು. ಬೇಲೂರು, ಹಂಪಿ ಮತ್ತು ವಿಜಯಪುರದಲ್ಲಿ ಪ್ರವಾಸೋದ್ಯಮದ ಸಮಗ್ರ ಅಭಿವೃದ್ಧಿಗೆ ಸಂಕಲ್ಪ. ಈ ಮೂರು ಪ್ರವಾಸಿ ಕೇಂದ್ರಗಳಲ್ಲಿ ಪರಿಸರ ಹಾಗೂ ಆಹಾರದ ಶುದ್ಧತೆಯನ್ನು ಕಾಪಾಡಲು ಸರ್ಕಾರಿ ಸ್ಥಳೀಯ ಸಂಸ್ಥೆಗಳಿಗೆ 20 ಕೋಟಿ ರೂ. ಅನುದಾನ.
ಬಾದಾಮಿ ಅಭಿವೃದ್ಧಿಗೆ ಹೆಚ್ಚಿನ ಒತ್ತು
ಬಾದಾಮಿಯನ್ನು ವಿಶ್ವವಿಖ್ಯಾತ ಪ್ರವಾಸಿ ತಾಣವನ್ನಾಗಿ ಮತ್ತು ಕರಕುಶಲ ಮಾರುಕಟ್ಟೆಯನ್ನು ಅಭಿವೃದ್ಧಿ ಪಡಿಸಲು 25 ಕೋಟಿ ರು ಅನುದಾನ. ಹಂಪಿಯಲ್ಲಿ ಹಂಪಿ ವ್ಯಾಖ್ಯಾನ ಕೇಂದ್ರ ಹಾಗೂ ವಿಜಯಪುರದಲ್ಲಿ ವಿಜಯಪುರ ಪ್ರವಾಸೋದ್ಯಮ ವ್ಯಾಖ್ಯಾನ ಕೇಂದ್ರಗಳನ್ನು ಸ್ಥಾಪಿಸಲು ತಲಾ 1 ಕೋಟಿ ರು ಅನುದಾನ
ಮೈಸೂರಿನಲ್ಲಿ ಲಂಡನ್ನಿನ ಬಿಗ್ ಬಸ್ ಮಾದರಿ ಬಸ್
ವಿಶ್ವವಿಖ್ಯಾತ ಮೈಸೂರಿನ ಪ್ರವಾಸಿ ತಾಣಗಳ ವೀಕ್ಷಣೆಗೆ ಕೆಎಸ್ ಟಿಡಿಸಿ ವತಿಯಿಂದ ಲಂಡನ್ನಿನ ಬಿಗ್ ಬಸ್ ಮಾದರಿಯಲ್ಲಿ 6 ಡಬ್ಬಲ್ ಡೆಕ್ಕರ್ ತೆರೆದ ಬಸ್ ಸೇವೆ ಆರಂಭ, ಇದನ್ನು ಅನುಷ್ಠಾನಗೊಳಿಸಲು 5 ಕೋಟಿ ರು ಅನುದಾನ.
ಕಡಲ ತೀರದ ಪ್ರವಾಸೋದ್ಯಮ
ಪಣಂಬೂರು ಹಾಗೂ ಸಸಿಹಿತ್ಲುವಿನಲ್ಲಿ ಕಡಲ ತೀರದಲ್ಲಿ ಪ್ರವಾಸೋದ್ಯಮ ಅಭಿವೃದ್ಧಿಗೆ 7 ಕೋಟಿ ರು ಅನುದಾನ. ಇಲಾಖೆಯ ಒಟ್ಟು 834 ಸಂರಕ್ಷಿತ ಸ್ಮಾರಕಗಳಲ್ಲಿ, 600 ಸ್ಮಾರಕಗಳ ಸಮೀಕ್ಷೆ ಹಾಗೂ ಸಂರಕ್ಷಣೆಗೆ ಕ್ರಮ.
ಪ್ರವಾಸೋದ್ಯಮಕ್ಕಾಗಿ 3 ಸ್ಟಾರ್ ಹೋಟೆಲ್
500 ಕೊಠಡಿಗಳ ಸೌಲಭ್ಯವಿರುವ 3 ಸ್ಟಾರ್ ಹೋಟೆಲ್ಗಳನ್ನು ತೆರೆಯಲು ಮುಂದೆ ಬರುವ ಖಾಸಗಿ ಕಂಪನಿಗಳಿಗೆ 3 ಕೋಟಿ ರೂ.ಗಳ ಷೇರು ಬಂಡವಾಳವನ್ನು ಕೊಡಲಾಗುವುದು. ಸರ್ವಿಸ್ ಅರ್ಪಾಟ್ಮೆಂಟ್ಗಳನ್ನು ಕಟ್ಟಲು ಮುಂದೆ ಬಂದಲ್ಲಿ, ಆ ಸಂಸ್ಥೆಗಳಿಗೆ ಶೇ.30ರಷ್ಟು ಷೇರು ಬಂಡವಾಳವನ್ನು Term Sheet ಆಧಾರದ ಮೇಲೆ ನೀಡಲಾಗುವುದು. ಇದಲ್ಲದೆ, ಅಮ್ಯೂಸ್ಮೆಂಟ್ ಪಾರ್ಕ್, ಜಲಕ್ರೀಡೆ ರೀತಿಯ ಸೌಲಭ್ಯಗಳನ್ನು ಅಭಿವೃದ್ಧಿಪಡಿಸುವ ಖಾಸಗಿ ಕಂಪನಿಗಳಲ್ಲಿ ಶೇ.30ರಷ್ಟು ಷೇರು ಬಂಡವಾಳ ಹೂಡಲಾಗುವುದು.
More From GoodReturns

