ಲೋಕಸಭಾ ಚುನಾವಣಾ ಮತ ಎಣಿಕೆ ನಡೆಯುತ್ತಿದ್ದು, ಎನ್ಡಿಎ ಮುನ್ನಡೆಯನ್ನು ಕಾಯ್ದುಕೊಂಡಿರುವುದು ಷೇರುಪೇಟೆಯ ಮೇಲೆ ಸಕರಾತ್ಮಕ ಪ್ರಭಾವ ಬೀರಿದೆ.
ಲೋಕಸಭಾ ಚುನಾವಣಾ ಮತ ಎಣಿಕೆ ನಡೆಯುತ್ತಿದ್ದು, ಎನ್ಡಿಎ ಮುನ್ನಡೆಯನ್ನು ಕಾಯ್ದುಕೊಂಡಿರುವುದು ಷೇರುಪೇಟೆಯ ಮೇಲೆ ಸಕರಾತ್ಮಕ ಪ್ರಭಾವ ಬೀರಿದೆ. ಲೋಕಸಭಾ ಚುನಾವಣಾ ಮತ ಎಣಿಕೆ ಇಂದು 8 ಗಂಟೆಗೆ ಆರಂಭಗೊಂಡಿದ್ದು, ಬಿಜೆಪಿ ಮುನ್ನಡೆ ಸಾಧಿಸಿರುವ ಹಿನ್ನೆಲೆಯಲ್ಲಿ ಭಾರತದ ಷೇರುಪೇಟೆ ದೊಡ್ಡ ಲಾಭದೊಂದಿಗೆ ಆರಂಭ ಕಂಡಿದೆ.
ಸೋಮವಾರದಂದು ಬಿಎಸ್ಇ ಸೆನ್ಸೆಕ್ಸ್ ಸೂಚ್ಯಂಕವು 1,421.90 ಪಾಯಿಂಟ್ ಗಳ ಜಿಗಿತದೊಂದಿಗೆ ದಿನದ ವಹಿವಾಟನ್ನು ಮುಗಿಸಿ, ನಂತರದ ದಿನಗಳಲ್ಲಿ ಮತ್ತೆ ಕುಸಿತ ಕಂಡಿತ್ತು. ಆದರೆ ಮತ ಎಣಿಕೆಯ ದಿನವಾದ ಇಂದು ಭಾರೀ ಏರಿಕೆ ಸಾದಿಸಿ ಮುನ್ನಡೆಯುತ್ತಿದೆ. ನಿನ್ನೆ ಬುಧವಾರದ ವಹಿವಾಟಿನ ಅಂತ್ಯಕ್ಕೆ ಸೆನ್ಸೆಕ್ 140.41 ಅಂಕಗಳ ಹಾಗು ನಿಫ್ಟಿ 28.80 ಪಾಯಿಂಟ್ ಏರಿಕೆಯೊಂದಿಗೆ 11,737.90 ಅಂಕಗಳಲ್ಲಿ ವ್ಯವಹಾರ ಕೊನೆಗೊಳಿಸಿದ್ದವು.
ಸೆನ್ಸೆಕ್ಸ್ 848 ಪಾಯಿಂಟ್ ಏರಿಕೆ
ಇಂದು ಗುರುವಾರದ ಆರಂಭಿಕ ವಹಿವಾಟಿನಲ್ಲಿ ಎನ್ಡಿಎ ಮುನ್ನಡೆ ಕಾಯ್ದುಕೊಂಡಿರುವುದು ಸೆನ್ಸೆಕ್ಸ್ ಭಾರೀ ಏರಿಕೆ ದಾಖಲಿಸಿದೆ. ಬೆಳಿಗ್ಗೆ ಸುಮಾರು 10.25 ಗಂಟೆಗೆ ಮುಂಬೈ ಷೇರುಪೇಟೆ ಸೆನ್ಸೆಕ್ಸ್ ಸೂಚ್ಯಂಕವು 848 ಪಾಯಿಂಟ್ ಏರಿಕೆಯೊಂದಿಗೆ 39958 ಅಂಶಗಳಲ್ಲಿ ಹಾಗು ಎನ್ಎಸ್ಇ ನಿಫ್ಟಿ ಸೂಚ್ಯಂಕವು 247 ಪಾಯಿಂಟ್ ಗಳೊಂದಿಗೆ 11987 ಅಂಕಗಳಲ್ಲಿ ವಹಿವಾಟು ನಿರತವಾಗಿದ್ದವು.
ಲಾಭದಲ್ಲಿ ಬ್ಯಾಂಕಿಂಗ್ ಷೇರುಗಳು
