2016ರ ನವೆಂಬರ್ 8 ರಂದು ಪ್ರಧಾನಿ ಮೋದಿಯವರು ರೂ. 500/1000 ಮುಖಬೆಲೆಯ ನೋಟುಗಳನ್ನು ರದ್ದು ಮಾಡಿರುವುದು ಭಾರೀ ಪರಿಣಾಮವನ್ನೇ ಬೀರಿದ್ದು, ಬರೋಬ್ಬರಿ 50 ಲಕ್ಷ ಜನ ಉದ್ಯೋಗ ಕಳೆದುಕೊಂಡಿದ್ದಾರೆ ಎಂಬ ಅಧ್ಯಯನ ವರದಿ ಮಾಡಿದೆ.
2016ರ ನವೆಂಬರ್ 8 ರಂದು ಪ್ರಧಾನಿ ಮೋದಿಯವರು ರೂ. 500/1000 ಮುಖಬೆಲೆಯ ನೋಟುಗಳನ್ನು ರದ್ದು ಮಾಡಿರುವುದು ಭಾರೀ ಪರಿಣಾಮವನ್ನೇ ಬೀರಿದ್ದು, ಬರೋಬ್ಬರಿ 50 ಲಕ್ಷ ಜನ ಉದ್ಯೋಗ ಕಳೆದುಕೊಂಡಿದ್ದಾರೆ ಎಂಬ ಅಧ್ಯಯನ ವರದಿ ಮಾಡಿದೆ.
2018 ರಲ್ಲಿ ಭಾರತದ ನಿರುದ್ಯೋಗವು ಶೇಕಡಾ 6 ರಷ್ಟನ್ನು ತಲುಪಿದ್ದು, 2000 ಮತ್ತು 2010 ರ ದಶಕದಲ್ಲಿ ಇದು ದುಪ್ಪಟ್ಟು ಏರಿಕೆಯಾಗಿದೆ. ಅಜೀಮ್ ಪ್ರೇಮ್ ಜೀ ವಿಶ್ವವಿದ್ಯಾಲಯದ ಸೆಂಟರ್ ಫಾರ್ ಸಸ್ಟೈನಬಲ್ ಎಂಪ್ಲಾಯ್ಮೆಂಟ್ ಸಂಸ್ಥೆ ವರದಿ ಇದು ಬಹಿರಂಗಗೊಳಿಸಿದೆ.
ದೇಶದಾದ್ಯಂತ ಚಲಾವಣೆಯಲ್ಲಿದ್ದ ಶೇ. 80ರಷ್ಟು ನೋಟುಗಳು 2016ರ ನವೆಂಬರ್ ನಲ್ಲಿ ಮೌಲ್ಯ ಕಳೆದುಕೊಂಡವು. ಇದರಿಂದಾಗಿ ಕಪ್ಪು ಹಣ, ನಕಲಿ ನೋಟು ಸಮಸ್ಯೆಗಳು ಕಡಿಮೆಯಾಗುವವು ಎಂದು ನಿರ್ಧಾರ ಕೈಗೊಂಡಿದ್ದಾಗಿ ಸರಕಾರ ಸಮರ್ಥನೆ ನೀಡಿತ್ತು.
ಶೇ. 99.3ರಷ್ಟು ನೋಟುಗಳು ಆರ್ಬಿಐಗೆ
ವಾಸ್ತವದಲ್ಲಿ ನಿಷೇಧಗೊಂಡಿದ್ದ ನೋಟುಗಳ ಪೈಕಿ ಶೇ. 99.3ರಷ್ಟು ನೋಟುಗಳು ಆರ್ಬಿಐಗೆ ಮರಳಿದ್ದವು. ಅಲ್ಲದೇ ನೋಟು ರದ್ದತಿ ಸಂಪೂರ್ಣ ವಿಫಲವಾಗಿದೆ ಎಂದು ಆರ್ಥಿಕ ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದರು. ನ್ಯಾಷನಲ್ ಸ್ಯಾಂಪಲ್ ಸರ್ವೇ ಆಫೀಸ್ (ಎನ್ಎಸ್ಎಸ್ಒ) ಬಿಡುಗಡೆ ಮಾಡಿದ 2017-18ರ ಎಂಪ್ಲಾಯ್ಮೆಂಟ್ ಸರ್ವೇಯಲ್ಲಿ ಉದ್ಯೋಗ ನಷ್ಟ 40 ವರ್ಷಗಳಲ್ಲೇ ಅಧಿಕ ಎನಿಸಿಕೊಂಡಿತ್ತು.
50 ಲಕ್ಷ ಉದ್ಯೋಗ ನಷ್ಟ
ಮಂಗಳವಾರ ಅಜೀಮ್ ಪ್ರೇಮ್ಜೀ ಯೂನಿವರ್ಸಿಟಿಯ ಸೆಂಟರ್ ಫಾರ್ ಸಸ್ಟೈನೇಬಲ್ ಎಂಪ್ಲಾಯ್ಮೆಂಟ್ ಸಂಶೋಧಕರ 'ಸ್ಟೇಟ್ ಆಫ್ ವರ್ಕಿಂಗ್ ಇಂಡಿಯಾ' ವರದಿ ಬಿಡುಗಡೆಯಾಗಿದೆ. 2016 ನವೆಂಬರ್ ನಂತರ ಉದ್ಯೋಗ ಕುಸಿತ ಆರಂಭವಾಗಿದ್ದು, ನೋಟು ನಿಷೇಧದಿಂದ 50 ಲಕ್ಷ ಮಂದಿ ಉದ್ಯೋಗ ಕಳೆದುಕೊಂಡಿದ್ದಾರೆ ಎಂದು ತಿಳಿಸಿದೆ. 2018ರಲ್ಲಿ ಭಾರತದ ನಿರುದ್ಯೋಗ ಪ್ರಮಾಣ ಶೇ. 6ಕ್ಕೆ ಹೆಚ್ಚುವ ಮೂಲಕ ಗರಿಷ್ಠ ಪ್ರಮಾಣವನ್ನು ತಲುಪಿದೆ.
ಯುವಕರ ಮೇಲೆ ಎಫೆಕ್ಟ್
ಗ್ರಾಮೀಣ ಮತ್ತು ನಗರ ಎರಡು ಪ್ರದೇಶಗಳಲ್ಲಿ ನಿರೋದ್ಯಗಿಗಳ ಪೈಕಿ 20-24 ವರ್ಷದ ಯುವಕರೇ ಹೆಚ್ಚಿದ್ದಾರೆ ಎಂದು ಸೆಂಟರ್ ಫಾರ್ ಸಸ್ಟೈನೇಬಲ್ ಎಂಪ್ಲಾಯ್ಮೆಂಟ್ ಸಂಶೋಧಕರ 'ಸ್ಟೇಟ್ ಆಫ್ ವರ್ಕಿಂಗ್ ಇಂಡಿಯಾ' ವರದಿ ಹೇಳಿದೆ. ಅಧ್ಯಯನವು ಖಾಸಗಿ ಸಂಸ್ಥೆ ಸಿಎಂಐಇ ನೀಡಿದ ಅಂಶಗಳನ್ನು ಒಳಗೊಂಡಿದ್ದು, ಕೇಂದ್ರ ಸರ್ಕಾರ ಬಿಡುಗಡೆ ಮಾಡಲು ನಿರಾಕರಿಸಿದ ಪಿರಿಯಾಡಿಕ್ ಲೇಬರ್ ಫೋರ್ಸ್ ಸಮೀಕ್ಷೆ ಅಂಶಗಳನ್ನು ಅಧ್ಯಯನದಲ್ಲಿ ಬಳಸಿಲ್ಲ.
More From GoodReturns

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ



Click it and Unblock the Notifications