ಲೋಕಸಭಾ ಚುನಾವಣಾ ಮತಗಟ್ಟೆ ಸಮೀಕ್ಷೆಗಳು ದೇಶಿ ಷೇರುಪೇಟೆ ಮೇಲೆ ಭಾರೀ ಪ್ರಭಾವವನ್ನೇ ಬೀರಿದ್ದು, ಬಿಎಸ್ಇ, ಎನ್ಎಸ್ಇಯಲ್ಲಿ ಗೂಳಿ ಅಬ್ಬರ ಜೋರಾಗಿದೆ.
ಲೋಕಸಭಾ ಚುನಾವಣಾ ಮತಗಟ್ಟೆ ಸಮೀಕ್ಷೆಗಳು ದೇಶಿ ಷೇರುಪೇಟೆ ಮೇಲೆ ಭಾರೀ ಪ್ರಭಾವವನ್ನೇ ಬೀರಿದ್ದು, ಬಿಎಸ್ಇ, ಎನ್ಎಸ್ಇಯಲ್ಲಿ ಗೂಳಿ ಅಬ್ಬರ ಜೋರಾಗಿದೆ.

ಲೋಕಸಭಾ ಚುನಾವಣೆಯ ಎನ್ಡಿಎ ಪರ ಮತಗಟ್ಟೆ ಸಮೀಕ್ಷೆ ಫಲಿತಾಂಶ ಮುಂಬೈ ಷೇರು ಪೇಟೆಯಲ್ಲಿ ಮಂಗಳವಾರವೂ ಮುಂದುವರಿದಿದ್ದು ಹೂಡಿಕೆದಾರರು ಭಾರೀ ಲಾಭ ಗಳಿಕೆಯ ಉತ್ಸಾಹದಲ್ಲಿದ್ದಾರೆ.
ಮಂಗಳವಾರದ ಆರಂಭಿಕ ವಹಿವಾಟಿನಲ್ಲಿ ಸೆನ್ಸೆಕ್ಸ್ ಸೂಚ್ಯಂಕವು 200ಕ್ಕೂ ಅಧಿಕ ಅಂಕಗಳ ಜಿಗಿತ ಸಾಧಿಸಿ 39,565.82 ಅಂಶಗಳ ಹೊಸ ದಾಖಲೆಯ ಎತ್ತರದ ಮಟ್ಟವನ್ನು ತಲುಪಿದೆ.
ನಿನ್ನೆ ವಹಿವಾಟಿನ ಅಂತ್ಯಕ್ಕೆ ಸೆನ್ಸೆಕ್ಸ್ ಸೂಚ್ಯಂಕ ಗರಿಷ್ಠ ದಾಖಲೆಯ 1,421.90 ಪಾಯಿಂಟ್ ಜಿಗಿತ ಕಂಡಿತ್ತು. ಜೊತೆಗೆ ನಿಫ್ಟಿ ಸೂಚ್ಯಂಕ 421 ಪಾಯಿಂಟ್ ಏರಿಕೆಯನ್ನು ದಾಖಲಿಸಿತ್ತು.
ಇಂದು ಬೆಳಗ್ಗೆ 11.10 ರ ಸುಮಾರಿಗೆ ಸೆನ್ಸೆಕ್ಸ್ ಸೂಚ್ಯಂಕವು 105 ಪಾಯಿಂಟ್ ಮುನ್ನಡೆ ಕಾಯ್ದುಕೊಂಡು 39,459 ಅಂಕಗಳಲ್ಲೂ, ರಾಷ್ಟ್ರೀಯ ಷೇರುಪೇಟೆಯ ನಿಫ್ಟಿ ಸೂಚ್ಯಂಕ 21.55 ಅಂಗಕಳ ಏರಿಕೆಯೊಂದಿಗೆ 11,849.80 ಅಂಕಗಳ ಮಟ್ಟದಲ್ಲೂ ವ್ಯವಹಾರ ನಿರತವಾಗಿದ್ದವು.
ಮಂಗಳವಾರದ ಆರಂಭಿಕ ವಹಿವಾಟಿನಲ್ಲಿ ಎಚ್ಡಿಎಫ್ಸಿ, ಬಜಾಜ್ ಫೈನಾನ್ಸ್, ಕೋಲ್ ಇಂಡಿಯಾ, ಆರ್ಐಎಲ್, ಬಜಾಜ ಆಟೋ, ಎಚ್ಯುಎಲ್, ಇಂಡಸ್ ಲ್ಯಾಂಡ್ ಬ್ಯಾಂಕ್, ಸನ್ ಫಾರ್ಮಾ, ವೇದಾಂತ, ಎಕ್ಸಿಸ್ ಬ್ಯಾಂಕ್ ಮತ್ತು ಏಶ್ಯನ್ ಪೇಂಟ್ ಷೇರುಗಳು ಶೇ.2.21ರ ಏರಿಕೆಯನ್ನು ದಾಖಲಿಸಿದವು.
ಇಂದಿನ ಆರಂಭಿಕ ವಹಿವಾಟಿನಲ್ಲಿ ಡಾಲರ್ ಎದುರು ರೂಪಾಯಿ ಸಲ್ಪ ಮುನ್ನಡೆ ದಾಖಲಿಸಿ ರೂ. 69.71 ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.
ನಿನ್ನೆಯ ದಿನದ ವಹಿವಾಟಿನ ಅಂತ್ಯಕ್ಕೆ ಎಕ್ಸಿಟ್ ಪೋಲ್ ಫಲಿತಾಂಶದಿಂದಾಗಿ ಸೆನ್ಸೆಕ್ಸ್ ಸೂಚ್ಯಂಕ 1422 ಪಾಯಿಂಟ್ ಏರಿಕೆ ಕಂಡಿದ್ದರೆ, ಡಾಲರ್ ಎದುರು ರೂಪಾಯಿ ಮೌಲ್ಯ 79 ಪೈಸೆ ಏರಿಕೆ ದಾಖಲಿಸಿತ್ತು. ಇದರಿಂದ ಹೂಡಿಕೆದಾರರು ರೂ. 5.33 ಲಕ್ಷ ಕೋಟಿ ಲಾಭ ಗಳಿಸಿದ್ದರು.
More From GoodReturns

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ



Click it and Unblock the Notifications