ಸರ್ಕಾರಿ ಸ್ವಾಮ್ಯದ ಎರಡು ಪ್ರಮುಖ ಬ್ಯಾಂಕುಗಳು ಏಪ್ರಿಲ್ 1ರಿಂದ ಕಾರ್ಯಾಚರಣೆ ನಿಲ್ಲಿಸಲಿವೆ. ಹೌದು, ದೇನಾ ಮತ್ತು ವಿಜಯಾ ಬ್ಯಾಂಕ್ ಗಳು ಏಪ್ರಿಲ್ 1 ರಂದು ಬ್ಯಾಂಕ್ ಆಫ್ ಬರೋಡಾದಲ್ಲಿ ವಿಲೀನವಾಗಲಿವೆ.
ಸರ್ಕಾರಿ ಸ್ವಾಮ್ಯದ ಎರಡು ಪ್ರಮುಖ ಬ್ಯಾಂಕುಗಳು ಏಪ್ರಿಲ್ 1ರಿಂದ ಕಾರ್ಯಾಚರಣೆ ನಿಲ್ಲಿಸಲಿವೆ. ಹೌದು, ದೇನಾ ಮತ್ತು ವಿಜಯಾ ಬ್ಯಾಂಕ್ ಗಳು ಏಪ್ರಿಲ್ 1 ರಂದು ಬ್ಯಾಂಕ್ ಆಫ್ ಬರೋಡಾದಲ್ಲಿ ವಿಲೀನವಾಗಲಿವೆ. ಈ ವಿಲೀನದ ನಂತರ ಬ್ಯಾಂಕ್ ಆಫ್ ಬರೋಡಾ ದೇಶದ 3ನೇ ಅತಿ ದೊಡ್ಡ ಬ್ಯಾಂಕ್ ಎನಿಸಲಿದೆ. ವಿಲೀನದ ನಂತರ ವಿಜಯ ಬ್ಯಾಂಕ್ ಮತ್ತು ದೇನಾ ಬ್ಯಾಂಕ್ ಖಾತೆಗಳು ಹಾಗು ಬ್ಯಾಂಕಿಂಗ್ ಕಾರ್ಯಾಚರಣೆ ಬರೋಡಾ ಬ್ಯಾಂಕಿಗೆ ವರ್ಗಾವಣೆಯಾಗಲಿದೆ. ಇದು ಗ್ರಾಹಕರ ಮೇಲೆ ಹಲವು ಪರಿಣಾಮ ಬೀರಲಿದ್ದು, ದೇನಾ ಬ್ಯಾಂಕ್ ಹಾಗು ವಿಜಯ ಬ್ಯಾಂಕ್ ಗ್ರಾಹಕರು ಹಲವು ಬದಲಾವಣೆಗಳನ್ನು ಮಾಡಿಕೊಳ್ಳಬೇಕಿದೆ.
ಏನು ಬದಲಾಗಲಿದೆ?
- ವಿಲೀನದ ನಂತರ ದೇನಾ ಮತ್ತು ವಿಜಯಾ ಬ್ಯಾಂಕ್ ಗ್ರಾಹಕರೆಲ್ಲ ಬ್ಯಾಂಕ್ ಆಫ್ ಬರೋಡಾಗೆ ವರ್ಗಾವಣೆಯಾಗಲಿದ್ದಾರೆ.
- ಗ್ರಾಹಕರಿಗೆ ಹೊಸ ಖಾತೆಯ ಸಂಖ್ಯೆ ಮತ್ತು ಕಸ್ಟಮರ್ ಐಡಿ ನೀಡಲಾಗುತ್ತದೆ.
- ಸಾಲಗಾರರು, ಇಎಂಐ ಪಾವತಿಸುವವರು ಹೊಸ ಅರ್ಜಿ ದಾಖಲೆಗಳನ್ನು ಬ್ಯಾಂಕಿಗೆ ಸಲ್ಲಿಸಬೇಕು.
- ಹೊಸ ಡೆಬಿಟ್ ಕಾರ್ಡ್, ಚೆಕ್ ಬುಕ್ ಮತ್ತು ಕ್ರೆಡಿಟ್ ಕಾರ್ಡ್ ನೀಡಲಾಗುವುದು.
ಬ್ಯಾಂಕಿಂಗ್ ವಿವರ ನವೀಕರಣ
ಗ್ರಾಹಕರು ತಮ್ಮ ಹೊಸ ಖಾತೆ ಸಂಖ್ಯೆಗಳನ್ನು ಮತ್ತು ಐಎಫ್ಎಸ್ಸಿ ಕೋಡ್ ಗಳನ್ನು ಆದಾಯ ತೆರಿಗೆ ಇಲಾಖೆ, ಮ್ಯೂಚುಯಲ್ ಫಂಡ್, ವಿಮೆ ಕಂಪನಿಗಳು, ರಾಷ್ಟ್ರೀಯ ಪಿಂಚಣಿ ಯೋಜನೆ, ಇತ್ಯಾದಿ ಸಂಸ್ಥೆಗಳೊಂದಿಗೆ ಬ್ಯಾಂಕಿಂಗ್ ವಿವರಗಳನ್ನು ನವೀಕರಿಸಬೇಕು.
ಇದು ಬದಲಾಗಲ್ಲ
- ಬ್ಯಾಂಕ್ ಆಫ್ ಬರೋಡಾಗೆ ಸೇರ್ಪಡೆಯಾಗುವ ಗ್ರಾಹಕರಿಗೆ ಪರ್ಸನಲ್ ಲೋನ್, ಮನೆ ಸಾಲ, ವಾಹನ ಸಾಲ, ಶಿಕ್ಷಣ ಸಾಲ ಇತ್ಯಾದಿಗಳ ಮೇಲಿನ ಬಡ್ಡಿ ದರಗಳು ಬದಲಾಗದೇ ಇರಬಹುದು.
- ಸ್ಥಿರ ಠೇವಣಿ ಅಥವಾ ರಿಕರಿಂಗ್ ಡಿಪಾಸಿಟ್ ಮೇಲಿನ ಬಡ್ಡಿದರ ಬದಲಾಗದೆ ಇರಬಹುದು.
3ನೇ ದೊಡ್ಡ ಬ್ಯಾಂಕ್
ಪ್ರಸ್ತುತ ದೇಶದ ಅತಿದೊಡ್ಡ ಬ್ಯಾಂಕ್ ಅಗಿ ಎಸ್ಬಿಐ ಮೊದಲ ಸ್ಥಾನದಲ್ಲಿದ್ದು, ಹೆಚ್.ಡಿ.ಎಫ್.ಸಿ. 2 ನೇ ಸ್ಥಾನದಲ್ಲಿದೆ. ಐಸಿಐಸಿಐ 3ನೇ ಸ್ಥಾನದಲ್ಲಿದೆ. ಇದೀಗ ದೇನಾ ಮತ್ತು ವಿಜಯಾ ಬ್ಯಾಂಕ್ ವಿಲೀನದ ಬಳಿಕ ಬ್ಯಾಂಕ್ ಆಫ್ ಬರೋಡಾದ ವ್ಯವಹಾರದ ಮೌಲ್ಯ ಏರಿಕೆಯಾಗಲಿದ್ದು, 3 ನೇ ದೊಡ್ಡ ಬ್ಯಾಂಕ್ ಆಗಲಿದೆ. ಬ್ಯಾಂಕುಗಳ ವಿಲೀನದಿಂದ ಕೆಲವು ಶಾಖೆ ಬಂದ್ ಆಗಲಿವೆ.
More From GoodReturns

