ಮಾರ್ಚ್ 31ಕ್ಕೆ ಕೊನೆಗೊಂಡ ಹಣಕಾಸು ವರ್ಷದಲ್ಲಿ ಭಾರತ ವಿದೇಶಿ ನೇರ ಬಂಡವಾಳ ಹೂಡಿಕೆ (ಎಫ್ಡಿಐ) ಪ್ರಮಾಣ ಕಳೆದ 6 ವರ್ಷಗಳಲ್ಲಿಯೇ ಮೊದಲ ಬಾರಿಗೆ ಕುಸಿತ ಕಂಡಿದೆ.
ಮಾರ್ಚ್ 31ಕ್ಕೆ ಕೊನೆಗೊಂಡ ಹಣಕಾಸು ವರ್ಷದಲ್ಲಿ ಭಾರತ ವಿದೇಶಿ ನೇರ ಬಂಡವಾಳ ಹೂಡಿಕೆ (ಎಫ್ಡಿಐ) ಪ್ರಮಾಣ ಕಳೆದ 6 ವರ್ಷಗಳಲ್ಲಿಯೇ ಮೊದಲ ಬಾರಿಗೆ ಕುಸಿತ ಕಂಡಿದೆ.

ಗುರುವಾರ ನರೇಂದ್ರ ಮೋದಿಯವರು ಎರಡನೇ ಅವಧಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಲಿದ್ದು, ಸರ್ಕಾರ ಎದುರಿಸುತ್ತಿರುವ ಆರ್ಥಿಕ ನೀತಿ ಸವಾಲುಗಳನ್ನು ಒತ್ತಿ ಹೇಳಿದೆ.
ದೂರಸಂಪರ್ಕ, ಔಷಧ, ವಿದ್ಯುತ್ ಕ್ಷೇತ್ರಕ್ಕೆ ವಿದೇಶಿ ನೇರ ಬಂಡವಾಳ ಹೂಡಿಕೆಯ ಪ್ರಮಾಣ ಗಣನೀಯವಾಗಿ ಕುಸಿದಿದೆ. ಇದಕ್ಕೆ ಸಂಬಂಧಿಸಿದಂತೆ ಕೇಂದ್ರ ಸರಕಾರ ಅಂಕಿ ಅಂಶಗಳನ್ನು ಪ್ರಕಟಿಸಿದ್ದು, 2018-19ರಲ್ಲಿ 44.4 ಶತಕೋಟಿ ಡಾಲರ್ (ರೂ. 3.10 ಲಕ್ಷ ಕೋಟಿ) ವಿದೇಶಿ ನೇರ ಬಂಡವಾಳ ಹೂಡಿಕೆ ಹರಿದು ಬಂದಿದೆ.
2017-18ರಲ್ಲಿ 44.8 ಶತಕೋಟಿ ಡಾಲರ್( ರೂ. 3.13 ಲಕ್ಷ ಕೋಟಿ) ಹೂಡಿಕೆ ಹರಿದು ಬಂದಿತ್ತು. ದೂರಸಂಪರ್ಕ ವಲಯದ ಎಫ್ಡಿಐ ಶೇ. 56ರಷ್ಟು ಇಳಿದಿದೆ. ಔಷಧ ವಲಯ ಶೇ.74 ರಷ್ಟು ( 266 ದಶಲಕ್ಷ ಡಾಲರ್) ಕುಸಿದಿದೆ.
ದೇಶೀಯ ಸೂಚಕಗಳು ಈಗಾಗಲೇ ಅನುಬೋಗ ಮತ್ತು ಹೂಡಿಕೆಯ ಚಟುವಟಿಕೆಯ ಕುಸಿತದ ಬಗ್ಗೆ ಗಮನ ಸೆಳೆಯುವ ಸಮಯದಲ್ಲಿ ಎಫ್ಡಿಐ ಒಳಹರಿವು ಕುಸಿದಿದೆ. ಡಿಸೆಂಬರ್ ನಲ್ಲಿ ಕೊನೆಗೊಂಡ ತ್ರೈಮಾಸಿಕದಲ್ಲಿ ಭಾರತದ ಆರ್ಥಿಕತೆಯು ಶೇ. 6.6% ರಷ್ಟು ನಿಧಾನಗತಿಯ ವೇಗದಲ್ಲಿ ಬೆಳೆಯಿತು.
ಅತಿ ಹೆಚ್ಚು ವಿದೇಶಿ ನೇರ ಬಂಡವಾಳ ಸಿಂಗಾಪುರದಿಂದ ದೊರಕಿದ್ದು, ಮಾರಿಷಸ್ ಎರಡನೇ ಸ್ಥಾನದಲ್ಲಿದೆ. ಸಿಂಗಾಪುರದಿಂದ ರೂ. 1.13 ಲಕ್ಷ ಕೋಟಿ ಹಾಗೂ ಮಾರಿಷಸ್ನಿಂದ ರೂ. 57,510 ಕೋಟಿ ಡಾಲರ್ ಲಭಿಸಿದೆ. ಕಂಪ್ಯೂಟರ್ ಸಾಫ್ಟ್ವೇರ್ ಮತ್ತು ಹಾರ್ಡ್ವೇರ್ ವಲಯಕ್ಕೆ 6.41 ಶತಕೋಟಿ ಡಾಲರ್, ವಾಣಿಜ್ಯ ಚಟುವಟಿಕೆಗಳಿಗೆ 4.46 ಶತಕೋಟಿ ಡಾಲರ್, ಆಟೊಮೊಬೈಲ್ಗೆ 2.62 ಶತಕೋಟಿ ಡಾಲರ್ ಎಫ್ಡಿಐ ದೊರೆತಿದೆ.
More From GoodReturns

ICC T20 World Cup: ವಿಶ್ವಕಪ್ ಗೆದ್ದ ಭಾರತಕ್ಕೆ ಬಿಸಿಸಿಐನಿಂದ ಗುಡ್ ನ್ಯೂಸ್; 131 ಕೋಟಿ ಬಹುಮಾನ ಘೋಷಣೆ

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ



Click it and Unblock the Notifications