ಭಾರತೀಯ ರಿಸರ್ವ್ ಬ್ಯಾಂಕ್ ಶೀಘ್ರದಲ್ಲೇ ರೂ. 200 ಮುಖಬೆಲೆಯ ಹೊಸ ನೋಟುಗಳನ್ನು ಪರಿಚಯಿಸಲು ಸಿದ್ದವಾಗಿದೆ. ಮಹಾತ್ಮ ಗಾಂಧೀಜಿ ಸರಣಿಯಲ್ಲಿ ಆರ್ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಅವರ ಸಹಿ ಇರುವ ಹೊಸ ನೋಟುಗಳು ಬರಲಿವೆ.
ಭಾರತೀಯ ರಿಸರ್ವ್ ಬ್ಯಾಂಕ್ ಶೀಘ್ರದಲ್ಲೇ ರೂ. 200 ಮುಖಬೆಲೆಯ ಹೊಸ ನೋಟುಗಳನ್ನು ಪರಿಚಯಿಸಲು ಸಿದ್ದವಾಗಿದೆ. ಮಹಾತ್ಮ ಗಾಂಧೀಜಿ ಸರಣಿಯಲ್ಲಿ ಆರ್ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಅವರ ಸಹಿ ಇರುವ ಹೊಸ ನೋಟುಗಳು ಬರಲಿವೆ.
ಏಪ್ರಿಲ್ 23 ರಂದು ಆರ್ಬಿಐ ಅಧಿಸೂಚನೆ ಹೊರಡಿಸಿದ್ದು, ಈಗಾಗಲೇ ಚಲಾವಣೆಯಲ್ಲಿರುವ ಬ್ಯಾಂಕ್ ನೋಟುಗಳಂತೆ ಇರಲಿವೆ ಎಂದು ತಿಳಿಸಿದೆ. ಆರ್ಬಿಐ ಗವರ್ನರ್ ಶಕ್ತಿಕಾಂತ ದಾಸ್ ಅವರ ಸಹಿ ಹೊರತುಪಡಿಸಿದರೆ ಪ್ರಸ್ತುತ ಚಾಲ್ತಿಯಲ್ಲಿರುವ ನೋಟುಗಳಿಗೆ ಮತ್ತು ಹೊಸ ನೋಟುಗಳಿಗೆ ಯಾವುದೇ ವ್ಯತ್ಯಾಸ ಇರುವುದಿಲ್ಲ ಎಂದು ಹೇಳಲಾಗಿದೆ.
ಹಳೆ ನೋಟು, ಹೊನೋಟು ವೈಶಿಷ್ಟತೆ
ಈ ಹೊಸ ನೋಟುಗಳು ಚಲಾವಣೆಗೆ ಬಂದರೂ ಹಳೆಯ ನೋಟುಗಳು ಚಲಾವಣೆಯಲ್ಲಿ ಇರಲಿವೆ. ಈಗಾಗಲೇ ಚಾಲ್ತಿಯಲ್ಲಿರುವ ನೋಟುಗಳಿಗೆ ಮತ್ತು ಹೊಸ ನೋಟುಗಳಿಗೆ ಯಾವುದೇ ಪ್ರಮುಖ ವ್ಯತ್ಯಾಸ ಇರುವುದಿಲ್ಲ.
ನೋಟಿನ ಮುಂಭಾಗದಲ್ಲಿ ಮಹಾತ್ಮ ಗಾಂಧಿ ಚಿತ್ರವಿದ್ದರೆ, ಹಿಂಭಾಗದಲ್ಲಿ ಸಾಂಚಿಯ ಸ್ತೂಪ ಸ್ಮಾರಕದ ಚಿತ್ರವಿದೆ. ಜತೆಗೆ ಅಶೋಕ ಲಾಂಛನವಿದ್ದು, ಇವು ಭಾರತೀಯ ಸಾಂಸ್ಕೃತಿಕ ಪರಂಪರೆಯನ್ನು ಪ್ರತಿಬಿಂಬಿಸುತ್ತವೆ. 200 ಮುಖಬೆಲೆಯ ಹೊಸ ನೋಟುಗಳ ಗಾಢ ಹಳದಿ ಬಣ್ಣ ಹೊಂದಿದ್ದು, 66mm x 146 mm ಅಳತೆಯನ್ನು ಹೊಂದಿವೆ. ಹೊಸ ರೂ. 100 ನೋಟು ಬಿಡುಗಡೆ, ಅಸಲಿ-ನಕಲಿ ಕಂಡು ಹಿಡಿಯುವುದು ಹೇಗೆ?
