ದೇಶದ ಬೆಳವಣಿಗೆ ದರ ಕುಂಠಿತ: ಆರ್ಬಿಐ ಗವರ್ನರ್ ಶಕ್ತಿಕಾಂತ್ ದಾಸ್
ಭಾರತೀಯ ಆರ್ಥಿಕತೆ ಚಟುವಟಿಕೆಗಳು ಬೆಳವಣಿಗೆಯ ರಭಸವನ್ನು ಕಳೆದುಕೊಂಡಿದ್ದು, ವೃದ್ದಿ ದರ ನಿಧಾನಗೊಂಡಿರುವುದನ್ನು ಉತ್ತೇಜಿಸಲು ನಿರ್ಣಾಯಕ ವಿತ್ತೀಯ ನೀತಿಯ ಅಗತ್ಯವಿದೆ.
ಭಾರತೀಯ ಆರ್ಥಿಕ ಚಟುವಟಿಕೆಗಳು ಬೆಳವಣಿಗೆಯ ರಭಸವನ್ನು ಕಳೆದುಕೊಂಡಿದ್ದು, ವೃದ್ದಿ ದರ ನಿಧಾನಗೊಂಡಿರುವುದನ್ನು ಉತ್ತೇಜಿಸಲು ನಿರ್ಣಾಯಕ ವಿತ್ತೀಯ ನೀತಿಯ ಅಗತ್ಯವಿದೆ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಗವರ್ನರ್ ಶಕ್ತಿಕಾಂತ್ ದಾಸ್ ಹೇಳಿದ್ದಾರೆ.

ಜೂನ್ ತಿಂಗಳ ಆರಂಭದಲ್ಲಿ ನಡೆದ ಹಣಕಾಸು ನೀತಿ ಸಮಿತಿ (ಎಂಪಿಸಿ) ಸಭೆಯಲ್ಲಿ 25 ಬೇಸಿಸ್ ಪಾಯಿಂಟ್ (ಬಿಪಿಎಸ್) ದರ ಕಡಿತ ಮಾಡಲಾಯಿತು. ಎಂಪಿಸಿ ಸಭೆಯಲ್ಲಿ ಚರ್ಚಿಸಲಾದ ವಿಷಯಗಳನ್ನು ಬಹಿರಂಗಪಡಿಸಿರುವ ಶಕ್ತಿಕಾಂತ್ ದಾಸ್ ಅವರು, ದೇಶಿ ಆರ್ಥಿಕ ವೃದ್ದಿ ದರ (ಜಿಡಿಪಿ) ಕುಂಠಿತಗೊಂಡಿರುವುದನ್ನು ಒಪ್ಪಿಕೊಂಡಿದ್ದಾರೆ ಎನ್ನಲಾಗಿದೆ.
2012-2017ರ ಅವಧಿಯಲ್ಲಿ ದೇಶದ ಆರ್ಥಿಕ ಬೆಳವಣಿಗೆಯು ಶೇ. ೫ಕ್ಕಿಂತ ಕಡಿಮೆ ಮಟ್ಟಕ್ಕೆ ಕುಸಿದಿದೆ ಎಂದು ಸರ್ಕಾರದ ಮಾಜಿ ಆರ್ಥಿಕ ಸಲಹೆಗಾರರಾಗಿದ್ದ ಅರವಿಂದ್ ಸುಬ್ರಮಣಿಯನ್ ಹೇಳಿದ್ದರು.
ಕೇಂದ್ರ ಸರ್ಕಾರ ಇದನ್ನು ಸಂಪೂರ್ಣವಾಗಿ ತಿರಸ್ಕರಿಸಿದ ಬೆನ್ನಲ್ಲೇ ಶಕ್ತಿಕಾಂತ್ ದಾಸ್ ಅವರು ಈ ವಿಷಯ ಬಹಿರಂಗಗೊಳಿಸಿದ್ದಾರೆ. ಒಟ್ಟಾರೆ ದೇಶದ ಆರ್ಥಿಕ ಚಟುವಟಿಕೆಗಳು ತೀವ್ರತೆ ಕಳೆದುಕೊಂಡಿದ್ದು, ೨೦೧೮-೧೯ರ ಸಾಲಿನಲ್ಲಿ ೪ನೇ ತ್ರೈಮಾಸಿಕ ವೃದ್ದಿ ದರ ಶೇ. 5.8ಕ್ಕೆ ಕುಸಿದಿದೆ. ಈ ಅವಧಿಯಲ್ಲಿ ಬಂಡವಾಳ ಹೂಡಿಕೆ ಚಟುವಟಿಕೆಗಳು ಕೂಡ ಹೆಚ್ಚು ಕುಸಿತಕ್ಕೆ ಒಳಗಾಗಿವೆ ಎಂಬ ವಿಚಾರ ಹಂಚಿಕೊಂಡಿದ್ದಾರೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Bengaluru 2nd Airport: ಬೆಂಗಳೂರು 2ನೇ ಏರ್ಪೋರ್ಟ್ಗೆ ಇದೇ ಸ್ಥಳ ಬೆಸ್ಟ್; ಉದ್ಯಮಿ ಕೊಟ್ರು ಬಿಗ್ ಟ್ವಿಸ್ಟ್

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

Gold Price Bengaluru: ಆಭರಣ ಪ್ರಿಯರಿಗೆ ಗುಡ್ನ್ಯೂಸ್…ಚಿನ್ನದ ಬೆಲೆಯಲ್ಲಿ 19,600 ರೂ. ಕುಸಿತ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!



Click it and Unblock the Notifications