ಬೆಂಗಳೂರು, ಫೆಬ್ರವರಿ 8: ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಶುಕ್ರವಾರ ಸಮ್ಮಿಶ್ರ ಸರ್ಕಾರದ ಎರಡನೆಯ ಬಜೆಟ್ ಮಂಡಿಸಿದರು. ಸಿರಿಧಾನ್ಯ ಬೆಳೆಗೆ ಉತ್ತೇಜನ, ಸಾವಯವ ಕೃಷಿಗೆ ಪ್ರೋತ್ಸಾಹ, ರೈತಸಿರಿ ಯೋಜನೆಯಂತಹ ವಿವಿಧ ಘೋಷಣೆಗಳನ್ನು ಅವರು ಪ್ರಕಟಿಸಿದರು.
ಕೃಷಿ ವಲಯಕ್ಕೆ ಪ್ರತ್ಯೇಕವಾಗಿ ಅವರು ಘೋಷಿಸಿದ ವಿವಿಧ ಯೋಜನೆಗಳು, ಅನುದಾನಗಳ ನೆರವಿನ ವಿವರಗಳು ಇಲ್ಲಿವೆ.
* ಕೃಷಿ ಭಾಗ್ಯ ಯೋಜನೆಗೆ 250 ಕೋಟಿ ರೂ. ಅನುದಾನ.
* ಶೂನ್ಯ ಬಂಡವಾಳ ಕೃಷಿ ಯೋಜನೆಗೆ 40 ಕೋಟಿ ರೂ. ಅನುದಾನ.
* ಸಾವಯವ ಕೃಷಿ ಯೋಜನೆಗೆ 35 ಕೋಟಿ ರೂ.
* ಸಾವಯವ ಮತ್ತು ಶೂನ್ಯ ಬಂಡವಾಳ ಕೃಷಿ ಉತ್ಪನ್ನಗಳ ವರ್ಗೀಕರಣ, ಪ್ಯಾಕಿಂಗ್ ಮತ್ತು ಬ್ರಾಂಡಿಂಗ್ ಘಟಕಗಳಿಗೆ ಪ್ರೋತ್ಸಾಹ; ಅರ್ಹ ಉದ್ದಿಮೆದಾರು, ನವೋದ್ಯಮಿಗಳಿಗೆ ಶೇ. 50 ಪ್ರೋತ್ಸಾಹಧನ; 2 ಕೋಟಿ ರೂ. ಅನುದಾನ.
* ಇಸ್ರೇಲ್ ಮಾದರಿ ಕೃಷಿ ಯೋಜನೆಗೆ 145 ಕೋಟಿ ರೂ.
* ಸಿರಿಧಾನ್ಯ ಬೆಳೆಗಾರರಿಗೆ ಉತ್ತೇಜನ ನೀಡಲು "ರೈತಸಿರಿ" ಯೋಜನೆಯಡಿ ಪ್ರತಿ ಹೆಕ್ಟೇರ್ಗೆ 10 ಸಾವಿರ ರೂ. ನಗದು ಪ್ರೋತ್ಸಾಹ; 10 ಕೋಟಿ ರೂ. ಅನುದಾನ.
* ಕರಾವಳಿ ಮತ್ತು ಮಲೆನಾಡು ಭಾಗದ ರೈತರಿಗೆ ಭತ್ತ ಬೆಳೆಯಲು ಪ್ರೇರಣೆ-ಹೆಕ್ಟೇರ್ಗೆ 7500 ರೂ. ಪ್ರೋತ್ಸಾಹಧನ ನೀಡುವ "ಕರಾವಳಿ ಪ್ಯಾಕೇಜ್"ಗೆ 5 ಕೋಟಿ ರೂ. ಅನುದಾನ.

* "ಮುಖ್ಯಮಂತ್ರಿಗಳ ¸ ಸೂಕ್ಷ್ಮ ನೀರಾವರಿಯೋಜನೆಗೆ 2019-20 ನೇ ಸಾಲನಲ್ಲಿ 368 ಕೋಟಿ ರೂ. ಅನುದಾನ.
* ರಾಜ್ಯದ ಅತಿ ಹೆಚ್ಚು ಬರಪೀಡಿತ ಹಾಗೂ ಅಂತರ್ಜಲ ಮಟ್ಟ ಕುಸಿದಿರುವ 100 ತಾಲ್ಲೂಕುಗಳಲ್ಲಿ 2024ರವರೆಗೆ ಬರ ನಿರೋಧಕ ಜಲಾನಯನ ಚಟುವಟಿಕೆ ಕೈಗೊಳ್ಳಲು 100 ಕೋಟಿ ರೂ ಅನುದಾನ.
* ಕರ್ನಾಟಕ ರಾಜ್ಯ ಬೀಜ ಪ್ರಮಾಣೀಕರಣ ಸಂಸ್ಥೆಯ ಉನ್ನತೀಕರಣ ಹಾಗೂ ಕರ್ನಾಟಕ ರಾಜ್ಯ ಬೀಜ ನಿಗಮದ ಅಭಿವೃದ್ಧಿ ಕಾರ್ಯಗಳಿಗೆ ತಲಾ 5 ಕೋಟಿ ರೂ. ನಿಗದಿ.
* ರಾಜ್ಯದಲ್ಲಿ ಪ್ರತ್ಯೇಕ ಬೆಳೆ ವಿಮಾ ಯೋಜನೆ ಜಾರಿಗೆ ತರುವ ಬಗ್ಗೆ ಪರಿಶೀಲನೆ.
* ಮಂಡ್ಯ ಜಿಲ್ಲೆಯ ವಿ.ಸಿ. ಫಾರಂ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರು ತಾಲ್ಲೂಕಿನಲ್ಲಿ ಕೃಷಿ ಪ್ರಾತ್ಯಕ್ಷಿಕೆ ಸಂಸ್ಥೆ ಸ್ಥಾಪನೆಗೆ ಕ್ರಮ. 2019-20 ರಲ್ಲಿ 10 ಕೋಟಿ ರೂ. ಅನುದಾನ.
More From GoodReturns

Bengaluru Gold: ಬೆಂಗಳೂರಿನ ಚಿನ್ನ ಪ್ರಿಯರಿಗೆ ಶಾಕ್; ದಿಢೀರ್ 7000 ರೂ. ಏರಿಕೆ ಕಂಡ ಬಂಗಾರ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Mandya ARAI Centre: ಮಂಡ್ಯಕ್ಕೆ ಮತ್ತೊಂದು ಮೆಗಾ ಗಿಫ್ಟ್…500 ಕೋಟಿ ಹೂಡಿಕೆಯಲ್ಲಿ ARAIನ ಸುಧಾರಿತ ಕೇಂದ್ರ ಸ್ಥಾಪನೆ!

Karnataka Budget 2026: 4.49 ಲಕ್ಷ ಕೋಟಿಯ ದಾಖಲೆ ಬಜೆಟ್…ಈ ಬಜೆಟ್ನಲ್ಲಿ ಜನಸಾಮಾನ್ಯರಿಗೆ ಸಿಕ್ಕ ಕೊಡುಗೆ ಏನು?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Karnataka Budget 2026 Live Updates: ಕರ್ನಾಟಕ ಬಜೆಟ್ನ ಪ್ರಮುಖ ಘೋಷಣೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

North Karnataka: ಕೈಗಾರಿಕೆ, ಕೃಷಿ, ಶಿಕ್ಷಣ..ಉತ್ತರ ಕರ್ನಾಟಕಕ್ಕೆ ಸರ್ಕಾರದಿಂದ ಸಿಕ್ಕ ಹೊಸ ಯೋಜನೆಗಳು ಏನು?

ಕರ್ನಾಟಕ ಬಜೆಟ್ 2026: ಕೃಷಿ, ಶಿಕ್ಷಣ, ಸಾರಿಗೆ, ವೈದ್ಯಕೀಯ ಕ್ಷೇತ್ರಗಳ ನಿರೀಕ್ಷೆ ಏನು? ಬಜೆಟ್ ಮೇಲೆ ಭಾರಿ ಬೇಡಿಕೆ

Karnataka Budget 2026–27: ಬೆಂಗಳೂರು ಮೂಲಸೌಕರ್ಯ ಮತ್ತು ಕಲ್ಯಾಣ ಯೋಜನೆಗಳಿಗೆ ಒತ್ತು ಸಾಧ್ಯತೆ!

Karnataka Weather: ರಾಜ್ಯದ ಜನರಿಗೆ ಬಿಸಿಲಿನ ಕಂಟಕ! ಹವಾಮಾನ ಇಲಾಖೆಯಿಂದ ಎಚ್ಚರಿಕೆ

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?



Click it and Unblock the Notifications