ಸರ್ಕಾರಿ ಸ್ವಾಮ್ಯದ ದೂರಸಂಪರ್ಕ ಸಂಸ್ಥೆ ಬಿಎಸ್ಎನ್ಎಲ್ ಆದಾಯವು ಖಾಸಗಿ ಕಂಪನಿಗಳ ತೀವ್ರ ಪೈಪೋಟಿಯಿಂದಾಗಿ ಗಣನೀಯವಾಗಿ ಕುಸಿತ ಕಂಡಿದೆ. 2017-18 ರ ಅಂತ್ಯದ ವೇಳೆಗೆ ಬಿಎಸ್ಎನ್ಎಲ್ ಒಟ್ಟು ನಷ್ಟ ರೂ. 31,287 ಕೋಟಿಗೆ ತಲುಪಿದೆ.
ಸರ್ಕಾರಿ ಸ್ವಾಮ್ಯದ ದೂರಸಂಪರ್ಕ ಸಂಸ್ಥೆ ಬಿಎಸ್ಎನ್ಎಲ್ ಆದಾಯವು ಖಾಸಗಿ ಕಂಪನಿಗಳ ತೀವ್ರ ಪೈಪೋಟಿಯಿಂದಾಗಿ ಗಣನೀಯವಾಗಿ ಕುಸಿತ ಕಂಡಿದೆ. 2017-18 ರ ಅಂತ್ಯದ ವೇಳೆಗೆ ಬಿಎಸ್ಎನ್ಎಲ್ ಒಟ್ಟು ನಷ್ಟ ರೂ. 31,287 ಕೋಟಿಗೆ ತಲುಪಿದೆ. ಈ ಹಿನ್ನೆಲೆಯಲ್ಲಿ ಬಿಎಸ್ಎನ್ಎಲ್ ಅನ್ನು ಮುಚ್ಚುವ/ಕಾಯಕಲ್ಪ ನೀಡುವ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ.
ಸರ್ವೈವಲ್ ರಿಪೋರ್ಟ್
ಬಿಎಸ್ಎನ್ಎಲ್ ಮುಂದಿನ ಭವಿಷ್ಯದ ಕುರಿತಾಗಿ ಚಿಂತನೆ ನಡೆಸಿರುವ ಕೇಂದ್ರ ಸರ್ಕಾರ, ಬಂಡವಾಳ ಹಿಂತೆಗೆತ ಅಥವಾ ಮುಚ್ಚುವ ಬಗ್ಗೆ ಪರಿಶೀಲನೆ ನಡೆಸಿದೆ.
ಕಾಯಕಲ್ಪ ನೀಡುವ ಕುರಿತು ಪರಿಶೀಲನೆ ನಡೆಸಿದ್ದು ಕೇಂದ್ರ ಸರ್ಕಾರ ಸರ್ವೈವಲ್ ರಿಪೋರ್ಟ್ (survival report) ಸಿದ್ದಪಡಿಸಲು ಹೇಳಿದೆ. ಸರ್ಕಾರ ಯಾವ ನಿರ್ಧಾರ ಕೈಗೊಳ್ಳಬಹುದು ಎಂಬ ಆತಂಕ ನೌಕರರ ವಲಯದಲ್ಲಿ ಮೂಡಿಸಿದೆ.
ವರದಿ ಆಧಾರದ ಮೇಲೆ ನಿರ್ಧಾರ?
ಸಂಸ್ಥೆಯ ಪುನರುಜ್ಜೀವನಕ್ಕೆ ಸಹಾಯವಾಗಬಲ್ಲ ಮಾರ್ಗಗಳನ್ನು ಸೂಚಿಸಲು ಹಾಗು ಮತ್ತೆ ಲಾಭದಾಯಕವಾಗಿಸಲು ಕೈಗೊಳ್ಳಬಹುದಾದ ಯೋಜನೆಗಳ ಬಗ್ಗೆ ಮಾಹಿತಿ ಕೇಳಲಾಗಿದೆ. ಈ ವರದಿ ಆಧಾರದ ಮೇಲೆ ಯಾವ ನಿರ್ಧಾರ ಕೈಗೊಳ್ಳುವುದು ಸೂಕ್ತ ಎಂಬುದರ ಕುರಿತಾಗಿ ಪರಿಶೀಲನೆ ನಡೆಸಿ ಬಳಿಕ ನಿರ್ಧಾರ ಕೈಗೊಳ್ಳಲಾಗುವುದು.
ಜಿಯೋ ಪ್ರವೇಶಾತಿ ಹೊಡೆತ
ಜಿಯೋ ಪ್ರವೇಶಾತಿ ಬಳಿಕ ಬಿಎಸ್ಎನ್ಎಲ್ ಆದಾಯ ಗಣನೀಯ ಪ್ರಮಾಣದಲ್ಲಿ ಕುಸಿದಿದ್ದು, ಮಾರುಕಟ್ಟೆಯಲ್ಲಿ ತೀವ್ರ ಸ್ಪರ್ಧೆ ಎದುರಾಗಿದೆ. ಬಿಎಸ್ಎನ್ಎಲ್ ಸಂಸ್ಥೆಯಲ್ಲಿ ಭಾರಿ ಸಂಖ್ಯೆಯ ಸಿಬ್ಬಂದಿಗಳಿದ್ದು, ಅದರಲ್ಲಿಯೂ ಹಿರಿಯರ ಸಂಖ್ಯೆ ಹೆಚ್ಚಿನ ಪ್ರಮಾಣದಲ್ಲಿ ಇದೆ.
ಅತಿ ಹೆಚ್ಚು ನಷ್ಟ
ಬಿಎಸ್ಎನ್ಎಲ್ ಹೊಂದಿರುವ ರೂ. 15,000 ಕೋಟಿ ಮೌಲ್ಯದ ಕಟ್ಟಡಗಳು, ಇತರೆ ಆಸ್ತಿಗಳ ಮೂಲಕ ಸಂಪನ್ಮೂಲ ಸಂಗ್ರಹಿಸುವ ಪ್ರಸ್ತಾಪವನ್ನು ಮುಂದಿಡಲಾಗಿದೆ. ಸ್ವಯಂ ನಿವೃತ್ತಿ ಯೋಜನೆಗೆ ಅರ್ಹ ವಯೋಮಿತಿಯನ್ನು ಸಡಿಲಿಸಿದರೆ ಅದಕ್ಕೆ ತಗಲುವ ವೆಚ್ಚ ಕೂಡ ಏರಿಕೆಯಾಗುತ್ತದೆ.
ಸಾರ್ವಜನಿಕ ಕಂಪನಿಗಳ ಪೈಕಿ ಅತಿ ಹೆಚ್ಚು ನಷ್ಟವನ್ನು ಬಿಎಸ್ಎನ್ಎಲ್ ದಾಖಲಿಸಿದ್ದು, ಈ ಕಾರಣಗಳಿಂದ ಮುಚ್ಚುವ ಬಗ್ಗೆ ಪರಿಶೀಲನೆ ನಡೆದಿದೆ ಎಂದು ಹೇಳಲಾಗಿದೆ.
ಮೂರು ಆಯ್ಕೆಗಳು?
ಆದರಿಂದ, ಬಿಎಸ್ಎನ್ಎಲ್ ಗಾಗಿ ಸರ್ಕಾರ ಈ ಮೂರು ಅಂಶಗಳನ್ನು ಪರಿಗಣಿಸುತ್ತಿದೆ ಎಂಬುದನ್ನು ನಾವು ಗಮನಿಸಬಹುದು.
ಮುಚ್ಚುವಿಕೆ: ಬಿಎಸ್ಎನ್ಎಲ್ ಮತ್ತು ಅದರ ಎಲ್ಲ ಕಾರ್ಯಚರಣೆಗಳನ್ನು ಸ್ಥಗಿತಗೊಳಿಸದಂತಾಗುತ್ತದೆ.
ಕಾರ್ಯತಂತ್ರದ ಹೂಡಿಕೆ: ಬಿಎಸ್ಎನ್ಎಲ್ ಚಾಲನೆಯಲ್ಲಿರುವ ಸಲುವಾಗಿ ಖಾಸಗಿ ಸಂಸ್ಥೆಗಳ ಪ್ರವೇಶವ ಕ್ಕೆ ಅವಕಾಶ ನೀಡಬೇಕಾಗುತ್ತದೆ.
ಫಂಡ್: ಸಂಸ್ಥೆಯ ಕಾರ್ಯಾಚರಣೆಗಳನ್ನು ಉಳಿಸಿಕೊಳ್ಳಲು ಸರಕಾರದಿಂದ ಹೆಚ್ಚಿನ ಹಣವನ್ನು ಅಳವಡಿಸುವುದು.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

New Airport: ಕಲ್ಯಾಣ ಕರ್ನಾಟಕ ಜನರಿಗೆ ಗುಡ್ನ್ಯೂಸ್; ಈ ಭಾಗದಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಚಿಂತನೆ

Hosur Airport: ಬೆಂಗಳೂರು ಹತ್ತಿರ ಹೊಸೂರು ಏರ್ಪೋರ್ಟ್ಗಾಗಿ 2,979 ಎಕರೆ ಭೂಸ್ವಾಧೀನ-ಎಲ್ಲೆಂದು ತಿಳಿಯಿರಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ



Click it and Unblock the Notifications