ವಿಶ್ವದಲ್ಲಿ ಅತಿ ವೇಗವಾಗಿ ಬೆಳೆಯುತ್ತಿರುವ ದೊಡ್ಡ ಆರ್ಥಿಕತೆಯನ್ನು ಹೊಂದಿರುವ ಭಾರತವು ನಿಧಾನವಾಗುತ್ತಿದೆ ಎಂದರೆ ಆಶ್ಚರ್ಯವಾಗಬಹುದು. ಆದರೆ ಕಳೆದ ಐದಾರು ತಿಂಗಳುಗಳಲ್ಲಿನ ಆರ್ಥಿಕ ಚಟುವಟಿಕೆಗಳಲ್ಲಾದ ಇಳಿಕೆಯಿಂದ ಇದು ಸ್ಪಷ್ಟವಾಗಿ ಗೋಚರವಾಗಿದೆ
ವಿಶ್ವದಲ್ಲಿ ಅತಿ ವೇಗವಾಗಿ ಬೆಳೆಯುತ್ತಿರುವ ದೊಡ್ಡ ಆರ್ಥಿಕತೆಯನ್ನು ಹೊಂದಿರುವ ಭಾರತವು ನಿಧಾನವಾಗುತ್ತಿದೆ ಎಂದರೆ ಆಶ್ಚರ್ಯವಾಗಬಹುದು. ಆದರೆ ಕಳೆದ ಐದಾರು ತಿಂಗಳುಗಳಲ್ಲಿನ ಆರ್ಥಿಕ ಚಟುವಟಿಕೆಗಳಲ್ಲಾದ ಇಳಿಕೆಯಿಂದ ಇದು ಸ್ಪಷ್ಟವಾಗಿ ಗೋಚರವಾಗಿದೆ.

ವಾಹನಗಳ ಮಾರಾಟ ಮತ್ತು ಬಾಳಿಕೆ ಬರುವ ಸರಕುಗಳ ಕುಸಿತದಿಂದ ಆರ್ಥಿಕತೆ ನಿಧಾನವಾಗಿ ಸಾಗುತ್ತಿದೆ. ವಿಮಾನಯಾನ ಸಂಸ್ಥೆಗಳ ಹಾರಾಟ ಹಾಗು ಬೆಳವಣಿಗೆಯಲ್ಲಿ ಕುಸಿತ ಕಂಡಿದೆ. ಜೊತೆಗೆ ಸಾಬೂನುಗಳು ಮತ್ತು ಡಿಟರ್ಜೆಂಟ್ ನಂತಹ ಉತ್ಪನ್ನಗಳ ಮಾರಾಟ ಕೂಡ ದುರ್ಬಲಗೊಂಡಿದೆ.
ಆರ್ಥಿಕತೆಯಲ್ಲಿ ಸಾಕಷ್ಟು ಹಣ ಇಲ್ಲದಿರುವುದು ಪ್ರಮುಖ ಸಮಸ್ಯೆ ಎನ್ನಲಾಗಿದೆ. ಕಳೆದ ಎರಡು ವರ್ಷಗಳಿಂದ, ಗ್ರಾಹಕ ಉತ್ಪನ್ನಗಳ ವಿತರಕರು ಮತ್ತು ಚಿಲ್ಲರೆ ವ್ಯಾಪಾರಿಗಳು ಲಿಕ್ವಿಡಿಟಿ ಹೆಚ್ಚುತ್ತಿರುವ ಕೊರತೆಯ ಬಗ್ಗೆ ಎಚ್ಚರಿಕೆ ನೀಡಿದ್ದಾರೆ. ಆದರೆ ಪಾಲಿಸಿಗಳನ್ನು ಜಾರಿ ತರಬೇಕಾದವರು ವಿತರಕರ ಮತ್ತು ಚಿಲ್ಲರೆ ವ್ಯಾಪಾರಿಗಳ ಅಭಿಪ್ರಾಯವನ್ನು ಲೆಕ್ಕಕ್ಕೆ ತೆಗೆದುಕೊಂಡಿಲ್ಲ.
ಸರ್ಕಾರವು 2016 ರ ಅಂತ್ಯದ ಹೊತ್ತಿಗೆ ತಾತ್ಕಾಲಿಕವಾಗಿ ಕರೆನ್ಸಿ ಪ್ರಸರಣ ಹಿಂತೆಗೆದುಕೊಂಡಿರುವುದು ಮತ್ತು ರಾಷ್ಟ್ರವ್ಯಾಪಿ ಸರಕು ಮತ್ತು ಸೇವಾ ತೆರಿಗೆ ಜಾರಿ ತಂದಿರುವುದು ಆರ್ಥಿಕ ಬೆಳವಣಿಗೆಯಲ್ಲಿ ಹೊಂದಿಕೊಳ್ಳಲು ಕಷ್ಟವಾಯಿತು.
GST ಜಾರಿಯಾಗಿ ಒಂದು ವರ್ಷಕ್ಕೂ ಹೆಚ್ಚು ಸಮಯವಾಗಿದ್ದು, ಇದರ ಪರಿಣಾಮದಿಂದಾಗಿ ಆರ್ಥಿಕ ಬೆಳವಣಿಗೆ ನಿಧಾನವಾಗಿರುವುದು ಹೆಚ್ಚು ಸ್ಪಷ್ಟವಾಗುತ್ತದೆ. ಆದ್ದರಿಂದ ದ್ರವ್ಯತೆ ಕೊರತೆ ಎದುರಾಗಿದ್ದು, ಕಳೆದ ಎರಡು ವರ್ಷಗಳಿಂದ ಹಣ ಪೂರೈಕೆ, GDP ಬೆಳವಣಿಗೆ ಕುಸಿದಿದೆ. ಜಿಡಿಪಿ ಅನುಪಾತವು ಶೇ. 85 ರಿಂದ ಶೇ. 80ಕ್ಕಿಂತ ಕಡಿಮೆಯಾಗಿದೆ.
ಸರ್ಕಾರಿ ಸ್ವಾಮ್ಯದ ಬ್ಯಾಂಕುಗಳು ಹೆಚ್ಚು ನಿಯಂತ್ರಣ, ಪ್ರಾಬಲ್ಯವನ್ನು ಹೊಂದಿದ್ದು ಹೆಚ್ಚು ಆಸ್ತಿಯನ್ನು ನಿಯಂತ್ರಿಸುತ್ತಿವೆ. ಎನ್ಪಿಎ ಹೆಚ್ಚಾಗಿದ್ದು ಆರ್ಥಿಕ ಸಂಕಟದಲ್ಲಿ ಸಿಲುಕಿವೆ.
More From GoodReturns

