ಬೆಂಗಳೂರು, ಫೆಬ್ರವರಿ 8: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಲಯಗಳ ಅಭಿವೃದ್ಧಿಗೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹಲವು ಘೋಷಣೆಗಳನ್ನು ಮಾಡಿದ್ದಾರೆ.
* 2019ಅನ್ನು ಜಲವರ್ಷ ಎಂದು ಘೋಷಣೆ. 'ಜಲಾಮೃತ' ಯೋಜನೆಯಡಿ 20,000 ಜಲಸಂರಕ್ಷಣಾ ಕಾಮಗಾರಿಗಳನ್ನು ನೈಸರ್ಗಿಕ ಸಂಪನ್ಮೂಲ ನಿರ್ವಹಣಾ ಕಾಮಗಾರಿಗಳಡಿ ನಿರ್ವಹಿಸಲು 500 ಕೋಟಿ ರೂ. ಅನುದಾನ.
* ರಾಯಚೂರು, ವಿಜಯಪುರ, ಮಂಡ್ಯ ಮತ್ತು ಕೋಲಾರ ಜಿಲ್ಲೆಗಳಲ್ಲಿ 4000 ಕೋಟಿ ರೂ. ವೆಚ್ಚದಲ್ಲಿ 'ಜಲಧಾರೆ' ಮೊದಲ ಹಂತದ ಯೋಜನೆ ಪ್ರಾರಂಭಿಸಲು ಕ್ರಮ.

* ನರೇಗಾ ಯೋಜನೆಯಡಿ 12 ಕೋಟಿ ಮಾನವ ದಿನಗಳ ಸೃಜನೆಯ ಗುರಿ.
* "ಸುಭದ್ರ ಶಾಲೆ ಯೋಜನೆ"ಯಡಿ ರಾಜ್ಯದ 6825 ಗ್ರಾಮೀಣ ಶಾಲೆಗಳಿಗೆ ನರೇಗಾ ಯೋಜನೆ ಮೂಲಕ 90 ಕೋಟಿ ರೂ. ವೆಚ್ಚದಲ್ಲಿ ಕಾಂಪೌಂಡ್ ತಡೆಗೋಡೆಗಳ ನಿರ್ಮಾಣ.
* 1000 ಗ್ರಾಮ ಪಂಚಾಯಿತಿಗಳಲ್ಲಿ ಘನತ್ಯಾಜ್ಯ ವಿಲೇವಾರಿಗಾಗಿ ಒಣ ಮತ್ತು ಹಸಿ ತ್ಯಾಜ್ಯವನ್ನು ವಿಂಗಡಿಸಿ ಒಣ ಕಸ ಮರುಬಳಕೆ ಹಾಗೂ ಹಸಿ ಕಸವನ್ನು ಗೊಬ್ಬರವಾಗಿ ಪರಿವರ್ತಿಸುವ "ಸ್ವಚ್ಛಮೇವ ಜಯತೆ" ಆಂದೋಲನ.
* ಗ್ರಾಮ ಪಂಚಾಯತಿ ವ್ಯಾಪ್ತಿಯ ಎಲ್ಲಾ ಆಸ್ತಿಗಳ ಡಿಜಿಟಲೀಕರಣ; ತೆರಿಗೆ ವ್ಯಾಪ್ತಿಯ ಹೊರಗೆ ಉಳಿದ ಆಸ್ತಿಗಳನ್ನು ತೆರಿಗೆ ವ್ಯಾಪ್ತಿಗೆ ಸೇರ್ಪಡೆಗೆ ಕ್ರಮ.
* ಪ್ರತಿ ಜಿಲ್ಲಾ ಪಂಚಾಯತಿಯ ಅನಿರ್ಬಂಧಿತ ಅಭಿವೃದ್ಧಿ ಅನುದಾನ ಗರಿಷ್ಠ 8 ಕೋಟಿ ರೂ. ಗಳಿಗೆ ಹೆಚ್ಚಳ; ಇದಕ್ಕಾಗಿ 172 ಕೋಟಿ ರೂ.ಗಳ ಅನುದಾನ.
* ಪ್ರತಿ ತಾಲ್ಲೂಕು ಪಂಚಾಯತಿಯ ಅನಿರ್ಬಂಧಿತ ಅಭಿವೃದ್ಧಿ ಅನುದಾನ ಗರಿಷ್ಠ 2 ಕೋಟಿ ರೂ.ಗಳವರೆಗೆ ಹೆಚ್ಚಳ. ಇದಕ್ಕಾಗಿ 372 ಕೋಟಿ ರೂ. ಅನುದಾನ.
* ಮಹಾತ್ಮಾ ಗಾಂಧೀಜಿಯವರ 150 ನೇ ಜಯಂತಿ ಅಂಗವಾಗಿ ಗ್ರಾಮ ಪಂಚಾಯಿತಿಗಳ ಆಡಳಿತದಲ್ಲಿ ಪಾರದರ್ಶಕತೆ ಬಿಂಬಿಸಲು ಮತ್ತು ಸಾರ್ವಜನಿಕರ ಮಾಹಿತಿಗಾಗಿ ಗ್ರಾಮ ಪಂಚಾಯಿತಿ ಆಯವ್ಯಯ ಕಿರು ಪುಸ್ತಕ ಪ್ರಕಟಣೆ.
ಯೋಜನೆ ಮತ್ತು ಪ್ರದೇಶಾಭಿವೃದ್ಧಿ
* ಹೈದರಾಬಾದ್-ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಗೆ ಈ ವರ್ಷ 1,500 ಕೋಟಿ ರೂ. ಅನುದಾನ; ಹಾಗೂ ಮಲೆನಾಡು ಅಭಿವೃದ್ಧಿ ಪ್ರಾಧಿಕಾರಕ್ಕೆ 70 ಕೋಟಿ ರೂ. ಬಯಲುಸೀಮೆ ಅಭಿವೃದ್ಧಿ ಪ್ರಾಧಿಕಾರಕ್ಕೆ 95 ಕೋಟಿ ರೂ. ಹಾಗೂ ಕರಾವಳಿ ಅಭಿವೃದ್ಧಿ ಪ್ರಾಧಿಕಾರಕ್ಕೆ 30 ಕೋಟಿ ರೂ. ಅನುದಾನದಲ್ಲಿ ಕ್ರಿಯಾ
ಯೋಜನೆ ಕೈಗೆತ್ತಿಕೊಳ್ಳಲು ಕ್ರಮ.
* ಶಾಸಕರ ಸ್ಥಳೀಯ ಅಭಿವೃದ್ಧಿ ಯೋಜನೆಗಳಿಗಾಗಿ 600 ಕೋಟಿ ರೂ. ಅನುದಾನ.
* ನಂಜುಂಡಪ್ಪ ಸಮಿತಿ ಶಿಫಾರಸುಗಳ ಅನ್ವಯ ಅತೀ ಹಿಂದುಳಿದ ಹಾಗೂ ಹಿಂದುಳಿದ ತಾಲ್ಲೂಕುಗಳ ಅಭಿವೃದ್ಧಿಗಾಗಿ ವಿಶೇಷ ಅಭಿವೃದ್ಧಿ ಯೋಜನೆಯಡಿ 3010 ಕೋಟಿ ರೂ. ಅನುದಾನ.
More From GoodReturns

