ಸೋಮವಾರದ ವಹಿವಾಟಿನ ಅಂತ್ಯಕ್ಕೆ ಎನ್ಎಸ್ಇ ನಿಫ್ಟಿ ಸೂಚ್ಯಂಕವು 11,900 ಮಟ್ಟಕ್ಕಿಂತ ಹೆಚ್ಚು ಅಂಕಗಳಲ್ಲಿ ಕೊನೆಗೊಂಡಿತ್ತು.
ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಬಹುಮತದಲ್ಲಿ ಗೆದ್ದಿರುವುದು ಷೇರುಪೇಟೆ ಮೇಲೆ ಸಕರಾತ್ಮಕ ಪ್ರಭಾವ ಬೀರಿದೆ. ಹೂಡಿಕೆದಾರರ ಉತ್ಸುಕತೆಯಿಂದಾಗಿ ಬಿಎಸ್ಇ ಸೆನ್ಸೆಕ್ಸ್ ಮತ್ತು ಎನ್ಎಸ್ಇ ನಿಫ್ಟಿ ಸೂಚ್ಯಂಕಗಳು ದಾಖಲೆಗಳಲ್ಲಿ ದಿನದ ವಹಿವಾಟನ್ನು ಮುಗಿಸಿವೆ.
ಸೋಮವಾರದ ವಹಿವಾಟಿನ ಅಂತ್ಯಕ್ಕೆ ಎನ್ಎಸ್ಇ ನಿಫ್ಟಿ ಸೂಚ್ಯಂಕವು 11,900 ಮಟ್ಟಕ್ಕಿಂತ ಹೆಚ್ಚು ಅಂಕಗಳಲ್ಲಿ ಕೊನೆಗೊಂಡಿತ್ತು. ಮುಂಬೈ ಷೇರು ಪೇಟೆಯ ಸೆನ್ಸೆಕ್ಸ್ ಸೂಚ್ಯಂಕ 248 ಅಂಕಗಳ ಏರಿಕೆಯೊಂದಿಗೆ 39,686ರ ಮಟ್ಟದಲ್ಲೂ ಹಾಗು ನಿಫ್ಟಿ ಸೂಚ್ಯಂಕವು 80.70 ಅಂಕಗಳೊಂದಿಗೆ 11924.80 ಅಂಶಗಳಲ್ಲಿ ದಿನದ ವಹಿವಾಟು ಮುಗಿಸಿದ್ದವು.

ಸುಮಾರು 1782 ಷೇರುಗಳು ಮುಂದುವರಿದವು, 797 ಷೇರುಗಳು ಕುಸಿದವು ಮತ್ತು 160 ಷೇರುಗಳು ಯಥಾಸ್ಥಿತಿಯಲ್ಲಿದ್ದವು. ನಿಫ್ಟಿಯಲ್ಲಿ ಟಾಟಾ ಸ್ಟೀಲ್, ಯೆಸ್ ಬ್ಯಾಂಕ್, ಎನ್ಟಿಪಿಸಿ, ಐಓಸಿ ಮತ್ತು ಎಲ್ ಮತ್ತು ಟಿ ಷೇರುಗಳು ಏರಿಕೆ ಕಂಡಿವೆ. ಝೀ ಎಂಟರ್ಟೈನ್ಮೆಂಟ್, ಇಂಡಸ್ ಲ್ಯಾಂಡ್ ಬ್ಯಾಂಕ್, ರಿಲಯನ್ಸ್ ಇಂಡಸ್ಟ್ರೀಸ್, ಟೆಕ್ ಮಹೀಂದ್ರಾ ಮತ್ತು ಭಾರ್ತಿ ಏರ್ಟೆಲ್ ಪ್ರಮುಖವಾಗಿ ನಷ್ಟ ಅನುಭವಿಸಿವೆ.
ಇಂದಿನ ಆರಂಭಿಕ ವಹಿವಾಟಿನಲ್ಲಿ 100ಕ್ಕೂ ಅಧಿಕ ಪಾಯಿಂಟ್ ಜಿಗಿತವನ್ನು ದಾಖಲಿಸಿತು. ಎನ್ಎಸ್ಇ ನಿಫ್ಟಿ ಸೂಚ್ಯಂಕ 11,900 ಅಂಕಗಳ ಸನಿಹಕ್ಕೆ ತಲುಪಿತ್ತು. ಇಂದಿನ ಆರಂಭಿಕ ವಹಿವಾಟಿನಲ್ಲಿ ಡಾಲರ್ ಎದುರು ರೂಪಾಯಿ 19 ಪೈಸೆಗಳ ಜಿಗಿತ ದಾಖಲಿಸಿ ರೂ. 69.34 ಮಟ್ಟದಲ್ಲಿ ವ್ಯವಹಾರ ನಿರತವಾಗಿತ್ತು.
ನರೇಂದ್ರ ಮೋದಿ ನೇತೃತ್ವದಲ್ಲಿ ಬಹುಮತದೊಂದಿಗೆ ಬಿಜೆಪಿ ಅಧಿಕಾರಕ್ಕೆ ಬಂದಿರುವ ಹಿನ್ನೆಲೆಯಲ್ಲಿ ವಿದೇಶೀ ಬಂಡವಾಳದ ಒಳಹರಿವು ನಿರಂತರವಾಗಿರುವುದು ಷೇರುಪೇಟೆಯ ಸತತ ಮುನ್ನಡೆಗೆ ಕಾರಣವೆಂದು ಹೇಳಲಾಗಿದೆ.
ಬೆಳಗ್ಗಿನ ವಹಿವಾಟಿನ ಸಂದರ್ಭದಲ್ಲಿ ಯೆಸ್ ಬ್ಯಾಂಕ್, ಎನ್ಟಿಪಿಸಿ, ಟಾಟಾ ಸ್ಟೀಲ್, ಸಿಪ್ಲಾ, ಲಾರ್ಸನ್; ಟಾಪ್ ಲಾಭ ಕಂಡರೆ, ಟೆಕ್ ಮಹೀಂದ್ರ, ಝೀ ಎಂಟರಟೇನ್ಮೆಂಟ್, ಭಾರ್ತಿ ಏರ್ಟೆಲ್, ಜೆಎಸ್ಡಬ್ಲ್ಯು ಸ್ಟೀಲ್, ಇಂಡಸ್ ಲ್ಯಾಂಡ್ ಬ್ಯಾಂಕ್ ನಷ್ಟ ಅನುಭವಿಸಿದವು.
More From GoodReturns

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications