12 ಕೋನದ ಪಾಲಿಗಾನ್ ಆಕೃತಿಯುಳ್ಳ ಹೊಚ್ಚ ಹೊಸ 20 ರು ನಾಣ್ಯ ಉತ್ಪಾದನೆ ಕುರಿತಂತೆ ವಿತ್ತ ಸಚಿವಾಲಯವು ಪ್ರಕಟಣೆ ಹೊರಡಿಸಿದೆ.
10 ನಾಣ್ಯದಂತೆ ಎರಡು ವಲಯಗಳನ್ನು ಹೊಂದಿರುವ 20 ರು ಮುಖಬ್ಲೆಯ ನಾಣ್ಯದ ವ್ಯಾಸವು 27 ಮಿ.ಮೀ ನಷ್ಟಿದೆ. ನಾಣ್ಯದ ಹೊರ ಸುತ್ತು 65% ತಾಮ್ರ, 15% ಸತು ಮತ್ತು 20 % ನಿಕ್ಕಲ್ ಹೊಂದಿದೆ. ಒಳ ಸುತ್ತು ಅಥವಾ ನಾಣ್ಯದ ಕೇಂದ್ರಭಾಗವು 75% ತಾಮ್ರ, 20% ಸತು ಮತ್ತು 5% ನಿಕ್ಕಲ್ ನಿಂದ ಮಾಡಲ್ಪಟ್ಟಿದೆ.
ಪ್ರಥಮ ಧ್ವಜಾರೋಹಣ ಸಂಭ್ರಮಕ್ಕಾಗಿ ನೇತಾಜಿ 75 ಹೊಸ ನಾಣ್ಯ
ಹೊಸ ರೂ 20 ನಾಣ್ಯವು ಯಾವುದೇ ಸರಣಿಯನ್ನು ಹೊಂದಿರುವುದಿಲ್ಲ. ಒಂದು ನಾಣ್ಯ 8.54 ಗ್ರಾಂ ತೂಕ ಹೊಂದಿರಲಿದೆ. 2009ರ ಮಾರ್ಚ್ ತಿಂಗಳಿನಲ್ಲಿ ಹೊಚ್ಚ ಹೊಸ 10 ರು ನಾಣ್ಯವನ್ನು ಹೊರ ತರಲಾಗಿತ್ತು. ಈಗ 10 ವರ್ಷಗಳ ಬಳಿಕ 20 ರು ನಾಣ್ಯವನ್ನು ಘೋಷಿಸಲಾಗಿದೆ. ದೃಷ್ಟಿ ವಿಕಲ ಚೇತನರ ಚಲಾವಣೆಗೆ ಅನುಕೂಲವಾಗುವಂತಹ ವಿನ್ಯಾಸಗೊಳಿಸಲಾಗಿರುವ ಹೊಸ ಸರಣಿಯ ರೂ 1, ರೂ 2,ರೂ 5, ರೂ 10 ಹಾಗೂ 20 ರೂಪಾಯಿ ಮುಖಬೆಲೆಯ ನಾಣ್ಯಗಳನ್ನು ಪ್ರಧಾನಿ ನರೇಂದ್ರ ಮೋದಿ ದೆಹಲಿಯಲ್ಲಿ ಗುರುವಾರ ಬಿಡುಗಡೆಗೊಳಿಸಿದ್ದಾರೆ.

ನಾಣ್ಯದ ಮುಂಭಾಗದಲ್ಲಿ ನಾಲ್ಕು ಸಿಂಹಗಳ ಲಾಂಛನ ಹಾಗೂ ಅಶೋಕನ ಸಾರಾನಾಥ ಶಾಸನ ವಾಕ್ಯ "ಸತ್ಯಮೇವ ಜಯತೆ"(ದೇವಾಗರಿ ಲಿಪಿ) ಎಂದಿರಲಿದೆ. ಅಲ್ಲದೆ ಇದರ ಎಡಬಾಗದಲ್ಲಿ 'ಭಾರತ್' ಎನ್ನುವ ದೇವನಾಗರಿ ಲಿಪಿಯಲ್ಲಿ ಪದವಿದ್ದರೆ ಬಲಭಾಗದಲ್ಲಿ "ಇಂಡಿಯಾ' ಎಂದು ಇಂಗ್ಲೀಷ್ ನಲ್ಲಿ ಬರೆದಿರುವುದನ್ನು ಕಾಣಬಹುದು.
ನಾಣ್ಯದ ಹಿಂಭಾಗದಲ್ಲಿ, ರೂಪಾಯಿ ಚಿಹ್ನೆಯುಕೆಳಗಿನ ಭಾಗದಲ್ಲಿ ಕರೆನ್ಸಿ ಮೌಲ್ಯ ಬರೆಯಲ್ಪಡಲಿದೆ.ಅಲ್ಲದೆ ರಾಷ್ಟ್ರದಲ್ಲಿನ ಕೃಷಿ ಪ್ರಾಬಲ್ಯವನ್ನು ಸಾರುವುದಕ್ಕಾಗಿ ಎಡಭಾಗದಲ್ಲಿ ವಿಶೇಷವಾಗಿ ವಿನ್ಯಾಸಗೊಳಿಸಿದ ಧಾನ್ಯಗಳ ಚಿತ್ರವಿರಲಿದೆ. ಇನ್ನು ಹಿಂದಿ ಹಾಗೂ ಇಂಗ್ಲೀಷ್ ಭಾಷೆಗಳಲ್ಲಿ 20 ರೂಪಾಯಿಗಳು ಎಂದು ಅಕ್ಷರಗಳಲ್ಲಿ ಕೆತ್ತಲಾಗಿರುತ್ತದೆ. ಅಲ್ಲದೆ ಇದರ ನಡುವೆ ನಾಣ್ಯ ಬಿಡುಗಡೆಯಾಗಿರುವ ವರ್ಷವನ್ನು ಕೆತ್ತಲಾಗಿದೆ.
2009ರಿಂದ ಇಲ್ಲಿತನಕ 10 ನಾಣ್ಯಗಳ 13 ಹೊಸ ಆವೃತ್ತಿಗಳು ಬಂದಿವೆ. 10 ರು ನಾಣ್ಯದ ಬಳಕೆ ಬಗ್ಗೆ ಗೊಂದಲ ಮುಂದುವರೆದಿದ್ದರೂ ಎಲ್ಲವೂ ಮಾನ್ಯತೆ ಹೊಂದಿದೆ ಎಂದು ಅರ್ ಬಿಐ ಸ್ಪಷ್ಟಪಡಿಸಿದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications