ಅಮೆರಿಕಾ - ಚೀನಾ ನಡುವಿನ ವಾನಿಜ್ಯ ಸಮರ ನಿಲ್ಲುವ ಲಕ್ಷಣಗಳು ಕಾಣುತ್ತಿದ್ದು, ಚೀನಾದೊಂದಿಗೆ ಶೀಘ್ರದಲ್ಲೇ ವಾಣಿಜ್ಯ ವಹಿವಾಟನ್ನು ನಡೆಸಲಾಗುವುದು ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ಅಮೆರಿಕಾ - ಚೀನಾ ನಡುವಿನ ವಾನಿಜ್ಯ ಸಮರ ನಿಲ್ಲುವ ಲಕ್ಷಣಗಳು ಕಾಣುತ್ತಿದ್ದು, ಚೀನಾದೊಂದಿಗೆ ಶೀಘ್ರದಲ್ಲೇ ವಾಣಿಜ್ಯ ವಹಿವಾಟನ್ನು ನಡೆಸಲಾಗುವುದು ಎಂದು ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ಇದು ಜಾಗತಿಕ ಷೇರು ಪೇಟೆಗಳಲ್ಲಿ ಸ್ಥಿರತೆ ಮೂಡಲು ಕಾರಣವಾಗಿದ್ದಲ್ಲದೇ ಇದರ ಪ್ರಭಾವ ಮುಂಬೈ ಷೇರು ಪೇಟೆ ಮೇಲೆ ಉಂಟಾಗಿತ್ತು. ಆದರೆ ದಿನದ ವಹಿವಾಟಿನ ಅಂತ್ಯಕ್ಕೆ ಸೆನ್ಸೆಕ್ಸ್ ಕುಸಿತ ಕಂಡಿತು.
ಕಳೆದ ಎರಡು ದಿನಗಳಿಂದ ನಿರಂತರವಾಗಿ ಕುಸಿತ ಕಂಡಿದ್ದ ಷೇರುಪೇಟೆ, ಬುಧವಾರದ ಆರಂಭಿಕ ವಹಿವಾಟಿನಲ್ಲಿ 200ಕ್ಕೂ ಹೆಚ್ಚು ಪಾಯಿಂಟ್ ಗಳೊಂದಿಗೆ ಉತ್ತಮ ಮುನ್ನಡೆಯನ್ನು ಸಾಧಿಸಿತು.
ನಂತರದಲ್ಲಿ ಮತ್ತೆ ಕುಸಿತಕ್ಕೆ ಒಳಗಾಗಿದ್ದ ಸೆನ್ಸೆಕ್ಸ್ 3.00 ಗಂಟೆಯ ಆಸುಪಾಸಿನಲ್ಲಿ ಚೇತರಿಕೆ ಕಂಡಿತ್ತು. ಆದರೆ ದಿನದ ವಹಿವಾಟಿ ಅಂತ್ಯಕ್ಕೆ ಸೆನ್ಸೆಕ್ಸ್ ಸೂಚ್ಯಂಕವು 203.65 ಪಾಯಿಂಟ್ ಕುಸಿತದೊಂದಿಗೆ 37,114 ಅಂಕಗಳಲ್ಲಿ ಹಾಗು ನಿಪ್ಟಿ 77.10 ಅಂಕ ಕುಸಿತದೊಂದಿಗೆ ದಿನದ ವಹಿವಾಟು ಮುಗಿಸಿದವು.
ನಿನ್ನೆ ಮಂಗಳವಾರದ ವಹಿವಾಟಿನ ಅಂತ್ಯಕ್ಕೆ ಸೆನ್ಸೆಕ್ಸ್ ಸೂಚ್ಯಂಕ 227.71 ಅಂಕಗಳ ಮುನ್ನಡೆಯೊಂದಿಗೆ 37,318.53 ಪಾಯಿಂಟ್ ಗಳಲ್ಲಿ ಕೊನೆಗೊಂಡಿತ್ತು. ನಿಫ್ಟಿ 73.85 ಅಂಕಗಳ ಏರಿಕೆಯೊಂದಿ 11,222.05 ಅಂಕಗಳ ಮಟ್ಟಕ್ಕೇರಿತ್ತು.
ಇಂದು ಬೆಳಿಗ್ಗೆ 10.50ರ ಸುಮಾರಿಗೆ ಸೆನ್ಸೆಕ್ಸ್ ಸೂಚ್ಯಂಕವು 196.91 ಪಾಯಿಂಟ್ ಏರಿಕೆಯೊಂದಿಗೆ 37,515.44 ಅಂಕಗಳಲ್ಲೂ ಹಾಗು ರಾಷ್ಟ್ರೀಯ ಷೇರುಪೇಟೆ ನಿಫ್ಟಿ ಸೂಚ್ಯಂಕ 52.30 ಅಂಕಗಳ ಏರಿಕೆಯೊಂದಿಗೆ 11,274.30 ಅಂಕಗಳಲ್ಲಿ ವಹಿವಾಟು ನಡೆಸಿದ್ದವು.
ಯೆಸ್ ಬ್ಯಾಂಕ್, ಟಾಟಾ ಮೋಟರ್ಸ್, ಝೀ ಎಂಟರ್ಟೈನ್ಮೆಂಟ್, ಜೆಎಸ್ಡಬ್ಲ್ಯೂ ಸ್ಟೀಲ್ ಮತ್ತು ಇಂಡಸ್ ಲ್ಯಾಂಡ್ ಬ್ಯಾಂಕ್ ನಿಫ್ಟಿಯಲ್ಲಿ ನಷ್ಟ ಅನುಭವಿಸಿದವು. ಬಜಾಜ್ ಫೈನಾನ್ಸ್, ಐಶರ್ ಮೋಟಾರ್ಸ್, ಯುಪಿಎಲ್, ಐಓಸಿ ಮತ್ತು ಬಜಾಜ್ ಫಿನ್ ಸರ್ವ್ ಕಂಪನಿಗಳು ಲಾಭ ಗಳಿಸಿದವು.
ಡಾಲರ್ ಎದುರು ರೂಪಾಯಿ ಮೌಲ್ಯ 18 ಪೈಸೆಗಳ ಏರಿಕೆಯೊಂದಿಗೆ ರೂ. 70.26 ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications