ಬ್ಯಾಂಕುಗಳಿಗೆ ಸಾಲ ಮರುಪಾವತಿಸುವವರ ಮಾಹಿತಿ ಒದಗಿಸಲು ತೆರಿಗೆ ಇಲಾಖೆಗೆ ಸೂಚನೆ
ಸಾರ್ವಜನಿಕ ಬ್ಯಾಂಕುಗಳಲ್ಲಿ ಸಾಲ ತೆಗೆದುಕೊಂಡು ಮರು ಪಾವತಿ ಮಾಡದೆ ಸುಸ್ತಿದಾರರಾಗಿರುವವರ ಆಸ್ತಿ ಹಾಗೂ ಬ್ಯಾಂಕ್ ಖಾತೆ ವಿವರಗಳನ್ನು ಹಂಚಿಕೊಳ್ಳುವಂತೆ ಸಿಬಿಡಿಟಿಯು ಆದಾಯ ತೆರಿಗೆ ಇಲಾಖೆಗೆ ನಿರ್ದೇಶಿಸಿದೆ.
ಸಾರ್ವಜನಿಕ ಬ್ಯಾಂಕುಗಳಲ್ಲಿ ಸಾಲ ತೆಗೆದುಕೊಂಡು ಮರು ಪಾವತಿ ಮಾಡದೆ ಸುಸ್ತಿದಾರರಾಗಿರುವವರ ಆಸ್ತಿ ಹಾಗೂ ಬ್ಯಾಂಕ್ ಖಾತೆ ವಿವರಗಳನ್ನು ಹಂಚಿಕೊಳ್ಳುವಂತೆ ಸಿಬಿಡಿಟಿಯು ಆದಾಯ ತೆರಿಗೆ ಇಲಾಖೆಗೆ ನಿರ್ದೇಶಿಸಿದೆ.
ದಾಯ ತೆರಗೆ ಇಲಾಖೆ ಪ್ರಕಾರ, ಸುಸ್ತಿ ಸಾಲ ಹೊಂದಿರುವವರ ವಿರುದ್ಧ ಕಾನೂನು ಕ್ರಮವನ್ನು ಕೈಗೊಂಡು ಸಾರ್ವಜನಿಕ ಹಣವನ್ನು ಮರು ವಸೂಲು ಮಾಡುವುದು ಇದರ ಉದ್ದೇಶವಾಗಿದೆ.
ಸುಸ್ತಿ ಸಾಲದಂಥ ಪ್ರಕರಣಗಳಲ್ಲಿ ಸಾರ್ವಜನಿಕ ಹಿತಾಸಕ್ತಿ ದೃಷ್ಟಿಯಿಂದ ಸಾಲಗಾರರ ಆಸ್ತಿ, ಆದಾಯ, ಖಾತೆಯ ವಿವರಗಳನ್ನು ಸಾರ್ವಜನಿಕ ಬ್ಯಾಂಕುಗಳು ಕೋರಿದಾಗ ಸಲ್ಲಿಸುವಂತೆ ಸಿಬಿಡಿಟಿಯು ಆದಾಯ ತೆರಿಗೆ ಇಲಾಖೆಗೆ ಸೂಚನೆ ನೀಡಿದೆ.
ಆದಾಯ ತೆರಿಗೆ ಇಲಾಖೆಯ ನೀತಿಗಳನ್ನು ರೂಪಿಸುವ ನೇರ ತೆರಿಗೆಗಳ ಕೇಂದ್ರೀಯ ಮಂಡಳಿ (ಸಿಬಿಡಿಟಿ) ಈ ಸಂಬಂಧಪಟ್ಟಂತೆ ಎಲ್ಲ ಕ್ಷೇತ್ರಾಧಿಕಾರಿಗಳಿಗೆ ಆದೇಶ ಹೊರಡಿಸಿದೆ. ಐಟಿ ಇಲಾಖೆಯ ಈ ನಿಯಮದಿಂದಾಗಿ ಬ್ಯಾಂಕುಗಳಿಗೆ ಸಾಲ ಮರು ವಸೂಲು ಮಾಡುವುದಕ್ಕೆ ಸುಲಭವಾಗುವ ನಿರೀಕ್ಷೆ ಇದೆ.
ದೇಶಬಿಟ್ಟು ಪರಾರಿಯಾಗಿರುವ ನೀರವ್ ಮೋದಿ, ವಿಜಯ್ ಮಲ್ಯ, ಮೆಹುಲ್ ಚೋಕ್ಸಿ ಯಂತಹ ಉದ್ಯಮಿಗಳು ಸಾರ್ವಜನಿಕ ಬ್ಯಾಂಕುಗಳಿಗೆ ವಂಚಿಸಿರುವ ಆರೋಪ ಎದುರಿಸುತ್ತಿದ್ದಾರೆ.