Alireza Arafi: ಇಸ್ರೇಲ್ ದಾಳಿಯಲ್ಲಿ ಖಮೇನಿ ನಿಧನ: ಅಲಿರೆಜಾ ಅರಾಫಿ ತಾತ್ಕಾಲಿಕ ಸುಪ್ರೀಂ ನಾಯಕನಾಗಿ ನೇಮಕ!

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

Gold Rate Bengaluru: ಮಧ್ಯಪ್ರಾಚ್ಯದಲ್ಲಿ ಯುದ್ಧ ನಡುವೆ ಚಿನ್ನದ ಬೆಲೆಯಲ್ಲಿ 43,700 ರೂ. ಏರಿಕೆ! ಇಂದಿನ ಬೆಲೆ ಎಷ್ಟು?

Karnataka Budget 2026: ಬಜೆಟ್ ನಂತರ ಗ್ಯಾರಂಟಿ ಯೋಜನೆಗಳು ಇರುತ್ತಾ? ರಾಜ್ಯದ ಜನರಿಗೆ ಇರುವ ನಿರೀಕ್ಷೆಗಳೇನು? ತಿಳಿಯಿರಿ

Train Service: ಬೆಂಗಳೂರು-ಕೇರಳ ಪ್ರಯಾಣ ಈಗ ಇನ್ನೂ ಸುಲಭ…ಕೇವಲ 230 ರೂ., ಹೆಚ್ಚು ಸೌಕರ್ಯ!

High Speed Train: ಬೆಂಗಳೂರಿಗೆ ಮತ್ತೊಂದು ಹೈಸ್ಪೀಡ್ ರೈಲು! ಇನ್ಮೇಲೆ ಹೈದರಾಬಾದ್ಗೆ ಬರೀ 2 ಗಂಟೆ ಜರ್ನಿ

Karnataka Weather: ರಾಜ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಬಿಸಿಲು! ಹೇಗಿದೆ ಇಂದಿನ ಹವಾಮಾನ?

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Gold Rate Bengaluru: ಇಂದೂ ಚಿನ್ನದ ಬೆಲೆ ಇಳಿಕೆ…24 ಕ್ಯಾರಟ್ನಲ್ಲಿ ಒಂದೇ 4,900 ರೂ. ಕುಸಿತ!



Click it and Unblock the Notifications