200 ನೋಟಿನ ಮುಂಬಾಗದ ವಿಶೇಷತೆ
- ದೇವನಾಗರಿಯಲ್ಲಿ ಮುಖಬೆಲೆ ಸಂಖ್ಯೆ २००
- ಮಧ್ಯದಲ್ಲಿ ಮಹಾತ್ಮ ಗಾಂಧಿ ಭಾವಚಿತ್ರ
- ಸೂಕ್ಷ್ಮ ಅಕ್ಷರಗಳಲ್ಲಿ 'ಆರ್ಬಿಐ', 'ಭಾರತ', 'ಭಾರತ' ಮತ್ತು '200'
- ಭದ್ರತೆ ಎಳೆ, ಎಳೆಗಳ ಬಣ್ಣವು ಹಸಿರಿನಿಂದ ನೀಲಿ ಬಣ್ಣಕ್ಕೆ ತಿರುಗುತ್ತದೆ.
- ಗ್ಯಾರಂಟಿ ಷರತ್ತು
ಮಹಾತ್ಮ ಗಾಂಧಿ ಭಾವಚಿತ್ರದ ಬಲಕ್ಕೆ ಪ್ರಾಮಿಸ್ ಕ್ಲಾಸ್, ಆರ್ಬಿಐ ಲಾಂಛನ
- ಗವರ್ನರ್ ಸಹಿ
- ಬಲಭಾಗದಲ್ಲಿ ಅಶೋಕ ಪಿಲ್ಲರ್ ಲಾಂಛನ
- ಮಹಾತ್ಮ ಗಾಂಧಿ ಭಾವಚಿತ್ರ ಮತ್ತು ಎಲೆಕ್ಟ್ರಾಟೈಪ್ (200) ವಾಟರ್ ಮಾರ್ಕ್
-ನಂಬರ್ ಪ್ಯಾನೆಲ್
ನೋಟಿನ ಹಿಂಬಾಗ
- ಎಡಭಾಗದಲ್ಲಿ ನೋಟು ಮುದ್ರಣ ವರ್ಷ
- ಸ್ವಚ್ಛ ಭಾರತ್ ಲೋಗೋ
- ಭಾಷಾ ಫಲಕ
- ಸಾಂಚಿ ಸ್ತೂಪದ ವಿಶೇಷ ಚಿತ್ರ
- ದೇವನಾಗರಿಯಲ್ಲಿ२०० ಸಂಖ್ಯೆ
ಹೊಸ ನೋಟುಗಳ ಚಲಾವಣೆ
2016 ನವೆಂಬರ್ ನಲ್ಲಿ ರೂ. 1000, 500 ಮುಖಬೆಲೆಯ ನೋಟುಗಳನ್ನು ರದ್ದುಗೊಳಿಸಿದ ನಂತರ ರೂ. 2000 , 500, 200, 50 , 100 ಹಾಗು 10 ಮುಖಬೆಲೆಯ ಹೊಸ ನೋಟುಗಳನ್ನು ಚಲಾವಣೆಗೆ ತರಲಾಗಿದೆ. ಆದರೆ ತದನಂತರದಲ್ಲಿ ನೋಟುಗಳ ಪೂರೈಕೆಯಲ್ಲಿ ಸಮಸ್ಯೆ ಎದುರಾಯಿತು. ನೋಟುಗಳ ಗಾತ್ರಕ್ಕೆ ಅನುಗುಣವಾಗಿ ಎಟಿಎಂ ಕೇಂದ್ರಗಳಲ್ಲಿ ಬದಲಾವಣೆ ಮಾಡಿದ್ದರಿಂದ ಸರ್ಕಾರಕ್ಕೆ ಭಾರೀ ಖರ್ಚು ಮಾಡಬೇಕಾಯಿತು.
More From GoodReturns

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ



Click it and Unblock the Notifications