ಸುಮಾರು ಐದು ದಶಕಗಳಲ್ಲಿ ಭಾರತದ ಮೊದಲ ಮಹಿಳಾ ಹಣಕಾಸು ಮಂತ್ರಿಯಾಗಿ ನಿರ್ಮಲಾ ಸೀತಾರಾಮನ್ ನೇಮಕಗೊಂಡಿದ್ದು, ದುರ್ಬಲ ಆರ್ಥಿಕ ಬೆಳವಣಿಗೆ, ಹೆಚ್ಚುತ್ತಿರುವ ಜಾಗತಿಕ ಅಪಾಯಗಳ ಸಂದರ್ಭದಲ್ಲಿ ಆರ್ಥಿಕತೆ ಮುನ್ನಡೆಸಬೇಕಾದ ಮಹತ್ತರ ಜವಾಬ್ದಾರಿ ಇದೆ.
ಸುಮಾರು ಐದು ದಶಕಗಳಲ್ಲಿ ಭಾರತದ ಮೊದಲ ಮಹಿಳಾ ಹಣಕಾಸು ಮಂತ್ರಿಯಾಗಿ ನಿರ್ಮಲಾ ಸೀತಾರಾಮನ್ ನೇಮಕಗೊಂಡಿದ್ದು, ದುರ್ಬಲ ಆರ್ಥಿಕ ಬೆಳವಣಿಗೆ ಮತ್ತು ಹೆಚ್ಚುತ್ತಿರುವ ಜಾಗತಿಕ ಅಪಾಯಗಳ ಸಂದರ್ಭದಲ್ಲಿ ಆರ್ಥಿಕತೆಯನ್ನು ಮುನ್ನಡೆಸಬೇಕಾದ ಮಹತ್ತರ ಜವಾಬ್ದಾರಿ ಅವರ ಹೆಗಲ ಮೇಲಿದೆ.
ಅರುಣ್ ಜೇಟ್ಲಿಯವರು ಆರೋಗ್ಯದ ಸಮಸ್ಯೆಯಿಂದಾಗಿ ಹೊಸ ಸರ್ಕಾರದಲ್ಲಿ ಸಕ್ರಿಯ ಪಾತ್ರ ವಹಿಸದಿರಲು ನಿರ್ಧರಿಸಿರುವುದರಿಂದ ಪ್ರಧಾನಿ ನರೇಂದ್ರ ಮೋದಿ ಅವರು ನಿರ್ಮಲಾ ಸೀತಾರಾಮನ್ ರನ್ನು ಆಯ್ಕೆ ಮಾಡಿದ್ದಾರೆ. ಮಾಜಿ ರಕ್ಷಣಾ ಮತ್ತು ವ್ಯಾಪಾರ ಸಚಿವರಾಗಿದ್ದ ನಿರ್ಮಲಾ ಸೀತಾರಾಮನ್ ಅವರು ಇಂದಿರಾ ಗಾಂಧಿಯ ನಂತರ ಈ ಸ್ಥಾನವನ್ನು ಅಲಂಕರಿಸಿದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಅಪಾಯಗಳು ಹಲವಾರು
ನೂತನ ಹಣಕಾಸು ಮಂತ್ರಿಯಾಗಿರುವ ನಿರ್ಮಲಾ ಸೀತಾರಾಮನ್, ಹಲವಾರು ಅಪಾಯಗಳನ್ನು ಎದುರಿಸುತ್ತಿರುವ ಆರ್ಥಿಕತೆಯನ್ನು ಆನುವಂಶಿಕವಾಗಿ ಪಡೆದಿದ್ದಾರೆ. ದುರ್ಬಲ ದೇಶೀ ಅನುಬೋಗದ ಹಿನ್ನಲೆಯಲ್ಲಿ ಬೆಳವಣಿಗೆ ಕುಂಠಿತವಾಗುತ್ತಿದೆ. ಯುಎಸ್-ಚೀನಾ ವಾಣಿಜ್ಯ ಸಮರದ ಕಾರಣ ಜಾಗತಿಕ ಬೇಡಿಕೆ ಕ್ಷೀಣಿಸುತ್ತಿದೆ. ಒಟ್ಟು ದೇಶೀಯ ಉತ್ಪನ್ನ ಮತ್ತು ಬಜೆಟ್ ಕೊರತೆ ಸಂಬಾಳಿಸುವ ಗುರಿ ಇವರ ಮುಂದಿದೆ.
ಜಿಡಿಪಿ ಕುಂಠಿತ, ಉತ್ಪಾದನಾ ವಲಯದಲ್ಲಿನ ಕುಸಿತ, ಬ್ಯಾಂಕಿಂಗ್ ಕ್ಷೇತ್ರದ ಸಮಸ್ಯೆಗಳನ್ನು ಎದುರಿಸಿ ಆರ್ಥಿಕತೆಯನ್ನು ಮುನ್ನಡಸಲು ಲಭಿಸಿರುವ ಮೊದಲ ಅವಕಾಶ ಇದಾಗಿದೆ.
ಮೊದಲ ಅನುಭವ
59 ವರ್ಷದ ನಿರ್ಮಲಾ ಸೀತಾರಾಮನ್ ಅವರು 2014 ರಲ್ಲಿ ಮೋದಿಯವರ ಸಂಪುಟದಲ್ಲಿ ಸಚಿವರಾಗುವ ಮೊದಲು ಬಿಜೆಪಿಯ ಪ್ರಮುಖ ವಕ್ತಾರರಾಗಿ ಅನುಭವ ಹೊಂದಿದ್ದರು. ಅವರಿಗೆ ಜೇಟ್ಲಿಯ ನೇತೃತ್ವದಲ್ಲಿ ಹಣಕಾಸು ಸಚಿವಾಲಯದಲ್ಲಿ ಕಿರಿಯ ಸಚಿವರ ಜವಾಬ್ದಾರಿಯನ್ನು ನೀಡಲಾಯಿತು.
ಅರುಣ್ ಜೇಟ್ಲಿ ಮತ್ತು ಪಿ. ಚಿದಂಬರಂರಂತೆ ಇವರು ರಾಜಕೀಯ ಹಿಡಿತ ಹೊಂದಿಲ್ಲವಾದರೂ, ಮೋದಿ ತಂಡದ ಕಠಿಣ ಪರಿಶ್ರಮಿ ಸದಸ್ಯೆ ಎಂದು ಕರೆಯಲ್ಪಡುತ್ತಿದ್ದು, ಪ್ರಧಾನಿಯವರೊಂದಿಗೆ ಉತ್ತಮ ಬಾಂದವ್ಯ ಹೊಂದಿದ್ದಾರೆ.
ನಿರ್ಮಲಾ ಸೀತಾರಾಮನ್ ನೈಪುಣ್ಯತೆ
ಇತ್ತೀಚಿಗೆ ನಿರ್ಮಲಾ ಸೀತಾರಾಮನ್ ಸಾರ್ವತ್ರಿಕ ಚುನಾವಣೆಗಳಲ್ಲಿ ಸ್ಪರ್ಧಿಸಲಿಲ್ಲ. ಕರ್ನಾಟಕವನ್ನು ಪ್ರತಿನಿಧಿಸುವ ರಾಜ್ಯಸಭೆಯಲ್ಲಿ ಶಾಸಕರಾಗಿದ್ದಾರೆ. ಆದರೆ ಚುನಾವಣೆಯ ಸಮಯದಲ್ಲಿ ಪ್ರಮುಖ ಪ್ರಚಾರಕರಾಗಿದ್ದರು. ಹಿಂದಿನ ಸಚಿವಾಲಯಗಳಲ್ಲಿ ಅವರ ನಿರ್ವಹಣೆ ಆಕರ್ಷಕವಾಗಿತ್ತು. ಅವರಿಗೆ ಸಾಕಷ್ಟು ತಾಂತ್ರಿಕ, ವೃತ್ತಿಪರ ಜ್ಞಾನವಿದ್ದು, ಅವರ ಬತ್ತಳಿಕೆಯಲ್ಲಿ ತುಂಬಾ ಸಕಾರಾತ್ಮಕ ಅಂಶಗಳಿವೆ ಎಂದು ಮುಂಬೈನ ಯೆಸ್ ಬ್ಯಾಂಕ್ ಲಿಮಿಟೆಡ್ನ ಮುಖ್ಯ ಅರ್ಥಶಾಸ್ತ್ರಜ್ಞ ಶುಭದ ರಾವ್ ಹೇಳಿದ್ದಾರೆ.
More From GoodReturns

LPG Gas Helpline Number: ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ; ತುರ್ತು ಅಗತ್ಯಕ್ಕೆ ಇಲ್ಲಿದೆ ಸಹಾಯವಾಣಿ

Gold Rate Bengaluru: ಚಿನ್ನದ ಬೆಲೆಯಲ್ಲಿ ಜಿಗಿತ.. ಇಂದು 24K, 22K, 18K ಬೆಲೆ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ

Karnataka Weather: ಬಿಸಿಲಿನ ತಾಪಮಾನ ಇನ್ನಷ್ಟು ಹೆಚ್ಚಳ…ಕರ್ನಾಟಕದಲ್ಲಿ ಸದ್ಯಕ್ಕೆ ತಪ್ಪದು ಒಣಹವೆಯ ಕಾಟ!

Bengaluru Metro: ಗ್ರೀನ್ ಲೈನ್ ಮೆಟ್ರೋ ಪ್ರಯಾಣಿಕರಿಗೆ ಸಿಹಿಸುದ್ದಿ! ಮತ್ತೊಂದು ರೈಲಿನ ಆಗಮನ

Bengaluru Metro: ಬೆಂಗಳೂರು ಮೆಟ್ರೋ 3ನೇ ಹಂತ ಮತ್ತೆ ವಿಳಂಬ, ಯಾವ ವರ್ಷಕ್ಕೆ ಈ ಸೇವೆ ಸಿಗಲಿದೆ ತಿಳಿಯಿರಿ

ಮತ್ತೆ ಭಾರತ-ಪಾಕ್ ನಡುವೆ ಯುದ್ಧದ ಛಾಯೆ..ಭುಗಿಲೆದ್ದ 'ಸಿಂಧೂ ನದಿ' ವಿವಾದ, ಬಿಲಾವಲ್ ಭುಟ್ಟೋ ಕಿಡಿ

Bengaluru Traffic: ಗೊರಗುಂಟೆಪಾಳ್ಯ ಟ್ರಾಫಿಕ್ ಮುಕ್ತಿಗೆ ಸುರಂಗ ರಸ್ತೆ ಯೋಜನೆ? ಸರ್ಕಾರದ ಮಹತ್ವದ ಹೆಜ್ಜೆ

Gold Rate Today: ಮಧ್ಯಪ್ರಾಚ್ಯದಲ್ಲಿ ಸಂಘರ್ಷ; ಚಿನ್ನದ ಬೆಲೆ ಸ್ಥಿರ! ಎಷ್ಟಿದೆ ದರ?

Bengaluru to Pune: ಈ ಯೋಜನೆಯಿಂದ ಬೆಂಗಳೂರು-ಪುಣೆ ಪ್ರಯಾಣ 7 ಗಂಟೆ ಮಾತ್ರ...ಹೊಸ ಹೆದ್ದಾರಿ ಯೋಜನೆ ವಿವರ!

Karnataka Budget: ಏರಿಕೆಯಾಗುತ್ತಿರುವ ಸಾಲ, ಹೆಚ್ಚುತ್ತಿರುವ ವೆಚ್ಚ...ಬಜೆಟ್ನಲ್ಲಿ ಸಮತೋಲನ ಸಾಧಿಸುವುದು ಸಾಧ್ಯವೇ?

Sanju Samson: ಟಿ20 ವಿಶ್ವಕಪ್ ಫೈನಲ್ ಹೀರೋ ಸಂಜು ಸ್ಯಾಮ್ಸನ್ ಅವರ ಸಂಪೂರ್ಣ ಆಸ್ತಿ ವಿವರ ತಿಳಿಯಿರಿ



Click it and Unblock the Notifications