ಬ್ಯಾಂಕಿಂಗ್ ಷೇರುಗಳ ಲಾಭದಲ್ಲಿ ಸಾಗುತ್ತಿದ್ದು, ನಿಫ್ಟಿ ಬ್ಯಾಂಕ್ ಸೂಚ್ಯಂಕವು ಶೇ. 2ಕ್ಕಿಂತ ಏರಿಕೆ ಸಾಧಿಸಿದೆ. ಇಂಡಸ್ ಲ್ಯಾಮಡ್ ಬ್ಯಾಂಕ್ ಮತ್ತು ಬ್ಯಾಂಕ್ ಆಫ್ ಬರೋಡಾ ಶೇ. 6 ರಷ್ಟು ಏರಿಕೆ ಕಂಡಿವೆ. ಎಸ್ಬಿಐ, ಪಿಎನ್ಬಿ, ಯೆಸ್ ಬ್ಯಾಂಕ್ ಮತ್ತು ಐಸಿಐಸಿಐ ಬ್ಯಾಂಕ್ ಶೇ. 3 ರಿಂದ 4ರಷ್ಟು ಏರಿವೆ.
ರೂಪಾಯಿ ಮೌಲ್ಯ
ಹಿಂದಿನ ದಿನದ ವಹಿವಾಟಿನಲ್ಲಿ (ರೂ. 69.67) ಡಾಲರ್ ಎದುರಿಗೆ ರೂಪಾಯಿ ಮೌಲ್ಯದಲ್ಲಿ 21 ಪೈಸೆ ಏರಿಕೆ ಕಂಡು 69.45 ರೂಪಾಯಿಗಳಿಗೆ ತಲುಪಿದೆ.
ಬಾಂಡ್ ಬೆಲೆ ಇಳುವರಿಯು ಧನಾತ್ಮಕ ದಿಕ್ಕಿನಲ್ಲಿ ಚಲಿಸಿದ್ದು, ಬಾಂಡ್ ಬೆಲೆ ಶೇ. 7.26ರಷ್ಟು ಏರಿದೆ.
ಕಳೆದ ಮೂರು ಲೋಕಸಭೆ ಚುನಾವಣೆಗಳ ಫಲಿತಾಂಶದ ಸಂದರ್ಭಗಳಲ್ಲೂ ಭಾರತೀಯ ಷೇರು ಮಾರುಕಟ್ಟೆಗಳು ದೊಡ್ಡ ಪ್ರಮಾಣದಲ್ಲಿ ಏರಿಕೆ ಸಾಧಿಸಿರುವುದನ್ನು ಇಲ್ಲಿ ಸ್ಮರಿಸಬಹುದು. ಬಿಎಸ್ಇ ಮಿಡ್ಕ್ಯಾಪ್ ಮತ್ತು ಸ್ಮಾಲ್ ಕ್ಯಾಪ್ ಸೂಚ್ಯಂಕಗಳು ಶೇ. 1ಕ್ಕಿಂತ ಹೆಚ್ಚು ಏರಿಕೆ ಕಂಡಿವೆ.
More From GoodReturns

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Stock Market Crash: ಯುದ್ಧದ ಎಫೆಕ್ಟ್, ಷೇರು ಮಾರುಕಟ್ಟೆ ಕುಸಿತ; ಒಂದೇ ದಿನದಲ್ಲಿ 9 ಲಕ್ಷ ಕೋಟಿ ನಷ್ಟ!

Stock Market Crash: ಮಧ್ಯಪ್ರಾಚ್ಯದ ಸಂಘರ್ಷ, ಷೇರು ಮಾರುಕಟ್ಟೆ ಅಲ್ಲೋಲ ಕಲ್ಲೋಲ! ಸೆನ್ಸೆಕ್ಸ್ 2000 ಪಾಯಿಂಟ್ಸ್ ಕುಸಿತ

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ



Click it and Unblock the Notifications