ಬೆಂಗಳೂರು, ಫೆಬ್ರವರಿ 08 : ಹಣಕಾಸು ಸಚಿವರೂ ಆಗಿರುವ ಕರ್ನಾಟಕದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು 2019-20ನೇ ಸಾಲಿನ ಬಜೆಟ್ ಮಂಡನೆ ಮಾಡಿದರು. 7940 ಕಿ.ಮೀ. ರಸ್ತೆಯನ್ನು ಅಭಿವೃದ್ಧಿ ಮಾಡಲಾಗುತ್ತದೆ ಎಂದು ಘೋಷಣೆ ಮಾಡಿದರು.
ಶುಕ್ರವಾರ ಎಚ್.ಡಿ.ಕುಮಾರಸ್ವಾಮಿ ಅವರು 2019-20ನೇ ಸಾಲಿನ ಬಜೆಟ್ ಮಂಡನೆ ಮಾಡಿದರು. ಲೋಕೋಪಯೋಗಿ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆಗೆ ಹಲವಾರು ಯೋಜನೆಗಳನ್ನು ಘೋಷಣೆ ಮಾಡಿದರು.
ಮಂಡ್ಯ ಪಾಂಡವಪುರ ತಾಲೂಕಿನ ಕನಗನಮರಡಿ ಗ್ರಾಮದ ಬಳಿ ವಿಸಿ ನಾಲೆಗೆ ಖಾಸಗಿ ಬಸ್ ಉರುಳಿ ಬಿದ್ದಿತ್ತು. ಈ ಘಟನೆ ಬಳಿಕ ಸರ್ಕಾರ ಎಚ್ಚೆತ್ತುಕೊಂಡಿದ್ದು, ರಸ್ತೆಗಳ ಪಕ್ಕದಲ್ಲಿ ಬರುವ ಕೆರೆಗಳು, ನಾಲೆಗಳು ಹಾಗೂ ಇತರೆ ಜಲಮೂಲಗಳ ಬಳಿ ಸುರಕ್ಷತಾ ಬ್ಯಾರಿಕೇಡ್ ಅಳವಡಿಸಲು 100 ಕೋಟಿ ರೂ. ಅನುದಾನವನ್ನು ಮೀಸಲಾಗಿಡಲಾಗಿದೆ.

2019-20ರಲ್ಲಿ ಬೀದರ್ ವಿಮಾನ ನಿಲ್ದಾಣ ಕಾರ್ಯಾಚರಣೆ ಆರಂಭಿಸಲಿದೆ. ಕಲಬುರಗಿ ವಿಮಾನ ನಿಲ್ದಾಣವೂ ಶೀಘ್ರದಲ್ಲೇ ಕಾರ್ಯಾಚರಣೆಯನ್ನು ಆರಂಭಿಸಲಿದೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಘೋಷಣೆ ಮಾಡಿದರು.
* ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಬಜೆಟ್ನಲ್ಲಿ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆ (SHDP) ಅಡಿ ಒಟ್ಟು 10,000 ಕೋಟಿ ರೂ.ಗಳಲ್ಲಿ 7,940 ಕಿ.ಮೀ ಉದ್ದದ ರಸ್ತೆಗಳನ್ನು
ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ ಎಂದು ಘೋಷಿಸಿದರು.
* 5670 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಮತ್ತು ಸೇತುವೆಗಳ ಸುಧಾರಣೆ ಮತ್ತು ನವೀಕರಣ ಕಾಮಗಾರಿ ಕೈಗೆತ್ತಿಕೊಳ್ಳಲಾಗುವುದು. ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಶಾಲಾ ಸಂಪರ್ಕ
ಸೇತು ಯೋಜನೆಯಡಿ 1317 ಸಂಖ್ಯೆಯ ಕಿರು ಸೇತುವೆಗಳನ್ನು ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
* ರಸ್ತೆಗಳ ಪಕ್ಕದಲ್ಲಿ ಬರುವ ಕೆರೆಗಳು, ನಾಲೆಗಳು ಹಾಗೂ ಇತರೆ ಜಲಮೂಲಗ ಬಳಿ ಸು ರಕ್ಷತಾ ಬ್ಯಾರಿಯರ್ ಅಳವಡಿಸಲು 100 ಕೋಟಿ ರೂ. ಅನುದಾನ.
* ರಾಜ್ಯದ ವಿಮಾನ ನಿಲ್ದಾಣಗಳ ಮೂಲಭೂತ ಸೌಲಭ್ಯಗಳ ಸಮಗ್ರ ಅಭಿವೃದ್ಧಿಗೆ ಕೈಗೆತ್ತಿಕೊಳ್ಳಲಾಗುತ್ತದೆ ಎಂದರು. 2019-20ನೇ ಸಾಲಿನಲ್ಲಿ ಬೀದರ್ ನಾಗರಿಕ ವಿಮಾನ ನಿಲ್ದಾಣ ಕಾರ್ಯಾಚರಣೆ ಪ್ರಾರಂಭಿಸಲು ಕ್ರಮ ಕೈಗೊಳ್ಳಲಾಗುತ್ತದೆ ಎಂದರು.
* ಕಲಬುರಗಿ ವಿಮಾನನಿಲ್ದಾಣ ಕಾರ್ಯಾಚರಣೆ ಶೀಘ್ರ ಪ್ರಾರಂಭವಾಗಲಿದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಏರ್ಸ್ಟ್ರಿಪ್ ಪಿಪಿಪಿ ಮಾದರಿಯಲ್ಲಿ ಅಬಿವೃದ್ಧಿ ಹಾಗೂ ಹಾಸನ
ವಿಮಾನನಿಲ್ದಾಣದ ಅಭಿವೃದ್ಧಿಗೆ ಕ್ರಮ.
* ರಸ್ತೆ ಮೇಲುಸೇತುವೆ / ಕೆಳಸೇತುವೆಗೆ ಭೂಸ್ವಾಧೀನ ಹಾಗೂ ನಿರ್ಮಾಣಕ್ಕಾಗಿ ಬಜೆಟ್ನಲ್ಲಿ 70 ಕೋಟಿ ರೂ. ಅನುದಾನ ಮೀಸಲಾಗಿಡಲಾಗಿದೆ.
More From GoodReturns

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Karnataka Highway: ರಾಜ್ಯದ ಈ ಭಾಗಕ್ಕೆ ಹೈವೇ ಡಿಮ್ಯಾಂಡ್…ಕೇಂದ್ರಕ್ಕೆ ಮನವಿ ಮಾಡಿದ ಸಂಸದೆ ಪ್ರಭಾ ಮಲ್ಲಿಕಾರ್ಜುನ್!

Karnataka Weather: ರಾಜ್ಯದ ಜನರಿಗೆ ಬಿಸಿಲಿನ ಕಂಟಕ! ಹವಾಮಾನ ಇಲಾಖೆಯಿಂದ ಎಚ್ಚರಿಕೆ

Tata Groups: ಕರ್ನಾಟಕದಲ್ಲಿ ಟಾಟಾ ಸಂಸ್ಥೆ 2.9 ಬಿಲಿಯನ್ ಡಾಲರ್ ಹೂಡಿಕೆ…ಸಾವಿರಾರು ಉದ್ಯೋಗಿಗಳಿಗೆ ಗುಡ್ನ್ಯೂಸ್!

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Gruha Lakshmi: ಅಯ್ಯಯ್ಯೊ..79 ಕೋಟಿ ಗೃಹಲಕ್ಷ್ಮಿ ಹಣ ಮೃತರ ಖಾತೆಗೆ ಜಮಾ… 2.3 ಲಕ್ಷ ಫಲಾನುಭವಿಗಳ ಖಾತೆ ತಡೆ!

Rain-Summer: ರಾಜ್ಯದಲ್ಲಿ ಮತ್ತೆ ವರುಣನ ಅಬ್ಬರ ಶುರು! ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

Karnataka Property: ಕರ್ನಾಟಕದಲ್ಲಿ ದುಬಾರಿಯಾಗಲಿದೆ ಜಾಗದ ಮೌಲ್ಯ! ಯಾವಾಗದಿಂದ ಗೊತ್ತಾ?

Alireza Arafi: ಇಸ್ರೇಲ್ ದಾಳಿಯಲ್ಲಿ ಖಮೇನಿ ನಿಧನ: ಅಲಿರೆಜಾ ಅರಾಫಿ ತಾತ್ಕಾಲಿಕ ಸುಪ್ರೀಂ ನಾಯಕನಾಗಿ ನೇಮಕ!

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!



Click it and Unblock the Notifications