ಬೆಳೆ ಸಾಲಗಳನ್ನು ವರ್ಗಿಕರಿಸುವಲ್ಲಿ ಬ್ಯಾಂಕುಗಳು ಮಾಡಿದ ತಪ್ಪುಗಳಿಂದಾಗಿ ಸಾವಿರಾರು ರೈತರ ಸಾಲಮನ್ನಾ ಪೂರ್ಣಗೊಳಿಸುವ ಪ್ರಕ್ರಿಯೆ ಹಿನ್ನೆಡೆಗೆ ಕಾರಣವಾಗಿದೆ.
ಬೆಳೆ ಸಾಲಗಳನ್ನು ವರ್ಗಿಕರಿಸುವಲ್ಲಿ ಬ್ಯಾಂಕುಗಳು ಮಾಡಿದ ತಪ್ಪುಗಳಿಂದಾಗಿ ಸಾವಿರಾರು ರೈತರ ಸಾಲ ಮನ್ನಾ ಪೂರ್ಣಗೊಳಿಸುವ ಪ್ರಕ್ರಿಯೆ ಹಿನ್ನೆಡೆಗೆ ಕಾರಣವಾಗಿದೆ. ಮೈತ್ರಿ ಸರ್ಕಾರವು ರೈತರ ಸಾಲಮನ್ನಾ ಯೋಜನಾ ಪ್ರಕ್ರಿಯೆ ಸರಾಗವಾಗಿ ನಡೆಸುತ್ತಿದೆ ಎಂದು ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿಯವರ ಸ್ಪಷ್ಟಪಡಿಸಿದ್ದಾರೆ.
ಲೋಕಸಭಾ ಚುನಾವಣೆ ಮುಗಿದ ಬಳಿಕ ರೈತರ ಸಾಲಮನ್ನಾ ಯೋಜನೆಯ ಭಾಗವಾಗಿ ಸಾವಿರಾರು ರೈತರ ಖಾತೆಯಿಂದ ಹಣ ಹಿಂಪಡೆಯಲಾಗಿದೆ ಎಂಬ ವರದಿಗಳು ಮಾದ್ಯಮಗಳಲ್ಲಿ ಪ್ರಕಟವಾಗಿದ್ದವು. ಇದಕ್ಕೆ ಸಂಬಂಧಿಸಿದಂತೆ ಕುಮಾರಸ್ವಾಮಿಯವರು ಸ್ಪಷ್ಟನೆ ನೀಡಿದ್ದಾರೆ.
ಒಂದೇ ಕಂತಿನಲ್ಲಿ ಹಣ ಬಿಡುಗಡೆ
ವಾಣಿಜ್ಯ ಬ್ಯಾಂಕುಗಳಿಂದ ರೈತರು ಪಡೆದಿರುವ ಬೆಳೆ ಸಾಲವನ್ನು ಒಂದೇ ಕಂತಿನಲ್ಲಿ ಬಿಡುಗಡೆ ಮಾಡಿ ಸಾಲಮನ್ನಾ ಮಾಡುವಂತೆ ಸರ್ಕಾರ ಆದೇಶಿಸಿದೆ.
ವಾಣಿಜ್ಯ ಬ್ಯಾಂಕು ಗಳಿಂದ ಪಡೆದಿರುವ ಬೆಳೆ ಸಾಲ ಮನ್ನಾ ಸಂಬಂಧಿಸಿದಂತೆ ಅರ್ಹತೆ ಹೊಂದಿರುವ ರಿಸ್ಟ್ರಕ್ಚರ್ಡ್ ಸಾಲ, ಅರ್ಹತೆ ಹೊಂದಿರುವ ಓವರ್ ಡ್ಯೂ ಸಾಲ ಹಾಗೂ ಪ್ರೋತ್ಸಾಹ ಧನ ಸಾಲಗಳಿಗೆ ಸಂಬಂಧಿಸಿದಂತೆ ಈಗಾಗಲೇ ಬಿಡುಗಡೆಯಾದ ಮೊತ್ತವನ್ನು ಕಡಿತಗೊಳಿಸಿ, ಉಳಿದ ಸಂಪೂರ್ಣ ಮೊತ್ತವನ್ನು ಒಂದೇ ಕಂತಿನಲ್ಲಿ ರೈತರ ಖಾತೆಗೆ ಬಿಡುಗಡೆ ಮಾಡಲು ಅನುಮೋದನೆ ನೀಡಿ ಸರ್ಕಾರ ಆದೇಶ ಹೊರಡಿಸಿದೆ.
ವಸೂಲಾಗದ ಸಾಲ (ಎನ್ಪಿಎ) ಮತ್ತು ದಿನಾಂಕ 1-1-2018 ರಿಂದ ಬಡ್ಡಿ ಮೊತ್ತ ಪಾವತಿಸುವ ಬಗ್ಗೆ ಪ್ರತ್ಯೇಕವಾಗಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸರ್ಕಾರವು ಆದೇಶದಲ್ಲಿ ಹೇಳಿದೆ.
ಚುನಾವಣೆ ಸಂದರ್ಭ ಸಾಲಮನ್ನಾ ಸದ್ದು
ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಸಾಲಮನ್ನಾ ಸಾಕಷ್ಟು ಸದ್ದು ಮಾಡಿತ್ತು. ಆದರೆ ಫಲಿತಾಂಶ ಘೋಷಣೆಯಾದ ಬಳಿಕ ರೈತರ ಖಾತೆಗೆ ಜಮೆಯಾದ ಸಾಲ ಮನ್ನಾದ ಹಣವು ಸದ್ದಿಲ್ಲದೇ ಸರಕಾರಕ್ಕೆ ವಾಪಸ್ ಹೋಗಿರುವುದು ರೈತರನ್ನು ದಂಗಾಗಿಸಿದೆ. ಸಾಲ ಮನ್ನಾ ಯೋಜನೆಯಡಿ ರೈತರ ಖಾತೆಗೆ ಜಮೆಯಾದ ಹಣ ವಾಪಸ್ ಹೋಗಿರುವುದು ಬೆಳಕಿಗೆ ಬಂದಿದೆ.
ಹಣ ವಾಪಸ್, ರೈತರಿಗೆ ಶಾಕ್
ಶಹಾಪುರ ತಾಲೂಕಿನ ಸಗರ ಗ್ರಾಮದಲ್ಲಿನ ಎಸ್ಬಿಐ ಖಾತೆಗೆ ಶಿವಪ್ಪ ಕಾವಲಿ ಅವರ ಖಾತೆಗೆ ಜ. 29 ರಂದು ರೂ. 50 ಸಾವಿರ ಹಾಗೂ ಏ. 17ರಂದು ರೂ. 44,926 ಜಮಾ ಮಾಡಲಾಗಿತ್ತು. ಮೇ 23ರಂದು ಬ್ಯಾಂಕಿಗೆ ಹೋಗಿ ಖಾತೆ ಪರಿಶೀಲನೆ ನಡೆಸಿದ ವೇಳೆ ಹಣ ವಾಪಸ್ ಹೋಗಿರುವುದು ಗೊತ್ತಾಗಿದೆ. ಈ ಗ್ರಾಮದಲ್ಲಿರುವ ಶಾಖೆಯಲ್ಲಿ ಸುಮಾರು 200ಕ್ಕೂ ಅಧಿಕ ರೈತರ ಹಣ ವಾಪಸ್ಸು ಹೋಗಿರುವುದು ತಿಳಿದು ಬಂದಿದೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications