ದೇಶದಾದ್ಯಂತ ಲೋಕಸಭಾ ಚುನಾವಣೆಯ ಕಾವು ಜೋರಾಗಿದೆ. ಇದರ ನಡುವೆ ಅಡುಗೆ ಅನಿಲ ಗ್ರಾಹಕರಿಗೆ (ಎಲ್ಪಿಜಿ) ಕೇಂದ್ರ ಸರ್ಕಾರ ಶಾಕ್ ನೀಡಿದೆ. ಸರ್ಕಾರಿ ಸ್ವಾಮ್ಯದ ಇಂಡಿಯನ್ ಆಯಿಲ್ ಕಾರ್ಪೊರೇಷನ್ ಎಲ್ಪಿಜಿ (ಅಡುಗೆ ಅನಿಲ) ಬೆಲೆ ಏರಿಕೆ ಮಾಡಿದೆ.
ದೇಶದಾದ್ಯಂತ ಲೋಕಸಭಾ ಚುನಾವಣೆಯ ಕಾವು ಜೋರಾಗಿದೆ. ಇದರ ನಡುವೆ ಅಡುಗೆ ಅನಿಲ ಗ್ರಾಹಕರಿಗೆ (ಎಲ್ಪಿಜಿ) ಕೇಂದ್ರ ಸರ್ಕಾರ ಶಾಕ್ ನೀಡಿದೆ.
ಸರ್ಕಾರಿ ಸ್ವಾಮ್ಯದ ಇಂಡಿಯನ್ ಆಯಿಲ್ ಕಾರ್ಪೊರೇಷನ್ (ಐಒಸಿ) ಎಲ್ಪಿಜಿ (ಅಡುಗೆ ಅನಿಲ) ಬೆಲೆ ಏರಿಕೆ ಮಾಡಿದೆ. ಸಬ್ಸಿಡಿ ಸಹಿತ ಮತ್ತು ಸಬ್ಸಿಡಿ ರಹಿತ ಎಲ್ಪಿಜಿ ದರ ಎಷ್ಟಿದೆ ಎಂಬುದನ್ನು ತಿಳಿಯೋಣ ಬನ್ನಿ.
ಸಬ್ಸಿಡಿ ಸಹಿತ ಎಲ್ಪಿಜಿ ದರ
ಇಂಡಿಯನ್ ಆಯಿಲ್ ಕಾರ್ಪೊರೇಶನ್ (ಐಓಸಿ) 14.2 ಕೆಜಿ ತೂಕದ ಸಬ್ಸಿಡಿ ಸಹಿತ ಸಿಲಿಂಡರ್ ಬೆಲೆಯನ್ನು ದೆಹಲಿಯಲ್ಲಿ 28 ಪೈಸೆ ಏರಿಕೆ ಮಾಡಿದೆ. ಮುಂಬೈನಲ್ಲಿ 29 ಪೈಸೆ ಏರಿಕೆ ಮಾಡಲಾಗಿದ್ದು, ಸಬ್ಸಿಡಿ ಸಹಿತ ಎಲ್ಪಿಜಿ ಸಿಲಿಂಡರ್ ಬೆಲೆ ದೆಹಲಿಯಲ್ಲಿ ರೂ. 496.14, ಕೋಲ್ಕತಾದಲ್ಲಿ ರೂ. 499.29, ಮುಂಬೈನಲ್ಲಿ ರೂ. 493.86 ಮತ್ತು ಚೆನ್ನೈನಲ್ಲಿ ರೂ. 484.02 ಇರಲಿದೆ.
ಸಬ್ಸಿಡಿ ರಹಿತ ಎಲ್ಪಿಜಿ ದರ
ಹೊಸ ಪರಿಷ್ಕೃತ ದರದಂತೆ ದೆಹಲಿ ಮತ್ತು ಮುಂಬೈ ನಗರಗಳಲ್ಲಿ ರೂ. 6 ಏರಿಕೆ ಕಂಡಿದೆ. ಸಬ್ಸಿಡಿ ರಹಿತ ಎಲ್ಪಿಜಿ ಸಿಲಿಂಡರ್ ದರ ದೆಹಲಿಯಲ್ಲಿ ರೂ. 712.5, ಮುಂಬೈನಲ್ಲಿ ರೂ. 684.50, ಕೋಲ್ಕತಾದಲ್ಲಿ ರೂ. 738.50 ಮತ್ತು ಚೆನ್ನೈನಲ್ಲಿ ರೂ. 728 ಆಗಿದೆ.
ಹೊಸ ದರ ಜಾರಿ
ಅಡುಗೆ ಅನಿಲ (ಎಲ್ಪಿಜಿ) ಸಿಲಿಂಡರ್ ಮೇಲಿನ ಪರಿಷ್ಕೃತ ದರ ಮೇ 1 ರಿಂದಲೇ ಜಾರಿಯಾಗಲಿದೆ. ಕಳೆದ ಏಪ್ರಿಲ್ ತಿಂಗಳಲ್ಲೂ ಸಹ ಸಿಲಿಂಡರ್ ಬೆಲೆಯನ್ನು ಏರಿಕೆ ಮಾಡಲಾಗಿತ್ತು. ತೈಲ ಕಂಪನಿಗಳು ಮಾರುಕಟ್ಟೆಯಲ್ಲಿ ಸಬ್ಸಿಡಿ ರಹಿತ ಎಲ್ಪಿಜಿ ಸಿಲಿಂಡರ್ ಬೆಲೆಯನ್ನು 5 ರೂ.ವರೆಗೆ, ಸಬ್ಸಿಡಿ ಸಹಿತ ಸಿಲಿಂಡರ್ ದರ 25 ಪೈಸೆ ಹೆಚ್ಚಳ ಮಾಡಲಾಗಿತ್ತು.
