ಭಾರತದ ನಿಜವಾದ ಜಿಡಿಪಿ ದರ ಎಷ್ಟು? ಅರವಿಂದ್ ಸುಬ್ರಹ್ಮಣಿಯನ್ ಹೇಳಿದ್ದೇನು?
ಕೇಂದ್ರ ಸರ್ಕಾರ 2019 ರ ಜೂನ್ 11 ರಂದು ದೇಶದ ಒಟ್ಟು ಆಂತರಿಕೆ ಉತ್ಪಾದನೆ (ಜಿಡಿಪಿ) ಮರು ಅಂದಾಜನ್ನು ದೃಢವಾಗಿ ಸಮರ್ಥಿಸಿಕೊಂಡಿದ್ದು, ಅಂತರಾಷ್ಟ್ರೀಯ ಹಣಕಾಸು ನಿಧಿ ಮತ್ತು ವಿಶ್ವ ಬ್ಯಾಂಕ್ ಇವೆರಡೂ ಮೌಲ್ಯೀಕರಿಸಿದ ಸಂಖ್ಯಾಶಾಸ್ತ್ರೀಯ ಮಾನದಂಡ.
ಕೇಂದ್ರ ಸರ್ಕಾರ 2019 ರ ಜೂನ್ 11 ರಂದು ದೇಶದ ಒಟ್ಟು ಆಂತರಿಕೆ ಉತ್ಪಾದನೆ (ಜಿಡಿಪಿ) ಮರು ಅಂದಾಜನ್ನು ದೃಢವಾಗಿ ಸಮರ್ಥಿಸಿಕೊಂಡಿದ್ದು, ಅಂತರಾಷ್ಟ್ರೀಯ ಹಣಕಾಸು ನಿಧಿ ಮತ್ತು ವಿಶ್ವ ಬ್ಯಾಂಕ್ ಇವೆರಡೂ ಮೌಲ್ಯೀಕರಿಸಿದ ಸಂಖ್ಯಾಶಾಸ್ತ್ರೀಯ ಮಾನದಂಡಗಳ ಆಧಾರದಲ್ಲೇ ಜಿಡಿಪಿ ಲೆಕ್ಕಹಾಕಲಾಗಿದೆ ಎಂದು ಸರಕಾರ ಸ್ಪಷ್ಟಪಡಿಸಿದೆ.

ದೇಶದ ಜಿಡಿಪಿಯ ಲೆಕ್ಕಾಚಾರದಲ್ಲಿ ಸರಿಯಾದ ವಿಧಾನವನ್ನು ಅನುಸರಿಸಲಾಗಿಲ್ಲ ಎಂಬ ಮಾಜಿ ಮುಖ್ಯ ಆರ್ಥಿಕ ಸಲಹೆಗಾರ ಅರವಿಂದ್ ಸುಬ್ರಹ್ಮಣಿಯನ್ ಹೇಳಿದ್ದರು. ಜಿಡಿಪಿ ಬೆಳವಣಿಗೆಯನ್ನು ಅತಿಶಯವಾಗಿ ಪ್ರಸ್ತುತಪಡಿಸಲಾಗಿದ್ದು, ಸರಿಯಾದ ವಿಧಾನದಲ್ಲಿ ಮಾಪನ ಮಾಡಲಾಗಿಲ್ಲ ಎಂದು ಅರವಿಂದ್ ಸುಬ್ರಹ್ಮಣಿಯನ್ ಹೇಳಿಕೆ ನೀಡಿದ್ದರು.
ಅರವಿಂದ್ ಸುಬ್ರಹ್ಮಣಿಯನ್ ಹೇಳಿಕೆಗೆ ಪ್ರತಿಕ್ರಿಯಿಸಿರುವ ಅಂಕಿ ಅಂಶ ಹಾಗೂ ಕಾರ್ಯಕ್ರಮ ಅನುಷ್ಠಾನ ಸಚಿವಾಲಯವು ತಾನು ಬಿಡುಗಡೆ ಮಾಡಿದ ಜಿಡಿಪಿ ಅಂದಾಜು ಸೂಕ್ತ ವಿಧಾನದ ಆಧಾರಿತವಾಗಿದೆ ಎಂದಿದೆ. ವಿವಿಧ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಸಂಸ್ಥೆಗಳ ಅಂದಾಜಿನ ಆಸುಪಾಸಿನಲ್ಲೇ ಜಿಡಿಪಿ ಬೆಳವಣಿಗೆ ದರವನ್ನು ಅಂದಾಜಿಸಿದೆ ಎಂದು ಸ್ಪಷ್ಟಪಡಿಸಿದ್ದು, ಜಿಡಿಪಿ ಮರು ಅಂದಾಜಿನ ಕುರಿತು ಅರವಿಂದ್ ಸುಬ್ರಹ್ಮಣ್ಯನ್ ಮಾಡಿದ ಟೀಕೆಗಳನ್ನು ತಳ್ಳಿಹಾಕಿದೆ.
2011-12 ಮತ್ತು 2016-17ರ ನಡುವೆ ಜಿಡಿಪಿ ದರವನ್ನು ಶೇ 2.5 ರಷ್ಟು ಕಡಿತಗೊಳಿಸಿರುವುದು ಬದಲಾದ ಮಾನದಂಡಗಳ ಪರಿಣಾಮವಾಗಿದೆ ಎಂದು ಅರವಿಂದ್ ಸುಬ್ರಹ್ಮಣ್ಯನ್ ಹೇಳಿದ್ದರು. ಈ ಅವಧಿಯಲ್ಲಿ ದೇಶದ ಜಿಡಿಪಿ ದರ 4.5 ರಷ್ಟು ಇರಬೇಕಿತ್ತು. ಆದರೆ ಸರಕಾರ ಜಿಡಿಪಿ ದರ ಶೇ. 7ರಷ್ಟಿದೆ ಎಂದು ಅಂದಾಜಿಸಿದೆ ಎಂದು ಸುಬ್ರಹ್ಮಣ್ಯನ್ ಹೇಳಿದ್ದರು.
ನರೇಂದ್ರ ಮೋದಿ ನೇತೃತ್ವದ ಹಿಂದಿನ ಸರ್ಕಾರದ ಅವಧಿಯಲ್ಲಿ ಜಿಡಿಪಿ ಲೆಕ್ಕ ಹಾಕುವುದನ್ನು ಪರಿಷ್ಕರಿಸಲಾಗತ್ತು.
More From GoodReturns

ದಿನವೂ 500 ರೂ. ಖರ್ಚು ಮಾಡ್ತಿದ್ದೀರಾ? ನಿಮ್ಮ ಭವಿಷ್ಯದ ಲಕ್ಷಗಳನ್ನು ನೀವೇ ಕಳೆದುಕೊಳ್ಳುತ್ತಿದ್ದೀರಾ!

Karnataka BPL Card: ಬಿಪಿಎಲ್ ಕಾರ್ಡ್ದಾರರಿಗೆ ಬಿಗ್ ಶಾಕ್! ಸರ್ಕಾರದ ಮಹತ್ವದ ಕ್ರಮ

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ



Click it and Unblock the Notifications