Bengaluru Gold: ಬೆಂಗಳೂರಿನ ಚಿನ್ನ ಪ್ರಿಯರಿಗೆ ಶಾಕ್; ದಿಢೀರ್ 7000 ರೂ. ಏರಿಕೆ ಕಂಡ ಬಂಗಾರ

Karnataka Budget 2026: 4.49 ಲಕ್ಷ ಕೋಟಿಯ ದಾಖಲೆ ಬಜೆಟ್…ಈ ಬಜೆಟ್ನಲ್ಲಿ ಜನಸಾಮಾನ್ಯರಿಗೆ ಸಿಕ್ಕ ಕೊಡುಗೆ ಏನು?

Karnataka Budget 2026 Live Updates: ಕರ್ನಾಟಕ ಬಜೆಟ್ನ ಪ್ರಮುಖ ಘೋಷಣೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

Mandya ARAI Centre: ಮಂಡ್ಯಕ್ಕೆ ಮತ್ತೊಂದು ಮೆಗಾ ಗಿಫ್ಟ್…500 ಕೋಟಿ ಹೂಡಿಕೆಯಲ್ಲಿ ARAIನ ಸುಧಾರಿತ ಕೇಂದ್ರ ಸ್ಥಾಪನೆ!

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

North Karnataka: ಕೈಗಾರಿಕೆ, ಕೃಷಿ, ಶಿಕ್ಷಣ..ಉತ್ತರ ಕರ್ನಾಟಕಕ್ಕೆ ಸರ್ಕಾರದಿಂದ ಸಿಕ್ಕ ಹೊಸ ಯೋಜನೆಗಳು ಏನು?

ಕರ್ನಾಟಕ ಬಜೆಟ್ 2026: ಕೃಷಿ, ಶಿಕ್ಷಣ, ಸಾರಿಗೆ, ವೈದ್ಯಕೀಯ ಕ್ಷೇತ್ರಗಳ ನಿರೀಕ್ಷೆ ಏನು? ಬಜೆಟ್ ಮೇಲೆ ಭಾರಿ ಬೇಡಿಕೆ

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Karnataka Budget 2026–27: ಬೆಂಗಳೂರು ಮೂಲಸೌಕರ್ಯ ಮತ್ತು ಕಲ್ಯಾಣ ಯೋಜನೆಗಳಿಗೆ ಒತ್ತು ಸಾಧ್ಯತೆ!

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!



Click it and Unblock the Notifications