ಬೆಲೆ ಏರಿಕೆಗೆ ಕಾರಣ
ಸಿಲಿಂಡರ್ ಬೆಲೆ ಏರಿಕೆಗೆ ಅಂತರರಾಷ್ಟ್ರೀಯ ಬೆಂಚ್ಮಾರ್ಕ್ ಎಲ್ಪಿಜಿ ದರ ಮತ್ತು ವಿದೇಶಿ ವಿನಿಮಯ ದರದ ಬದಲಾವಣೆಗಳನ್ನು ಅವಲಂಬಿಸಿದೆ.
ತೆರಿಗೆ ನಿಯಮಗಳ ಪ್ರಕಾರ, ಎಲ್ಪಿಜಿ ಮೇಲೆ ಸರಕು ಮತ್ತು ಸೇವೆಗಳ ತೆರಿಗೆ ಇಂಧನದ ಮಾರುಕಟ್ಟೆ ದರದಲ್ಲಿ ಲೆಕ್ಕ ಹಾಕಬೇಕು. ಸರಕಾರದ ಬೆಲೆಗೆ ಒಂದು ಭಾಗವನ್ನು ಸಬ್ಸಿಡಿಯೊಂದಿಗೆ ಆಯ್ಕೆ ಮಾಡಬಹುದು. ಆದರೆ ಮಾರುಕಟ್ಟೆ ದರದಲ್ಲಿ ತೆರಿಗೆಯನ್ನು ಪಾವತಿಸಬೇಕಾಗುತ್ತದೆ. ಇಂಧನ ಮಾರುಕಟ್ಟೆಯ ತೆರಿಗೆ ದರ ಹೆಚ್ಚಳವಾಗಿರುವ ಕಾರಣ ಅಡುಗೆ ಅನಿಲ ಬೆಲೆ ಏರಿಕೆ ಅನಿವಾರ್ಯವಾಗಿದೆ ಎಂದು ಇಂಡಿಯನ್ ಆಯಿಲ್ ಕಾರ್ಪೋರೇಷನ್ ಹೇಳಿದೆ.
ಪ್ರತಿವರ್ಷ 12 ಸಿಲಿಂಡರ್
ದೇಶದ ಕುಟುಂಬಗಳು ಪ್ರತಿವರ್ಷ 12 ಸಬ್ಸಿಡಿ ಸಹಿತ ಸಿಲಿಂಡರ್ ಗಳನ್ನು ವಿಪಡೆಯಬಹುದಾಗಿದೆ. ಇದಕ್ಕಿಂತ ಹೆಚ್ಚಿನ ಸಿಲಿಂಡರ್ ಗಳನ್ನು ಸಬ್ಸಿಡಿ ರಹಿತ ಖರೀದಿಸಬೇಕಾಗುತ್ತದೆ. ಸಬ್ಸಿಡಿ ಮೊತ್ತವನ್ನು ಗ್ರಾಹಕರ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸಲಾಗುತ್ತದೆ.
ಉಜ್ವಲ, ಅನಿಲ ಭಾಗ್ಯ ಯೋಜನೆ
ಕೇಂದ್ರದ ಸರ್ಕಾರ ಕಳೆದ ನಾಲ್ಕು ವರ್ಷಗಳಲ್ಲಿ ಉಜ್ವಲ ಯೋಜನೆಯ ಮೂಲಕ 10 ಕೋಟಿ ಮನೆಗಳಿಗೆ ಎಲ್ಪಿಜಿ ಸಂಪರ್ಕ ಒದಗಿಸಿದೆ. ಈ ಯೋಜನೆ ಸಾಕಾರಕ್ಕಾಗಿ ಸರ್ಕಾರಿ ಸ್ವಾಮ್ಯ ತೈಲ ಕಂಪನಿಗಳು ಕೈಜೋಡಿಸಿವೆ. ಕೇಂದ್ರದ ಉಜ್ವಯ ಯೋಜನೆಯಂತೆ ರಾಜ್ಯದಲ್ಲಿ ಅನಿಲಭಾಗ್ಯ ಯೋಜನೆ ಅನುಷ್ಠಾನವಾಗಿದೆ. ಕೇಂದ್ರ ಸರ್ಕಾರ ತಯಾರಿಸಿರುವ ಫಲಾನುಭವಿಗಳ ಪಟ್ಟಿಯಲ್ಲಿ ರಾಜ್ಯದ ಶೇ. 60ರಷ್ಟು ಕುಟುಂಬಗಳು ಬರುತ್ತಿರಲಿಲ್ಲ. ಹೀಗಾಗಿ ಅನಿಲ ಭಾಗ್ಯ ಯೋಜನೆ ಅಡಿಯಲ್ಲಿ ಅವರೆಲ್ಲರಿಗೂ ಅಡುಗೆ ಅನಿಲ (ಗ್ಯಾಸ್) ನೀಡುವ ಉದ್ದೇಶ ಹೊಂದಿದೆ. ಎಲ್ಪಿಜಿ ಸಬ್ಸಿಡಿ ಖಾತೆಗೆ ಬರುತ್ತಿದೆಯೇ ಎಂಬುದನ್ನು ಚೆಕ್ ಮಾಡೋದು ಹೇಗೆ?
More From GoodReturns

