ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ರಧಾನ ಮಂತ್ರಿ ಕಿಸಾನ್ ಯೋಜನೆಯನ್ನು ಅನುಷ್ಠಾನಗೊಳಿಸಲಿದ್ದು, ಫೆಬ್ರವರಿ 24 ರಂದು ಉತ್ತರ ಪ್ರದೇಶದ ಗೋರಕ್ ಪುರದಲ್ಲಿ ಚಾಲನೆ ನೀಡಲಿದ್ದಾರೆ.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಪ್ರಧಾನ ಮಂತ್ರಿ ಕಿಸಾನ್ ಯೋಜನೆಯನ್ನು ಅನುಷ್ಠಾನಗೊಳಿಸಲಿದ್ದು, ಫೆಬ್ರವರಿ 24 ರಂದು ಉತ್ತರ ಪ್ರದೇಶದ ಗೋರಕ್ ಪುರದಲ್ಲಿ ಚಾಲನೆ ನೀಡಲಿದ್ದಾರೆ.
ಗೋರಕ್ ಪುರ ಮತ್ತು ಪ್ರಯಾಗರಾಜ್ ಭೇಟಿ ಸಂದರ್ಭದಲ್ಲಿ ರೂ. 2,000 ಮೊದಲ ಕಂತಿನ ಚೆಕ್ ವಿತರಿಸಲಿದ್ದಾರೆ. ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್ ನಲ್ಲಿ ಪಿಯೂಷ್ ಗೋಯಲ್ ಅವರು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಘೋಷಿಸಿದ್ದರು.
ಫೆಬ್ರವರಿ 24 ರಂದು ರೈತರು ರೂ. 2,000 ಮೊದಲ ಕಂತಿನ ಮೊತ್ತ ಸ್ವೀಕರಿಸುವ ಸಾಧ್ಯತೆಯಿದೆ. ಈ ಯೋಜನೆ 2 ಹೆಕ್ಟೇರ್ ವರೆಗೆ ಕೃಷಿ ಭೂಮಿಯನ್ನು ಹೊಂದಿರುವ 120 ದಶಲಕ್ಷ ರೈತರಿಗೆ ಪ್ರಯೋಜನ ಒದಗಿಸುವ ಗುರಿ ಹೊಂದಿದೆ. ಪಿಎಂ ಕಿಸಾನ್ ಯೋಜನೆಯಡಿ 6 ಸಾವಿರ ಸಹಾಯಧನ ಪಡೆಯಲು ಅರ್ಜಿ ಸಲ್ಲಿಸುವುದು ಹೇಗೆ?
ಮೊದಲ ಕಂತಿನಲ್ಲಿ 2.5 ಕೋಟಿ ರೈತರಿಗೆ ಲಾಭ!
ಮಾರ್ಚ್ 31 ರ ವೇಳೆಗೆ ಸುಮಾರು 2.5 ಕೋಟಿ ರೈತರು ಮೊದಲ ಕಂತಿನ ಮೊತ್ತ ಪಡೆಯಲಿದ್ದಾರೆಂದು ನಿರೀಕ್ಷಿಸಲಾಗಿದೆ. ಈ ಯೋಜನೆಯ ವ್ಯಾಪ್ತಿಯಡಿಯಲ್ಲಿ ಬರುವ ರೈತರ ವಿವರಗಳನ್ನು ನೀಡುವಂತೆ ಕೇಂದ್ರ ಸರ್ಕಾರವು ಈಗಾಗಲೇ ಎಲ್ಲಾ ರಾಜ್ಯ ಸರ್ಕಾರಗಳಿಗೆ ಪತ್ರವನ್ನು ಬರೆದಿದೆ. ಉತ್ತರ ಪ್ರದೇಶ, ಮಹಾರಾಷ್ಟ್ರ, ಗುಜರಾತ್ ಮತ್ತು ತಮಿಳುನಾಡು ಮುಂತಾದ ರಾಜ್ಯಗಳು ಈ ಪಟ್ಟಿಯನ್ನು ಕಳುಹಿಸಲು ಸಕ್ರಿಯ ಆಸಕ್ತಿಯನ್ನು ತೋರಿಸಿವೆ.
