ಗ್ರಾಹಕರು ನೂತನ ದರ ನೀತಿಯನ್ನು ಆಯ್ಕೆ ಮಾಡಿಕೊಳ್ಳಲು ಅವಧಿಯನ್ನು ವಿಸ್ತರಿಸಲಾಗಿದೆ. ಚಾನೆಲ್ ಆಯ್ಕೆ ಪ್ರಕ್ರಿಯೆಯಲ್ಲಿ ಇರುವ ಗೊಂದಲದಿಂದಾಗಿ ಹೆಚ್ಚಿನ ಗ್ರಾಹಕರು ನೂತನ ನೀತಿಗೆ ಬದಲಾಗದೆ ಇರುವುದರಿಂದ ಅವಧಿಯನ್ನು ಮತ್ತೊಮ್ಮೆ ವಿಸ್ತರಿಸಲಾಗಿದೆ.
ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ (ಟ್ರಾಯ್) ಕೇಬಲ್ ಹಾಗೂ ಡಿಟಿಎಚ್ ಗ್ರಾಹಕರಿಗೆ ಸಿಹಿ ಸುದ್ದಿ ನೀಡಿದೆ.
ಗ್ರಾಹಕರು ನೂತನ ದರ ನೀತಿಯನ್ನು ಆಯ್ಕೆ ಮಾಡಿಕೊಳ್ಳಲು ಅವಧಿಯನ್ನು ವಿಸ್ತರಿಸಲಾಗಿದೆ. ಚಾನೆಲ್ ಆಯ್ಕೆ ಪ್ರಕ್ರಿಯೆಯಲ್ಲಿ ಇರುವ ಗೊಂದಲದಿಂದಾಗಿ ಹೆಚ್ಚಿನ ಗ್ರಾಹಕರು ನೂತನ ನೀತಿಗೆ ಬದಲಾಗದೆ ಇರುವುದರಿಂದ ಅವಧಿಯನ್ನು ಮತ್ತೊಮ್ಮೆ ವಿಸ್ತರಿಸಲಾಗಿದೆ. ಫೆ.1 ರಿಂದ ಹೊಸ ನಿಯಮ ಜಾರಿ: ಕೇಬಲ್ ಟಿವಿ, ಡಿಟಿಹೆಚ್ ಚಾನೆಲ್ ಹೊಸ ದರದ ಮಾಹಿತಿ ಇಲ್ಲಿದೆ..
ಜನವರಿ 31 ಕೊನೆ ದಿನ
ಕೇಬಲ್ ಹಾಗೂ ಡಿಟಿಎಚ್ ಗ್ರಾಹಕರು ತಮ್ಮ ಆಯ್ಕೆ ಚಾನೆಲ್ ಗಳಿಗೆ ಮಾತ್ರ ಪಾವತಿ ಮಾಡುವ ನೂತನ ದರ ನೀತಿಯನ್ನು ಅನುಷ್ಠಾನಗೊಳಿಸಲು ಕಾಲಾವಕಾಶ ಕೋರಿದ ಹಿನ್ನಲೆಯಲ್ಲಿ ಅವಧಿಯನ್ನು 2019 ರ ಜನವರಿ 31ರ ವರೆಗೆ ವಿಸ್ತರಿಸಲಾಗಿತ್ತು. ಆದರೆ ಈ ಹಿಂದೆ 2018 ರ ಡಿಸೆಂಬರ್ 31 ಅಂತಿಮ ದಿನವೆಂದು ಟ್ರಾಯ್ ತಿಳಿಸಿತ್ತು.
ಹೊಸ ನೀತಿ ಅವಧಿ ವಿಸ್ತರಣೆ
ಟ್ರಾಯ್ ಜಾರಿ ತಂದಿರುವ ನೂತನ ದರ ನೀತಿಗೆ ಗ್ರಾಹಕರು ನಿರೀಕ್ಷಿತ ಮಟ್ಟದಲ್ಲಿ ಬದಲಾಗಿಲ್ಲ. ಈ ಹಿನ್ನಲೆಯಲ್ಲಿ ಅವಧಿಯನ್ನು 2019 ರ ಮಾರ್ಚ್ 31ರವರೆಗೆ ವಿಸ್ತರಣೆ ಮಾಡಲಾಗಿದೆ. ನೂತನ ದರ ನೀತಿ ಅಡಿಯಲ್ಲಿ ಚಾನೆಲ್ ಗಳನ್ನು ಆಯ್ಕೆ ಮಾಡಲು ಹೊಸ ನಿಯಮಾವಳಿಗಳನ್ನು ಟ್ರಾಯ್ ಜಾರಿಗೆ ತಂದಿದೆ.
ಹೊಸ ನೀತಿಗೆ ಬದಲಾದ ಗ್ರಾಹಕರೆಷ್ಟು?
ದೇಶದಲ್ಲಿ ಒಟ್ಟು 100 ಮಿಲಿಯನ್ ಕೇಬಲ್ ಹಾಗೂ 67 ಮಿಲಿಯನ್ ಡಿಟಿಎಚ್ ಗ್ರಾಹಕರಿದ್ದಾರೆ. ಟ್ರಾಯ್ ನ ನೂತನ ದರ ನೀತಿ ಜಾರಿಗೆ ಬಂದ ಬಳಿಕ ಶೇ. 65 ಕೇಬಲ್ ಹಾಗೂ ಶೇ. 35 ಡಿಟಿಎಚ್ ಗ್ರಾಹಕರು ಮಾತ್ರ ಹೊಸ ವ್ಯವಸ್ಥೆಗೆ ಬದಲಾಗಿದ್ದಾರೆ ಎನ್ನಲಾಗಿದೆ. ಚಾನೆಲ್ ಆಯ್ಕೆ ಪ್ರಕ್ರಿಯೆಯಲ್ಲಿ ಇರುವ ಗೊಂದಲದಿಂದಾಗಿ ಹೆಚ್ಚಿನ ಗ್ರಾಹಕರು ನೂತನ ನೀತಿಗೆ ಬದಲಾಗಿಲ್ಲ ಎಂದು ಹೇಳಲಾಗಿದ್ದು, ಅವಧಿಯನ್ನು ಮತ್ತೊಮ್ಮೆ ವಿಸ್ತರಿಸಲಾಗಿದೆ.
More From GoodReturns

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ



Click it and Unblock the Notifications