Siddaramaiah: ಹೋಟೆಲ್ ಉದ್ಯಮಿಗಳ ಸಂಕಷ್ಟಕ್ಕೆ ಧ್ವನಿಯಾದ ಸಿಎಂ ಸಿದ್ದರಾಮಯ್ಯ; ಪತ್ರ ಬರೆದು ಮನವಿ

Price Hike: ಬೆಂಗಳೂರು ಜನರಿಗೆ ಮತ್ತೆ ಬೆಲೆ ಏರಿಕೆ ಶಾಕ್! ಗ್ಯಾಸ್ ಬೆನ್ನಲ್ಲೇ ಏರಿಕೆಯಾಗುತ್ತಾ ಹೋಟೆಲ್ ಫುಡ್ ದರ

ICC T20 World Cup: ವಿಶ್ವಕಪ್ ಗೆದ್ದ ಭಾರತಕ್ಕೆ ಬಿಸಿಸಿಐನಿಂದ ಗುಡ್ ನ್ಯೂಸ್; 131 ಕೋಟಿ ಬಹುಮಾನ ಘೋಷಣೆ

ಎಲ್ಲ ಹಣವನ್ನೂ ಒಂದೇ ಬ್ಯಾಂಕ್ನಲ್ಲಿ ಇಡ್ತಿದ್ದೀರಾ? ಒಂದು ತಪ್ಪು ನಿಮ್ಮ ಸಂಪೂರ್ಣ ಉಳಿತಾಯಕ್ಕೆ ಅಪಾಯ!

Ugadi 2026: ಯುಗಾದಿ ನಂತರ ಈ ರಾಶಿಯವರಿಗೆ ಹಣವೋ ಹಣ; ನೀವೂ ಇದ್ದೀರಾ ನೋಡಿ

LPG cylinder Price: ದೇಶದ ಜನರಿಗೆ ಅಡುಗೆ ಅನಿಲ ದರ ಶಾಕ್… LPG ಸಿಲಿಂಡರ್ ಬೆಲೆಯಲ್ಲಿ 60 ರೂ. ಏರಿಕೆ!

LPG Gas Cylinder: ಎಲ್ಪಿಜಿ ಗ್ಯಾಸ್ ಸಿಲಿಂಡರ್ ಪೂರೈಕೆ ಸ್ಥಗಿತ, ಹೋಟೆಲ್ ಉದ್ಯಮಕ್ಕೆ ಅಡ್ಡಿ; ಪ್ರಧಾನಿಗೆ ಪತ್ರ

Hotel Bandh: ಬೆಂಗಳೂರಿಗೂ ತಟ್ಟಿದ ಯುದ್ಧದ ಬಿಸಿ; ಇಂದಿನಿಂದ ಹಲವು ಹೋಟೆಲ್ ಬಂದ್

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Hubballi Vijayapura: ಉತ್ತರ ಕರ್ನಾಟಕಕ್ಕೆ ಸಂಚಾರ ಕ್ರಾಂತಿ...ಹುಬ್ಬಳ್ಳಿ–ವಿಜಯಪುರ NH52 ದ್ವಿಪಥ ರಸ್ತೆ ಅಭಿವೃದ್ಧಿ ಆರಂಭ!

Hosur Road: ಹೊಸೂರು ರಸ್ತೆ ಪ್ರಯಾಣಿಕರಿಗೆ ಬಿಗ್ ಅಪ್ಡೇಟ್! ಇನ್ಮೇಲೆ ಸಂಚಾರ ಮತ್ತಷ್ಟು ಸುಲಭ



Click it and Unblock the Notifications