ಖಾಸಗಿ ಕಂಪನಿಗಳ ತೀವ್ರ ಪೈಪೋಟಿಯಿಂದಾಗಿ ಬಿಎಸ್ಎನ್ಎಲ್ ಸಂಸ್ಥೆ ನಷ್ಟದ ಹಾದಿಯಲ್ಲಿದ್ದು, ಕಂಪನಿಯನ್ನು ಮುಚ್ಚಲು ಸರ್ಕಾರ ಚಿಂತನೆ ನಡೆಸುತ್ತಿರುವ ನಡುವೆಯೇ ನೌಕರರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮುಷ್ಕರಕ್ಕೆ ಮುಂದಾಗಿದ್ದಾರೆ.
ಸರ್ಕಾರಿ ಸ್ವಾಮ್ಯದ ಟೆಲಿಕಾಂ ಸಂಸ್ಥೆ ಬಿಎಸ್ಎನ್ಎಲ್ ಉದ್ಯೋಗಿಗಳು ಹಾಗು ಅಧಿಕಾರಿಗಳು ಹಲವಾರು ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ಫೆಬ್ರವರಿ 18 ರಿಂದ ಮುಷ್ಕರ ಕೈಗೊಳ್ಳಲಿದ್ದಾರೆ
ಖಾಸಗಿ ಕಂಪನಿಗಳ ತೀವ್ರ ಪೈಪೋಟಿಯಿಂದಾಗಿ ಬಿಎಸ್ಎನ್ಎಲ್ ಸಂಸ್ಥೆ ನಷ್ಟದ ಹಾದಿಯಲ್ಲಿದ್ದು, ಕಂಪನಿಯನ್ನು ಮುಚ್ಚಲು ಸರ್ಕಾರ ಚಿಂತನೆ ನಡೆಸುತ್ತಿರುವ ನಡುವೆಯೇ ನೌಕರರು ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಮುಷ್ಕರಕ್ಕೆ ಮುಂದಾಗಿದ್ದಾರೆ. ಜಿಯೋ ಪ್ರವೇಶಾತಿ ಬಳಿಕ ಬಿಎಸ್ಎನ್ಎಲ್ ಆದಾಯ ಗಣನೀಯ ಪ್ರಮಾಣದಲ್ಲಿ ಕುಸಿದಿದ್ದು, ಮಾರುಕಟ್ಟೆಯಲ್ಲಿ ತೀವ್ರ ಸ್ಪರ್ಧೆ ಎದುರಾಗಿದೆ. ಬಿಎಸ್ಎನ್ಎಲ್ ಸಂಸ್ಥೆಯಲ್ಲಿ ಭಾರಿ ಸಂಖ್ಯೆಯ ಸಿಬ್ಬಂದಿಗಳಿದ್ದು, ಅದರಲ್ಲಿಯೂ ಹಿರಿಯರ ಸಂಖ್ಯೆ ಹೆಚ್ಚಿನ ಪ್ರಮಾಣದಲ್ಲಿ ಇದೆ.
ವಿವಿಧ ಬೇಡಿಕೆಗಾಗಿ 3 ದಿನ ಮುಷ್ಕರ
ಫೆಬ್ರವರಿ 18-20 ಮೂರು ದಿನಗಳವರೆಗೆ ಬಿಎಸ್ಎನ್ಎಲ್ ನೌಕರರು ಮುಷ್ಕರ ನಡೆಸಲಿದ್ದಾರೆ.
- ವೇತನ ಪರಿಷ್ಕರಣೆ
- 4 ಜಿ ತರಂಗಾಂತರಗಳನ್ನು ಬಿಎಸ್ಎನ್ಎಲ್ ಗೆ ಹಂಚಿಕೆ ಮಾಡಲು ಒತ್ತಾಯ
- ಬಿಎಸ್ಎನ್ಎಲ್ ಖಾಸಗೀಕರಣಕ್ಕೆ ವಿರೋಧ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಲಿದ್ದಾರೆ.
ಸ್ವಯಂ ನಿವೃತ್ತಿ ಯೋಜನೆ?
ಪ್ರಸ್ತುತ ಬಿಎಸ್ಎನ್ಎಲ್ ತುಂಬಾ ನಷ್ಟದಲ್ಲಿದ್ದು, ಇದರ ಪುನಶ್ಚೇತನಕ್ಕಾಗಿ ನಿವೃತ್ತಿ ವಯಸ್ಸನ್ನು ಇಳಿಕೆ ಮಾಡಲು ಹಾಗೂ ಸ್ವಯಂ ನಿವೃತ್ತಿ ಯೋಜನೆ ಜಾರಿಗೆ ತರಲು ಕೇಂದ್ರ ಸರ್ಕಾರ ಮುಂದಾಗಿದೆ. ನಿವೃತ್ತಿ ವಯಸ್ಸನ್ನು ೫೮ಕ್ಕೆ ಇಳಿಸುವಂತೆ ತಜ್ಞರು ಸಲಹೆ ನೀಡಿದ್ದಾರೆ.
ಯೋಜನೆ ಜಾರಿಯಾದರೆ?
ಸ್ವಯಂ ನಿವೃತ್ತಿ ಯೋಜನೆ ಜಾರಿಯಾದರೆ ೫೪ ಸಾವಿರ ಉದ್ಯೋಗಗಳು ಕಡಿತವಾಗಲಿವೆ. ಇದು ಕೂಡ ಉದ್ಯೋಗಿಗಳ ಆತಂಕಕ್ಕೆ ಕಾರಣವಾಗಿದೆ ಎನ್ನಲಾಗಿದೆ. ಜೊತೆಗೆ ಖಾಸಗೀಕರಣ ಮಾಡುವ ಭೀತಿಯೂ ಕಾಡುತ್ತಿದೆ. ಮುಷ್ಕರಕ್ಕೆ ದೇಶದ ವಿವಿಧ ಕಾರ್ಮಿಕ ಸಂಘಟನೆಗಳು ಬೆಂಬಲ ಸೂಚಿಸಿವೆ.
ಮೂರು ಆಯ್ಕೆಗಳು?
ಬಿಎಸ್ಎನ್ಎಲ್ ಗಾಗಿ ಸರ್ಕಾರ ಈ ಮೂರು ಅಂಶಗಳನ್ನು ಪರಿಗಣಿಸುತ್ತಿದೆ ಎಂಬುದನ್ನು ನಾವು ಗಮನಿಸಬಹುದು.
ಮುಚ್ಚುವಿಕೆ: ಬಿಎಸ್ಎನ್ಎಲ್ ಮತ್ತು ಅದರ ಎಲ್ಲ ಕಾರ್ಯಚರಣೆಗಳನ್ನು ಸ್ಥಗಿತಗೊಳಿಸದಂತಾಗುತ್ತದೆ.
ಕಾರ್ಯತಂತ್ರದ ಹೂಡಿಕೆ: ಬಿಎಸ್ಎನ್ಎಲ್ ಚಾಲನೆಯಲ್ಲಿರುವ ಸಲುವಾಗಿ ಖಾಸಗಿ ಸಂಸ್ಥೆಗಳ ಪ್ರವೇಶವ ಕ್ಕೆ ಅವಕಾಶ ನೀಡಬೇಕಾಗುತ್ತದೆ.
ಫಂಡ್: ಸಂಸ್ಥೆಯ ಕಾರ್ಯಾಚರಣೆಗಳನ್ನು ಉಳಿಸಿಕೊಳ್ಳಲು ಸರಕಾರದಿಂದ ಹೆಚ್ಚಿನ ಹಣವನ್ನು ಅಳವಡಿಸುವುದು. ಬಿಎಸ್ಎನ್ಎಲ್ ಮುಚ್ಚಲು ಚಿಂತನೆ! ಉದ್ಯೋಗಿಗಳ ಭವಿಷ್ಯವೇನು?
More From GoodReturns

NSE ಆಯಿಲ್ ಫ್ಯೂಚರ್ಸ್ ಆರಂಭ: ಹೂಡಿಕೆದಾರರಿಗೆ ಸಿಗಲಿದೆ ಭಾರಿ ಲಾಭ?

ಸಗಟು ಬೆಲೆ ಸೂಚ್ಯಂಕ: ನಿಮ್ಮ ಜೇಬಿಗೆ ಕಾದಿದೆಯಾ ಶಾಕ್?

ಚಿನ್ನದ ಬೆಲೆ ಏರಿಕೆ: ಅಕ್ಷಯ ತೃತೀಯಕ್ಕೆ ಹೂಡಿಕೆ ಮಾಡುವುದು ಹೇಗೆ?

ನಿಫ್ಟಿ ಏರಿಕೆ: ಈಗಲೇ ಹೂಡಿಕೆ ಮಾಡಬೇಕಾ ಅಥವಾ ಕಾಯಬೇಕಾ?

ಆರ್ಬಿಐ ರೆಪೋ ದರ ಸ್ಥಿರ: ನಿಮ್ಮ ಹಣದ ಭವಿಷ್ಯ ಬದಲಾಗುತ್ತಾ?

ಭಾರತೀಯ ಷೇರು ಮಾರುಕಟ್ಟೆ: ಇಂದಿನ ವಹಿವಾಟಿನಲ್ಲಿ ಅಡಗಿದೆ ಅಚ್ಚರಿಯ ತಿರುವು!

ಅಂಬೇಡ್ಕರ್ ಜಯಂತಿ ರಜೆ: ನಿಮ್ಮ ಎಸ್ಐಪಿ ಹಣಕ್ಕೆ ಕಾದಿದೆಯಾ ಸಂಕಷ್ಟ?

ಚಿನ್ನದ ಬೆಲೆ ಸ್ಥಿರ: ಖರೀದಿಗೆ ಇದೇ ಸುವರ್ಣಾವಕಾಶವೇ?

ಷೇರು ಮಾರುಕಟ್ಟೆ ಶನಿವಾರದ ವಿಶೇಷ ವಹಿವಾಟು: ಹೂಡಿಕೆದಾರರೇ ಎಚ್ಚರ!

ಪ್ರಾಪ್ಶೇರ್ ಸೆಲೆಸ್ಟಿಯಾ ಐಪಿಒ: ಹೂಡಿಕೆಗೆ ಇಂದು ಕೊನೆಯ ಅವಕಾಶ!

ಟಿಸಿಎಸ್ ಫಲಿತಾಂಶದ ಬಳಿಕ ಮಾರುಕಟ್ಟೆಯಲ್ಲಿ ಅನಿರೀಕ್ಷಿತ ಏರಿಳಿತದ ಭೀತಿ!



Click it and Unblock the Notifications