ಪುಲ್ವಾಮಾ ಸಿ.ಆರ್.ಪಿ.ಎಫ್ ಯೋಧರ ಮೇಲಿನ ಉಗ್ರರ ದಾಳಿಯನ್ನು ಖಂಡಿಸಿ ಪ್ರತಿಭಟನೆ ಕಾವು ದಿನದಿಂದ ದಿನಕ್ಕೆ ವೇಗ ಪಡೆದುಕೊಳ್ಳುತ್ತಿದೆ.
ಪುಲ್ವಾಮಾ ಸಿ.ಆರ್.ಪಿ.ಎಫ್ ಯೋಧರ ಮೇಲಿನ ಉಗ್ರರ ದಾಳಿಯನ್ನು ಖಂಡಿಸಿ ಪ್ರತಿಭಟನೆ ಕಾವು ದಿನದಿಂದ ದಿನಕ್ಕೆ ವೇಗ ಪಡೆದುಕೊಳ್ಳುತ್ತಿದೆ. ಪುಲ್ವಾಮ ಉಗ್ರರ ದಾಳಿ ಖಂಡಿಸಿ ಹಾಗು ಮೃತ ಯೋಧರ ಶೃದ್ಧಾಂಜಲಿ ಸಲ್ಲಿಸುವ ಸಲುವಾಗಿ ಅಖಿಲ ಭಾರತ ವರ್ತಕರ ಒಕ್ಕೂಟ (ಸಿಎಐಟಿ) ಮಾರುಕಟ್ಟೆ ಬಂದ್ ಗೆ ದೇಶವ್ಯಾಪಿ ಕರೆ ನೀಡಿದೆ.
ಅಖಿಲ ಭಾರತ ವರ್ತಕರ ಒಕ್ಕೂಟ (ಸಿಎಐಟಿ) ಬಿಡುಗಡೆಗೊಳಿಸಿರುವ ಪ್ರಕಟಣೆಯಲ್ಲಿ ಈ ಬಗ್ಗೆ ಮಾಹಿತಿ ನೀಡಿದೆ. ವಾಣಿಜ್ಯ ಮಾರುಕಟ್ಟೆಗಳು, ದೆಹಲಿಯ ಎಲ್ಲ ಸಗಟು ಹಾಗೂ ರಿಟೇಲ್ ಮಾರುಕಟ್ಟೆ ಹಾಗು ಯಾವುದೇ ವಹಿವಾಟು ಚಟುವಟಿಕೆಗಳು ಸೋಮವಾರ ನಡೆಯುವುದಿಲ್ಲ ಎಂದು ಸಿಎಐಟಿ ಹೇಳಿದೆ.
ಇದೇ ಸಂದರ್ಭದಲ್ಲಿ ವ್ಯಾಪಾರಿಗಳು ತಮ್ಮ ತಮ್ಮ ರಾಜ್ಯಗಳಲ್ಲಿ ಶೃದ್ಧಾಂಜಲಿ ಮೆರವಣಿಗೆಗಳನ್ನು ನಡೆಸಲಿದ್ದಾರೆ. ಮಡಿದ ಯೋಧರಿಗೆ ಕುಟುಂಬಗಳಿಗೆ ಆರ್ಥಿಕ ನೆರವು ಒದಗಿಸಲು ಒಕ್ಕೂಟ ಆಲೋಚಿಸಿದೆ. ಭಾರತ ಪಾಕ್ ನಡುವೆ ಯುದ್ದ ನಡೆದರೆ ಉಂಟಾಗುವ ಆರ್ಥಿಕ ದುಷ್ಪರಿಣಾಮಗಳೇನು?
ಅಹಿತಕರ ಘಟನೆ ನಡೆಯದಂತೆ ಎಚ್ಚರಿಕೆ
ದೇಶವ್ಯಾಪಿ ಸೋಮವಾರದ ಬಂದ್ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ನಿರ್ಧರಿಸಲಾಗಿದ್ದು, ಶಾಂತಿಯುತವಾಗಿರಲಿದೆ. ಜನಜೀವನಕ್ಕೆ ತೊಂದರೆಯಾಗದ ರೀತಿಯಲ್ಲಿ ನೋಡಿಕೊಳ್ಳಲಾಗುವುದು. ಕೇವಲ ಅಂಗಡಿ ಮಳಿಗೆಗಳು ಮುಚ್ಚಲಾಗುವುದೇ ಹೊರತು, ಬಸ್ ಸಂಚಾರಕ್ಕೆ ಯಾವುದೇ ಅಡೆತಡೆ ಇರುವುದಿಲ್ಲ.
ಬಂದ್ ಗೆ ಬೆಂಬಲ
ದೇಶವ್ಯಾಪಿ ಬಂದ್ ಗೆ ಮಹಾರಾಷ್ಟ್ರ, ತಮಿಳುನಾಡು, ದೆಹಲಿ, ಉತ್ತರಪ್ರದೇಶ, ರಾಜಸ್ತಾನ, ಪಶ್ಚಿಮ ಬಂಗಾಲ, ಪಂಜಾಬ್, ಹರಿಯಾಣ, ಜಮ್ಮು ಮತ್ತು ಕಾಶ್ಮೀರದ ವರ್ತಕರು ಬೆಂಬಲಿಸಿದ್ದಾರೆ.
ಚೀನಾ ಸರಕುಗಳಿಗೆ ಬಹಿಷ್ಕಾರ
ಭಯೋತ್ಪಾದನಾ ಚಟುವಟಿಕೆಗಳನ್ನು ಉತ್ತೇಜಿಸುವ ಪಾಕಿಸ್ತಾನಕ್ಕೆ ಬೆಂಬಲ ನೀಡುತ್ತಿರುವ ಚೀನಾ ದೇಶದ ವಸ್ತುಗಳನ್ನು ನಿಷೇಧಿಬೇಕು ಎನ್ನುವ ರಾಷ್ಟ್ರವ್ಯಾಪಿ ಆಂದೋಲನವನ್ನು ಸಿಎಐಟಿ ಹಮ್ಮಿಕೊಳ್ಳಲಿದೆ ಎಂದು ಕಾರ್ಯದರ್ಶಿ ಪ್ರವೀಣ್ ಖಂಡೇಲ್ವಾಲ್ ಹೇಳಿದ್ದಾರೆ.
More From GoodReturns

Egg Price Down: ಬೆಂಗಳೂರು ಮೊಟ್ಟೆ ಪ್ರಿಯರಿಗೆ ಗುಡ್ ನ್ಯೂಸ್; ಬೆಲೆ ಭಾರೀ ಇಳಿಕೆ

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!



Click it and Unblock the Notifications