Mysuru: ಮೈಸೂರಲ್ಲಿ ರಾಜ್ಯದ ಮೊದಲ ಗ್ಲೋಬಲ್ ಟೆಕ್ನಾಲಜಿ ಸೆಂಟರ್ ಆರಂಭ; 10 ಸಾವಿರ ಐಟಿ ಉದ್ಯೋಗಗಳ ನಿರೀಕ್ಷೆ

Gold Price Bengaluru: ಯುಗಾದಿಗೂ ಮುನ್ನ ಚಿನ್ನದ ಬೆಲೆ ಇಳಿಕೆ; ನಿನ್ನೆಗಿಂತ 3,300 ರೂ. ಕುಸಿತ

Credit Score: ಸಾಲ ಪಡೆಯಲಷ್ಟೇ ಅಲ್ಲ, ಬ್ಯಾಂಕ್ ಉದ್ಯೋಗಕ್ಕೂ ಬೇಕಿದೆ ಕ್ರೆಡಿಟ್ ಸ್ಕೋರ್; ಈ ಬಗ್ಗೆ ತಿಳಿಯಿರಿ

Karnataka weather: ರಾಜ್ಯದ ಹಲವೆಡೆ ಆಲಿಕಲ್ಲು ಮಳೆ; ಮಾರ್ಚ್ 23ರವರೆಗೂ ಈ ಭಾಗದಲ್ಲಿ ಮಳೆ ಮುಂದುವರಿಕೆ

Silver Rates India: ಮತ್ತೆ ಗಗನಕ್ಕೇರಿದ ಬೆಳ್ಳಿ ದರ; ದಿಢೀರ್ 5,000 ರೂ. ಹೆಚ್ಚಳ

Gold Rate: ಚಿನ್ನಪ್ರಿಯರಿಗೆ ‘ಯುಗಾದಿ’ ಸಿಹಿ; ಬೆಂಗಳೂರಿನಲ್ಲಿ 24K ಬಂಗಾರದ ಬೆಲೆಯಲ್ಲಿ 27,800 ರೂ. ಕುಸಿತ

LPG cylinder shortage: ಬೆಂಗಳೂರಲ್ಲಿ 1,700ರೂ. ಸಿಲಿಂಡರ್ 5,000 ರೂ.ಗೆ ಮಾರಾಟ..ಹೋಟೆಲ್ ಉದ್ಯಮಕ್ಕೆ ದೊಡ್ಡ ಹೊಡೆತ

Pink Line Metro: ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ; ಶೀಘ್ರದಲ್ಲಿ ಆರಂಭ, ಹೊಸ ರೈಲಿನ ಆಗಮನ

Eid-ul-Fitr 2026: ರಂಜಾನ್ ಹಬ್ಬ ಇಂದೋ, ನಾಳೆಯೋ; ಕೇರಳದಲ್ಲಿ ಮಾತ್ರ ಇಂದು ಆಚರಣೆ ಯಾಕೆ?

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ ಸ್ಥಳ ಆಯ್ಕೆ ಬಗ್ಗೆ ಹೊಸ ಅಪ್ಡೇಟ್; ಡಿ.ಕೆ ಶಿವಕುಮಾರ್ ಬಳಿ ಸುಳಿವು

Tumkur Railway: ತುಮಕೂರಿನ ಈ ಭಾಗದಲ್ಲಿ ಲೆವೆಲ್ ಕ್ರಾಸಿಂಗ್ ಕಾಮಗಾರಿ; ಸುಮಾರು 25 ರೈಲುಗಳ ಸಂಚಾರ ವ್ಯತ್ಯಯ



Click it and Unblock the Notifications