ರಾಜ್ಯ ಸರ್ಕಾರ ಹೋಳಿ ಹಬ್ಬಕ್ಕೆ ಸರ್ಕಾರಿ ನೌಕರರಿಗೆ ಭರ್ಜರಿ ಕೊಡುಗೆ ನೀಡಲು ಮುಂದಾಗಿದೆ! ರಾಜ್ಯ ಸರ್ಕಾರಿ ಪದವಿ ಕಾಲೇಜು ಹಾಗು ವಿಶ್ವವಿದ್ಯಾಲಯಗಳ ಉಪನ್ಯಾಸಕರಿಗೆ 7ನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಜಾರಿಗೆ ತರಲು ಸಿದ್ದತೆ ನಡೆಸಿದೆ.
ರಾಜ್ಯ ಸರ್ಕಾರ ಹೋಳಿ ಹಬ್ಬಕ್ಕೆ ಸರ್ಕಾರಿ ನೌಕರರಿಗೆ ಭರ್ಜರಿ ಕೊಡುಗೆ ನೀಡಲು ಮುಂದಾಗಿದೆ!
ರಾಜ್ಯ ಸರ್ಕಾರಿ ಪದವಿ ಕಾಲೇಜು ಹಾಗು ವಿಶ್ವವಿದ್ಯಾಲಯಗಳ ಉಪನ್ಯಾಸಕರಿಗೆ 7ನೇ ವೇತನ ಆಯೋಗದ ಶಿಫಾರಸ್ಸುಗಳನ್ನು ಜಾರಿಗೆ ತರಲು ಸಿದ್ದತೆ ನಡೆಸಿದೆ.
ಯುಜಿಸಿ ವೇತನ ಪಾವತಿ ನಿಯಮದ ಅಡಿಯಲ್ಲಿ ಸಂಬಳ ಪಡೆಯುವ ಉಪನ್ಯಾಸಕರಿಗೆ ಪರಿಷ್ಕೃತ ವೇತನದ ಪ್ರಮಾಣವನ್ನು ಅನುಷ್ಠಾನಗೊಳಿಸಲು ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ಪರಿಷ್ಕೃತ ವೇತನದ ಪ್ರಮಾಣ
7ನೇ ವೇತನ ಆಯೋಗದ ಶಿಫಾರಸ್ಸಿನೊಂದಿಗೆ, ರೂ. 15,000 ಮತ್ತು ರೂ. 35,000 ವೇತನ ಪಡೆಯುತ್ತಿದ್ದ ಉಪನ್ಯಾಸಕರು ತಿಂಗಳಿಗೆ ರೂ. 57,700 ವೇತನ ಪಡೆಯಲಿದ್ದಾರೆ.
ಉನ್ನತ ಶಿಕ್ಷಣ ಇಲಾಖೆಯ ವಿವರಗಳ ಅನ್ವಯ ಉಪನ್ಯಾಸಕರ ಗರಿಷ್ಠ ವೇತನ ಮೀತಿ ರೂ. 1.82 ಲಕ್ಷ. ಆಗಿರಲಿದೆ.
ಹಿರಿಯ ಸಹಾಯಕ ಪ್ರಾದ್ಯಾಪಕರು ರೂ. 39,000 ಬದಲಿಗೆ ರೂ. 68,900 ವೇತನ ಪಡೆಯಲಿದ್ದು, ಗರಿಷ್ಠ ರೂ. 2,05, 500 ವೇತನ ಪಡೆಯಲಿದ್ದಾರೆ. ಅಸೋಸಿಯೇಟ್ ಪ್ರಾಧ್ಯಾಪಕರು ರೂ. 1,31,400 ರಿಂದ ರೂ. 2,17,100 ವರೆಗೆ ಸಂಬಳ ಪಡೆಯಲಿದ್ದಾರೆ. 7ನೇ ವೇತನ ಆಯೋಗ: ಕೇಂದ್ರ ನೌಕರರ ವೇತನ ಏರಿಕೆ ಇಲ್ಲ..
ಯಾರಿಗೆ ವೇತನ ಅನ್ವಯ/ಅನ್ವಯವಾಗುವುದಿಲ್ಲ
ರಾಜ್ಯ ಸರ್ಕಾರದ ಅಧಿಸೂಚನೆ ಪ್ರಕಾರ ಪರಿಷ್ಕೃತ ವೇತನ ಶಿಕ್ಷಕರು, ಗ್ರಂಥಾಲಯ ಸಿಬ್ಬಂದಿಗಳು ಶಾರೀರಿಕ ಶಿಕ್ಷಣ ಸಿಬ್ಬಂದಿ ಮತ್ತು ಸರ್ಕಾರದ ಸಂಸ್ಥೆಗಳಲ್ಲಿ ಸಮಾನ ಕೇಡರ್ ಸಿಬ್ಬಂದಿಗಳಿಗೆ ಅನ್ವಯವಾಗಲಿದೆ. ಶಿಕ್ಷಕರಾಗಿ ನೇಮಕಾತಿಗೆ ಕನಿಷ್ಠ ಅರ್ಹತೆ ಮೇಲೆ ಯುಜಿಸಿ ನಿಯಮಾವಳಿಗಳನ್ನು ಪೂರೈಸದವರಿಗೆ ಈ 7ನೇ ವೇತನ ಆಯೋಗದ ಪರಿಷ್ಕೃತ ವೇತನ ಪ್ರಮಾಣ ಅನ್ವಯ ಆಗುವುದಿಲ್ಲ.
ಹೋಳಿ ಕೊಡುಗೆ
ಹೋಳಿ ಹಬ್ಬದ ಸನಿಹದಲ್ಲೇ ಉಪನ್ಯಾಸಕರಿಗೆ ರಾಜ್ಯ ಸರ್ಕಾರ ಭರ್ಜರಿ ಗಿಫ್ಟ್ ನ್ನು ನೀಡಿದ್ದಾರೆ. ಇನ್ನೊಂದೆಡೆ ಲೋಕಸಭಾ ಚುನಾವಣೆ ಕಾವು ಪಡೆಯುತ್ತಿದ್ದು, ಇದೇ ಸಂದರ್ಭದಲ್ಲಿ ವೇತನ ಹೆಚ್ಚಚಿಸಿರುವುದು ವಿಶೇಷವಾಗಿದೆ.
7ನೇ ವೇತನ ಆಯೋಗದ ಪರಿಷ್ಕೃತ ವೇತನಕ್ಕಾಗಿ ನಾವು ದೀರ್ಘಕಾಲದಿಂದ ಕಾಯುತ್ತಿದ್ದೆವು. ಈಗ ತುಂಬಾ ಸಂತೋಷವಾಗಿದ್ದೇವೆ ಎಂದು ಕರ್ನಾಟಕ ಸರ್ಕಾರಿ ಕಾಲೇಜು ಶಿಕ್ಷಕರ ಸಂಘದ ಅಧ್ಯಕ್ಷ ಪ್ರೊ. ಮಂಜುನಾಥ್ ಹೇಳಿದ್ದಾರೆ.
More From GoodReturns

8th Pay Commission: ಕೇಂದ್ರ ಸರ್ಕಾರ ನೌಕರರಿಗೆ ಎಷ್ಟು ಸಂಬಳ ಹೆಚ್ಚಾಗಬಹುದು? ಫಿಟ್ಮೆಂಟ್ ಫ್ಯಾಕ್ಟರ್ ತಿಳಿಯಿರಿ

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!



Click it and Unblock the Notifications