Petrol Price Hike: ಪ್ರೀಮಿಯಂ ಪೆಟ್ರೋಲ್ ದರ ಏರಿಕೆ-ಲೀಟರ್ಗೆ 2 ಹೆಚ್ಚಳ, ಸಾಮಾನ್ಯ ಇಂಧನ ದರ ಸ್ಥಿರ

Eid ul Fitr 2026: ಭಾರತದಲ್ಲಿ ಯಾವಾಗ ಚಂದ್ರನ ದರ್ಶನ? ರಂಜಾನ್ ಹಬ್ಬ ಯಾವಾಗ?

Silver Rates Today: ಭಾರತೀಯ ಬೆಳ್ಳಿ ಖರೀದಿದಾರರಿಗೆ ಸಿಹಿಸುದ್ದಿ; 5000 ರೂ.ನಷ್ಟು ಇಳಿಕೆ

PAN Card Rules: ಪ್ಯಾನ್ ಕಾರ್ಡ್ ಇಲ್ಲದವರೇ ಇಲ್ಲಿ ಗಮನಿಸಿ; ನಿಯಮ ಸಂಪೂರ್ಣ ಚೇಂಜ್

Ugadi 2026 Wishes: ಈ ವರ್ಷದ ‘ಯುಗಾದಿ’ ಹೊಸ ಬೆಳಕು ತರಲಿ- ನಿಮ್ಮ ಪ್ರೀತಿ ಪಾತ್ರರಿಗೆ ಈ ರೀತಿ ಶುಭಾಶಯ ತಿಳಿಸಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ ಸ್ಥಳ ಆಯ್ಕೆ ಬಗ್ಗೆ ಹೊಸ ಅಪ್ಡೇಟ್; ಡಿ.ಕೆ ಶಿವಕುಮಾರ್ ಬಳಿ ಸುಳಿವು

Credit Score: ಸಾಲ ಪಡೆಯಲಷ್ಟೇ ಅಲ್ಲ, ಬ್ಯಾಂಕ್ ಉದ್ಯೋಗಕ್ಕೂ ಬೇಕಿದೆ ಕ್ರೆಡಿಟ್ ಸ್ಕೋರ್; ಈ ಬಗ್ಗೆ ತಿಳಿಯಿರಿ

Gold Rate: ಚಿನ್ನಪ್ರಿಯರಿಗೆ ‘ಯುಗಾದಿ’ ಸಿಹಿ; ಬೆಂಗಳೂರಿನಲ್ಲಿ 24K ಬಂಗಾರದ ಬೆಲೆಯಲ್ಲಿ 27,800 ರೂ. ಕುಸಿತ

Gold Rates & Silver Rates Today Live: ಚಿನ್ನ-ಬೆಳ್ಳಿ ದರದಲ್ಲಿ ಭಾರಿ ಏರಿಕೆ-ಮಾರುಕಟ್ಟೆಯ ಲೈವ್ ಅಪ್ಡೇಟ್ ತಿಳಿಯಿರಿ

Karnataka Rain: ರಾಜ್ಯದಲ್ಲಿ ಸದ್ಯಕ್ಕೆ ನಿಲ್ಲಲ್ಲ ವರುಣಾರ್ಭಟ; ಎಷ್ಟು ದಿನ ಈ ಮಳೆ ಎಂದು ತಿಳಿಯಿರಿ

Ballari Airport: ಬಳ್ಳಾರಿ ವಿಮಾನ ನಿಲ್ದಾಣಕ್ಕೆ ಈ ವಿಚಾರಕ್ಕೆ ಅಡ್ಡಿಯಾಗ್ತಿದ್ಯಾ-ಏನದು ಹೊಸ ವಿಚಾರ ತಿಳಿಯಿರಿ



Click it and Unblock the Notifications