ಫಲಾನುಭವಿಗಳ ಅರ್ಹತೆ
ಗಂಡ, ಹೆಂಡತಿ ಹಾಗು ೧೮ ವರ್ಷದೊಳಗಿನ ಮಕ್ಕಳು ಇರು ಕುಟುಂಬ ಇರಬೇಕು.
- ಎರಡು ಹೆಕ್ಟೇರ್ ಜಮೀನು ಇರಬೇಕು.
- ಫೆಬ್ರವರಿ ೧, ೨೦೧೯ರ ಕ್ಕಿಂತ ಮೊದಲಿನ ಭೂ ದಾಖಲೆಗಳಲ್ಲಿ ಹೆಸರು ಇರುವ ರೈತರನ್ನು ಮಾತ್ರ ಪರಿಗಣಿಸಲಾಗುತ್ತದೆ. ಫೆಬ್ರವರಿ ೧ರ ನಂತರ ಬದಲಾವಣೆ ಮಾಡಲಾದ ಭೂ ದಾಖಲಾತಿಗಳನ್ನು ಪರಿಗಣನೆಗೆ ತೆಗೆದುಕೊಳ್ಳುವುದಿಲ್ಲ.
- ಕುಟುಂಬವೊಂದಕ್ಕೆ ಸೇರಿದ ಜಮೀನು ವಿವಿಧ ಹಳ್ಳಿಗಳಲ್ಲಿ ಅಥವಾ ಕಂದಾಯ ದಾಖಲೆಗಳಲ್ಲಿ ಹಂಚಿ ಹೋಗಿದ್ದರೂ ಪರಿಗಣಿಸಲಾಗುತ್ತದೆ.
- 3 ಕಂತುಗಳಲ್ಲಿ ಹಣ ನೀಡಲಿದ್ದು, ಡಿಸೆಂಬರ್ 1 ರಿಂದಲೇ ಪೂರ್ವಾನ್ವಯವಾಗುವಂತೆ ಮೊದಲ ಕಂತಿನ ಹಣ ರೈತರ ಖಾತೆಗೆ ಜಮಾ ಆಗಲಿದೆ.
ರೂ. 75 ಸಾವಿರ ಕೋಟಿ ಮೀಸಲು
ಪಿಎಂ ಕಿಸಾನ್ ಯೋಜನೆಗಾಗಿ ರೂ. 75 ಸಾವಿರ ಕೋಟಿ ಮೀಸಲಿಡಲಾಗಿದೆ. ವರ್ಷಕ್ಕೆ ಮೂರು ಕಂತುಗಳಲ್ಲಿ ತಲಾ ರೂ. 2000 ಸಹಾಯಧನ ನೀಡಲಾಗುತ್ತದೆ. ಲೋಕಸಭೆ ಚುನಾವಣೆ ಸಮೀಪದಲ್ಲಿರುವುದರಿಂದ ರೈತರ ಖಾತೆಗೆ 2 ಕಂತುಗಳ ಹಣ ಪಾವತಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ.
More From GoodReturns

ICC T20 World Cup: ವಿಶ್ವಕಪ್ ಗೆದ್ದ ಭಾರತಕ್ಕೆ ಬಿಸಿಸಿಐನಿಂದ ಗುಡ್ ನ್ಯೂಸ್; 131 ಕೋಟಿ ಬಹುಮಾನ ಘೋಷಣೆ

North Karnataka: ಕೈಗಾರಿಕೆ, ಕೃಷಿ, ಶಿಕ್ಷಣ..ಉತ್ತರ ಕರ್ನಾಟಕಕ್ಕೆ ಸರ್ಕಾರದಿಂದ ಸಿಕ್ಕ ಹೊಸ ಯೋಜನೆಗಳು ಏನು?

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!



Click it and Unblock the Notifications