ಭಾರತೀಯ ವಾಯುಪಡೆಯ ಯುದ್ದ ವಿಮಾನಗಳು ಪಾಕಿಸ್ತಾನದ ಮೇಲೆ ವಾಯುದಾಳಿ ನಡೆಸಿದ ಸುದ್ದಿ ಷೇರುಪೇಟೆ ಮೇಲೆ ಭಾರೀ ಪರಿಣಾಮ ಬೀರಿದೆ.
ಭಾರತೀಯ ವಾಯುಪಡೆಯ ಯುದ್ದ ವಿಮಾನಗಳು ಪಾಕಿಸ್ತಾನದ ಮೇಲೆ ವಾಯುದಾಳಿ ನಡೆಸಿದ ಸುದ್ದಿ ಷೇರುಪೇಟೆ ಮೇಲೆ ಭಾರೀ ಪರಿಣಾಮ ಬೀರಿದೆ. ಪಾಕಿಸ್ತಾನದ ಮೇಲೆ ಐಎಎಫ್ ಜೆಟ್ ದಾಳಿಯಿಂದ ಷೇರು ಮಾರುಕಟ್ಟೆ ಕುಸಿತ ಕಂಡಿದ್ದು, ರುಪಾಯಿ ಮೌಲ್ಯ ಕುಸಿದಿದೆ.

ವಾಯುಪಡೆ ದಾಳಿ ನಡೆಸಿರುವ ಹಿನ್ನೆಲೆಯಲ್ಲಿ ಮೂರು ದಿನದ ನಂತರ ಮೊದಲ ಬಾರಿಗೆ ಭಾರತೀಯ ರೂಪಾಯಿ ಕುಸಿತ ಕಂಡಿದೆ. ಬೆಳಿಗ್ಗೆ ಸಮಯ 9.04 ಗಂಟೆಗೆ 71.2475 ಪ್ರತಿ ಡಾಲರ್ ಗೆ ರೂಪಾಯಿ ಶೇ. 0.4 ಕುಸಿದಿದ್ದು, ನಿಫ್ಟಿ ಸ್ಟಾಕ್ ಫ್ಯೂಚರ್ಸ್ ಶೇ. 0.7 ರಷ್ಟು ಇಳಿಕೆಯಾಗಿದೆ. ಷೇರಪೇಟೆ ಆರಂಭವಾಗುವ ಮುನ್ನವೇ ವಾಯುಸೇನೆಯ ದಾಳಿ ಜಾಲತಾಣಗಳಲ್ಲಿ ವರದಿ ಪ್ರಕಟವಾಗಿತ್ತು. ನಿಪ್ಟಿ ಸೂಚ್ಯಂಕ ೩೫.೬೦ ಅಂಶ ಕುಸಿತದೊಂದಿಗೆ ದಿನದ ವಹಿವಾಟು ಆರಂಭಿಸಿತ್ತು. ಬಿಎಸ್ಎಇ ಸೆನ್ಸೆಕ್ಸ್ ೧೨೩.೬೫ ಅಂಶಗಳ ಕುಸಿತದೊಂದಿಗೆ ಇಂದಿನ ವಹಿವಾಟು ಆರಂಭಿಸಿತ್ತು. ಬ್ಯಾಂಕಿಂಗ್, ಆಟೋಮೊಬ್ಐಲ್, ಇಂಧನ, ಗ್ರಾಹಕ ಉಪಯೋಗಿ ಸರಕು, ಮೂಲಸೌಕರ್ಯ, ಔಷಧಿ ಒಳಗೊಂಡಂತೆ ಎಲ್ಲಾ ವಲಯದ ಷೇರುಗಳ ಮೌಲ್ಯವು ಇಳಿಕೆಯಾಗಿದೆ.
ಇಂದು ನಸುಕಿನ ಜಾವ ಭಾರತೀಯ ವಾಯುಸೇನೆ ಪಾಕಿಸ್ತಾನದ ಒಳಗೆ ನುಗ್ಗಿ ಉಗ್ರರ ಅಡಗು ತಾಣದ ಮೇಲೆ ಗುರಿಯಾಗಿಟ್ಟುಕೊಂಡು ದಾಳಿ ನಡೆಸಿದೆ ಎನ್ನಲಾಗುತ್ತಿದೆ. ಭಾರತ ಪಾಕ್ ನಡುವೆ ಯುದ್ದ ನಡೆದರೆ ಉಂಟಾಗುವ ಆರ್ಥಿಕ ದುಷ್ಪರಿಣಾಮಗಳೇನು?
ಬೆಳಗಿನ ಜಾವ ಸುಮಾರು 3.30ಕ್ಕೆ 1000 ಕೆಜಿ ಬಾಂಬ್ ನ್ನು ಉಗ್ರರ ನೆಲೆ ಮೇಲೆ ಹಾಕಲಾಗಿದೆ. ಒಟ್ಟು 12 ಮಿರಾಜ್ ಯುದ್ಧ ವಿಮಾನಗಳು ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದವು. 21 ನಿಮಿಷಗಳ ಕಾಲ ಈ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಪೂರೈಸಿ 12 ವಾಯುಪಡೆ ವಿಮಾನಗಳು ಸುರಕ್ಷಿತವಾಗಿ ವಾಪಸ್ ಬಂದಿವೆ ಎಂದು ವರದಿಯಾಗಿದೆ.
More From GoodReturns

Stock Market Crash: ಮಧ್ಯಪ್ರಾಚ್ಯದ ಸಂಘರ್ಷ, ಷೇರು ಮಾರುಕಟ್ಟೆ ಅಲ್ಲೋಲ ಕಲ್ಲೋಲ! ಸೆನ್ಸೆಕ್ಸ್ 2000 ಪಾಯಿಂಟ್ಸ್ ಕುಸಿತ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ



Click it and Unblock the Notifications