ದೇಶದಲ್ಲಿ ಕಳೆದ 45 ವರ್ಷಗಳಲ್ಲಿಯೇ ನಿರುದ್ಯೋಗದ ಪ್ರಮಾಣ ಗರಿಷ್ಠ ಮಟ್ಟದಲ್ಲಿದ್ದರೂ, ಸಂಘಟಿತ ವಲಯದಲ್ಲಿ ಉದ್ಯೋಗ ಪಡೆಯುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ.
ದೇಶದಲ್ಲಿ ಕಳೆದ 45 ವರ್ಷಗಳಲ್ಲಿಯೇ ನಿರುದ್ಯೋಗದ ಪ್ರಮಾಣ ಗರಿಷ್ಠ ಮಟ್ಟದಲ್ಲಿದ್ದರೂ, ಸಂಘಟಿತ ವಲಯದಲ್ಲಿ ಉದ್ಯೋಗ ಪಡೆಯುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಕಳೆದ ಮೂರು ವರ್ಷಗಳಲ್ಲಿ ಕೈಗೊಂಡ ಸುಧಾರಣೆಗಳು ಮತ್ತು ಉಪಕ್ರಮಗಳಿಂದಾಗಿ 2015-2018ರ ನಡುವಿನ ಅವಧಿಯಲ್ಲಿ 70 ಲಕ್ಷಕ್ಕೂ ಹೆಚ್ಚಿನ ಉದ್ಯೋಗಗಳನ್ನು ಸೃಷ್ಟಿಸಲಾಗಿದೆ ಎಂದು ಇಂಡಿಯನ್ ಸ್ಟಾಫಿಂಗ್ ಫೆಡರೇಷನ್ ಮತ್ತು ಸಂಶೋಧನಾ ಸಂಸ್ಥೆ ಐಎಂಆರ್ಬಿ ಕಾಂಟಾರ್ ತನ್ನ ವರದಿಯಲ್ಲಿ ತಿಳಿಸಿದೆ.

ಇಪಿಎಫ್ ಮತ್ತು ಇಎಸ್ಐ ಸುಧಾರಣೆ, ಜಿಎಸ್ಟಿ ಕಾಯಿದೆ ಹಾಗೂ ನೋಟು ರದ್ದತಿ ಪರಿಣಾಮದಿಂದ ಸಂಘಟಿತ ವಲಯದಲ್ಲಿ ಉದ್ಯೋಗ ಪಡೆಯುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ.
ಸಂಬಳದೊಂದಿಗೆ ಪಿಎಫ್, ಇಎಸ್ಐ, ವಿಮೆ ಇತ್ಯಾದಿ ಸೌಲಭ್ಯಗಳನ್ನು ಪಡೆಯುತ್ತಿರುವ ಉದ್ಯೋಗಿಗಳ ಸಂಖ್ಯೆ ಹೆಚ್ಚಳವಾಗಿದೆ. ಅಸಂಘಟಿತ ವಲಯದಲ್ಲಿ ಉದ್ಯೋಗಿಗಳಿಗೆ ಇಂಥ ಸೌಲಭ್ಯಗಳು ಸಿಗುವುದಿಲ್ಲ.
ಸಂಘಟಿತ ವಲಯದ ಉದ್ಯೋಗಾವಕಾಶಗಳ ಬಗ್ಗೆ
ಎನ್ಎಸ್ಎಸ್ಒ ಸಂಸ್ಥೆಯು (ನ್ಯಾಶನಲ್ ಸ್ಯಾಂಪಲ್ ಸರ್ವೇ ಸಂಸ್ಥೆ) ಇತ್ತೀಚಿನ ಅಂಕಿ ಅಂಶಗಳ ಅಧಾರಗಳೊಂದಿಗೆ ವರದಿಯನ್ನು ಸಿದ್ಧಪಡಿಸಿದ್ದು, 2015-2018ರ ಅವಧಿಯಲ್ಲಿ ಹಂಗಾಮಿ ಕಾರ್ಮಿಕರ ಸಂಖ್ಯೆ ಶೇ. 70 ರಿಂದ ಶೇ. 68ಕ್ಕೆ ಕುಸಿದಿದೆ. 70 ಲಕ್ಷಕ್ಕೂ ಹೆಚ್ಚು ಉದ್ಯೋಗಗಳು ಸಂಘಟಿತವಾಗಿವೆ. ಇ-ಕಾಮರ್ಸ್, ಉತ್ಪಾದನೆ ಮತ್ತು ಸರ್ಕಾರಿ ವಲಯಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಸಂಘಟಿತ ಉದ್ಯೋಗಗಳು ಸೃಷ್ಟಿಯಾಗಿವೆ ಎಂದು ವರದಿ ತಿಳಿಸಿದೆ. 2021ರ ವೇಳೆಗೆ ಹೆಚ್ಚುವರಿ 1.1 ಕೋಟಿ ಉದ್ಯೋಗಗಳು ಅಸಂಘಟಿತ ವಲಯದಿಂದ ಸಂಘಟಿತ ವಲಯಕ್ಕೆ ಪರಿವರ್ತನೆ ಹೊಂದಲಿವೆ ಎನ್ನಲಾಗಿದೆ.
More From GoodReturns

Bengaluru 2nd Airport: ಬೆಂಗಳೂರು 2ನೇ ವಿಮಾನ ನಿಲ್ದಾಣ ಯೋಜನೆಗೆ ಹೊಸ ಶಕ್ತಿ…ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ!

IPL 2026: ಕೊನೆಗೂ ಐಪಿಎಲ್ 2026ರ ಆರಂಭದ ದಿನಾಂಕ ಬಹಿರಂಗ! ಯಾವಾಗ ಗೊತ್ತಾ?

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

New Airport: ಕಲ್ಯಾಣ ಕರ್ನಾಟಕ ಜನರಿಗೆ ಗುಡ್ನ್ಯೂಸ್; ಈ ಭಾಗದಲ್ಲಿ ಹೊಸ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಚಿಂತನೆ

Hosur Airport: ಬೆಂಗಳೂರು ಹತ್ತಿರ ಹೊಸೂರು ಏರ್ಪೋರ್ಟ್ಗಾಗಿ 2,979 ಎಕರೆ ಭೂಸ್ವಾಧೀನ-ಎಲ್ಲೆಂದು ತಿಳಿಯಿರಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ



Click it and Unblock the Notifications