ಸರ್ಕಾರಿ ಸ್ವಾಮ್ಯದ ದೂರಸಂಪರ್ಕ ಸಂಸ್ಥೆ ಬಿಎಸ್ಎನ್ಎಲ್ ಆದಾಯವು ಖಾಸಗಿ ಕಂಪನಿಗಳ ತೀವ್ರ ಪೈಪೋಟಿಯಿಂದಾಗಿ ಗಣನೀಯವಾಗಿ ಕುಸಿತ ಕಂಡಿದೆ. 2017-18 ರ ಅಂತ್ಯದ ವೇಳೆಗೆ ಬಿಎಸ್ಎನ್ಎಲ್ ಒಟ್ಟು ನಷ್ಟ ರೂ. 31,287 ಕೋಟಿಗೆ ತಲುಪಿದೆ.
ಸರ್ಕಾರಿ ಸ್ವಾಮ್ಯದ ದೂರಸಂಪರ್ಕ ಸಂಸ್ಥೆ ಬಿಎಸ್ಎನ್ಎಲ್ ಆದಾಯವು ಖಾಸಗಿ ಕಂಪನಿಗಳ ತೀವ್ರ ಪೈಪೋಟಿಯಿಂದಾಗಿ ಗಣನೀಯವಾಗಿ ಕುಸಿತ ಕಂಡಿದೆ. 2017-18 ರ ಅಂತ್ಯದ ವೇಳೆಗೆ ಬಿಎಸ್ಎನ್ಎಲ್ ಒಟ್ಟು ನಷ್ಟ ರೂ. 31,287 ಕೋಟಿಗೆ ತಲುಪಿದೆ. ಈ ಹಿನ್ನೆಲೆಯಲ್ಲಿ ಬಿಎಸ್ಎನ್ಎಲ್ ಅನ್ನು ಮುಚ್ಚುವ/ಕಾಯಕಲ್ಪ ನೀಡುವ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ.
ಸರ್ವೈವಲ್ ರಿಪೋರ್ಟ್
ಬಿಎಸ್ಎನ್ಎಲ್ ಮುಂದಿನ ಭವಿಷ್ಯದ ಕುರಿತಾಗಿ ಚಿಂತನೆ ನಡೆಸಿರುವ ಕೇಂದ್ರ ಸರ್ಕಾರ, ಬಂಡವಾಳ ಹಿಂತೆಗೆತ ಅಥವಾ ಮುಚ್ಚುವ ಬಗ್ಗೆ ಪರಿಶೀಲನೆ ನಡೆಸಿದೆ.
ಕಾಯಕಲ್ಪ ನೀಡುವ ಕುರಿತು ಪರಿಶೀಲನೆ ನಡೆಸಿದ್ದು ಕೇಂದ್ರ ಸರ್ಕಾರ ಸರ್ವೈವಲ್ ರಿಪೋರ್ಟ್ (survival report) ಸಿದ್ದಪಡಿಸಲು ಹೇಳಿದೆ. ಸರ್ಕಾರ ಯಾವ ನಿರ್ಧಾರ ಕೈಗೊಳ್ಳಬಹುದು ಎಂಬ ಆತಂಕ ನೌಕರರ ವಲಯದಲ್ಲಿ ಮೂಡಿಸಿದೆ.
ವರದಿ ಆಧಾರದ ಮೇಲೆ ನಿರ್ಧಾರ?
ಸಂಸ್ಥೆಯ ಪುನರುಜ್ಜೀವನಕ್ಕೆ ಸಹಾಯವಾಗಬಲ್ಲ ಮಾರ್ಗಗಳನ್ನು ಸೂಚಿಸಲು ಹಾಗು ಮತ್ತೆ ಲಾಭದಾಯಕವಾಗಿಸಲು ಕೈಗೊಳ್ಳಬಹುದಾದ ಯೋಜನೆಗಳ ಬಗ್ಗೆ ಮಾಹಿತಿ ಕೇಳಲಾಗಿದೆ. ಈ ವರದಿ ಆಧಾರದ ಮೇಲೆ ಯಾವ ನಿರ್ಧಾರ ಕೈಗೊಳ್ಳುವುದು ಸೂಕ್ತ ಎಂಬುದರ ಕುರಿತಾಗಿ ಪರಿಶೀಲನೆ ನಡೆಸಿ ಬಳಿಕ ನಿರ್ಧಾರ ಕೈಗೊಳ್ಳಲಾಗುವುದು.
ಜಿಯೋ ಪ್ರವೇಶಾತಿ ಹೊಡೆತ
ಜಿಯೋ ಪ್ರವೇಶಾತಿ ಬಳಿಕ ಬಿಎಸ್ಎನ್ಎಲ್ ಆದಾಯ ಗಣನೀಯ ಪ್ರಮಾಣದಲ್ಲಿ ಕುಸಿದಿದ್ದು, ಮಾರುಕಟ್ಟೆಯಲ್ಲಿ ತೀವ್ರ ಸ್ಪರ್ಧೆ ಎದುರಾಗಿದೆ. ಬಿಎಸ್ಎನ್ಎಲ್ ಸಂಸ್ಥೆಯಲ್ಲಿ ಭಾರಿ ಸಂಖ್ಯೆಯ ಸಿಬ್ಬಂದಿಗಳಿದ್ದು, ಅದರಲ್ಲಿಯೂ ಹಿರಿಯರ ಸಂಖ್ಯೆ ಹೆಚ್ಚಿನ ಪ್ರಮಾಣದಲ್ಲಿ ಇದೆ.
ಅತಿ ಹೆಚ್ಚು ನಷ್ಟ
ಬಿಎಸ್ಎನ್ಎಲ್ ಹೊಂದಿರುವ ರೂ. 15,000 ಕೋಟಿ ಮೌಲ್ಯದ ಕಟ್ಟಡಗಳು, ಇತರೆ ಆಸ್ತಿಗಳ ಮೂಲಕ ಸಂಪನ್ಮೂಲ ಸಂಗ್ರಹಿಸುವ ಪ್ರಸ್ತಾಪವನ್ನು ಮುಂದಿಡಲಾಗಿದೆ. ಸ್ವಯಂ ನಿವೃತ್ತಿ ಯೋಜನೆಗೆ ಅರ್ಹ ವಯೋಮಿತಿಯನ್ನು ಸಡಿಲಿಸಿದರೆ ಅದಕ್ಕೆ ತಗಲುವ ವೆಚ್ಚ ಕೂಡ ಏರಿಕೆಯಾಗುತ್ತದೆ.
ಸಾರ್ವಜನಿಕ ಕಂಪನಿಗಳ ಪೈಕಿ ಅತಿ ಹೆಚ್ಚು ನಷ್ಟವನ್ನು ಬಿಎಸ್ಎನ್ಎಲ್ ದಾಖಲಿಸಿದ್ದು, ಈ ಕಾರಣಗಳಿಂದ ಮುಚ್ಚುವ ಬಗ್ಗೆ ಪರಿಶೀಲನೆ ನಡೆದಿದೆ ಎಂದು ಹೇಳಲಾಗಿದೆ.
ಮೂರು ಆಯ್ಕೆಗಳು?
ಆದರಿಂದ, ಬಿಎಸ್ಎನ್ಎಲ್ ಗಾಗಿ ಸರ್ಕಾರ ಈ ಮೂರು ಅಂಶಗಳನ್ನು ಪರಿಗಣಿಸುತ್ತಿದೆ ಎಂಬುದನ್ನು ನಾವು ಗಮನಿಸಬಹುದು.
ಮುಚ್ಚುವಿಕೆ: ಬಿಎಸ್ಎನ್ಎಲ್ ಮತ್ತು ಅದರ ಎಲ್ಲ ಕಾರ್ಯಚರಣೆಗಳನ್ನು ಸ್ಥಗಿತಗೊಳಿಸದಂತಾಗುತ್ತದೆ.
ಕಾರ್ಯತಂತ್ರದ ಹೂಡಿಕೆ: ಬಿಎಸ್ಎನ್ಎಲ್ ಚಾಲನೆಯಲ್ಲಿರುವ ಸಲುವಾಗಿ ಖಾಸಗಿ ಸಂಸ್ಥೆಗಳ ಪ್ರವೇಶವ ಕ್ಕೆ ಅವಕಾಶ ನೀಡಬೇಕಾಗುತ್ತದೆ.
ಫಂಡ್: ಸಂಸ್ಥೆಯ ಕಾರ್ಯಾಚರಣೆಗಳನ್ನು ಉಳಿಸಿಕೊಳ್ಳಲು ಸರಕಾರದಿಂದ ಹೆಚ್ಚಿನ ಹಣವನ್ನು ಅಳವಡಿಸುವುದು.
More From GoodReturns

Gold Rate: ಚಿನ್ನಪ್ರಿಯರಿಗೆ ‘ಯುಗಾದಿ’ ಸಿಹಿ; ಬೆಂಗಳೂರಿನಲ್ಲಿ 24K ಬಂಗಾರದ ಬೆಲೆಯಲ್ಲಿ 27,800 ರೂ. ಕುಸಿತ

Gold Rates & Silver Rates Today Live: ಚಿನ್ನ-ಬೆಳ್ಳಿ ದರದಲ್ಲಿ ಭಾರಿ ಏರಿಕೆ-ಮಾರುಕಟ್ಟೆಯ ಲೈವ್ ಅಪ್ಡೇಟ್ ತಿಳಿಯಿರಿ

Karnataka Rain: ರಾಜ್ಯದಲ್ಲಿ ಸದ್ಯಕ್ಕೆ ನಿಲ್ಲಲ್ಲ ವರುಣಾರ್ಭಟ; ಎಷ್ಟು ದಿನ ಈ ಮಳೆ ಎಂದು ತಿಳಿಯಿರಿ

Ballari Airport: ಬಳ್ಳಾರಿ ವಿಮಾನ ನಿಲ್ದಾಣಕ್ಕೆ ಈ ವಿಚಾರಕ್ಕೆ ಅಡ್ಡಿಯಾಗ್ತಿದ್ಯಾ-ಏನದು ಹೊಸ ವಿಚಾರ ತಿಳಿಯಿರಿ

Bank Holiday: ನಾಳೆ ಕರ್ನಾಟಕದಲ್ಲಿ ಬ್ಯಾಂಕ್ ತೆರೆದಿರುತ್ತೋ, ಇಲ್ಲವೋ? ಸ್ಪಷ್ಟ ಮಾಹಿತಿ ತಿಳಿಯಿರಿ

Silver Price Today: ಬೆಳ್ಳಿ ದರದಲ್ಲಿ ಇಂದು 5,000 ಕುಸಿತ; ಭಾರತದಲ್ಲಿ ಇಂದಿನ ಬೆಲೆ ತಿಳಿಯಿರಿ

LPG Crisis Bengaluru: ಕೋಳಿ ವ್ಯಾಪಾರಕ್ಕೂ ತಟ್ಟಿದ LPG ಕೊರತೆ ಬಿಸಿ; ಬೆಂಗಳೂರಲ್ಲಿ ಮಾರಾಟ ಭಾರಿ ಕುಸಿತ

Bengaluru: ಬೀದಿ ಬದಿ ವ್ಯಾಪಾರಕ್ಕೆ ಅವಕಾಶವಿಲ್ಲ; ಈ ರಸ್ತೆಯ ವ್ಯಾಪಾರಿಗಳಿಗೆ ದೊಡ್ಡ ಸಂಕಷ್ಟ

Eid-ul-Fitr 2026: ರಂಜಾನ್ ಹಬ್ಬ ಇಂದೋ, ನಾಳೆಯೋ; ಕೇರಳದಲ್ಲಿ ಮಾತ್ರ ಇಂದು ಆಚರಣೆ ಯಾಕೆ?

Oil Price Tension: ಮದ್ಯಪ್ರಾಚ್ಯ ಉದ್ವಿಗ್ನತೆ ನಡುವೆ ತೈಲ ಮಾರುಕಟ್ಟೆ ತಲ್ಲಣ, ಭಾರತಕ್ಕೆ ಸವಾಲು; ಎಚ್ಚರಿಕೆ ಸೂಚನೆ

Petrol Price Hike: ಪ್ರೀಮಿಯಂ ಪೆಟ್ರೋಲ್ ದರ ಏರಿಕೆ-ಲೀಟರ್ಗೆ 2 ಹೆಚ್ಚಳ, ಸಾಮಾನ್ಯ ಇಂಧನ ದರ ಸ್ಥಿರ



Click it and Unblock the Notifications