ಆರೋಗ್ಯ ವಿಮಾದಾರರಿಗೆ ಸಿಹಿಸುದ್ದಿ
ಭಾರತೀಯ ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (IRDAI) ವಿಮಾದಾರರಿಗೆ ಅನುಕೂಲಕರವಾಗುವ ಮಾರ್ಗಸೂಚಿ ಜಾರಿಗೊಳಿಸಲು ಮುಂದಾಗಿದ್ದು, ಇದರಿಂದ ವಿಮೆದಾರರಿಗೆ ಪ್ರಯೋಜನವಾಗಲಿದೆ.
ಭಾರತೀಯ ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (IRDAI) ವಿಮಾದಾರರಿಗೆ ಅನುಕೂಲಕರವಾಗುವ ಮಾರ್ಗಸೂಚಿ ಜಾರಿಗೊಳಿಸಲು ಮುಂದಾಗಿದ್ದು, ಇದರಿಂದ ವಿಮೆದಾರರಿಗೆ ಪ್ರಯೋಜನವಾಗಲಿದೆ.
ಅನಾರೋಗ್ಯದ ತುರ್ತು ಸಂದರ್ಭಗಳಲ್ಲಿ ನೆರವು ಪಡೆಯುವುದಕ್ಕಾಗಿ ಆರೋಗ್ಯ ವಿಮೆಗಳನ್ನು ಮಾಡಿಸಲಾಗುತ್ತದೆ. ಆದರೆ ಕೆಲವೊಮ್ಮೆ ವಿಮೆ ಕ್ಲೈಮ್ ಮಾಡುವ ಸಂದರ್ಭದಲ್ಲಿ ವಿಮೆ ವ್ಯಾಪ್ತಿಗೆ ಒಳಪಡುವುದಿಲ್ಲ ಎಂದು ಕಂಪನಿಗಳು ವಿಮೆ ಪರಿಹಾರ ನೀಡುವುದಿಲ್ಲ.
ವಂಶಪಾರಂಪರ್ಯವಾಗಿ ಬರುವ ರೋಗಗಳ ಕಾರಣಕ್ಕಾಗಿ ವಿಮೆ ಪರಿಹಾರ ನೀಡಲು ಕೆಲವೊಮ್ಮೆ ವಿಮೆ ಕಂಪನಿಗಳು ನಿರಾಕರಿಸುತ್ತವೆ. ವಿಮಾದಾರರು ಎದುರಿಸುವ ಇಂತಹ ಸಮಸ್ಯೆಗಳನ್ನು ನಿವಾರಿಸಲು ಮಾನಸಿಕ ಸಮಸ್ಯೆ, ಅನುವಂಶೀಯ ಕಾಯಿಲೆ, ನರ ಸಂಬಂಧಿ ಕಾಯಿಲೆ, ಮಾನಸಿಕ ಕಾಯಿಲೆಗಳನ್ನು ಆರೋಗ್ಯ ವಿಮೆ ವ್ಯಾಪ್ತಿಗೆ ತರಲು ಭಾರತೀಯ ವಿಮಾ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (Irdai) ಮುಂದಾಗಿದೆ.
ಆರೋಗ್ಯ ವಿಮೆ ನಿಯಮಗಳಲ್ಲಿ ಸುಧಾರಣೆ ತರುವ ಉದ್ದೇಶದಿಂದ ಸಮಿತಿ ರಚಿಸಲಾಗಿದ್ದು, ಈ ಸಮಿತಿ ಶಿಫಾರಸುಗಳನ್ನು ಪರಾಮರ್ಶಿಸಿ ಆರೋಗ್ಯ ವಿಮೆ ವ್ಯಾಪ್ತಿಗೆ ಹೊಸ ಅಂಶ ಸೇರಿಸಿಕೊಳ್ಳಲು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗಿದೆ.
ಮಾನಸಿಕ ಅನಾರೋಗ್ಯ ಒತ್ತಡ, ಖಿನ್ನತೆ ಮೊದಲಾದ ಸಮಸ್ಯೆಗಳಿಗೆ ಸಂಬಂಧಿಸಿದ ಚಿಕಿತ್ಸೆ ಆರೋಗ್ಯ ವಿಮಾ ಪಾಲಿಸಿಯಲ್ಲಿ ತರಲು ನಿರ್ಧರಿಸಲಾಗಿದೆ ಎಂದು ಹೇಳಲಾಗಿದೆ.